AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿ; ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಮ್ಮುಖದಲ್ಲಿ ಕೈ ಪಕ್ಷಕ್ಕೆ ಸೇರ್ಪಡೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಇತರ ನಾಯಕರ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್​ಗೆ ಸೇರ್ಪಡೆ ಆಗಲಿದ್ದಾರೆ.

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿ; ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಮ್ಮುಖದಲ್ಲಿ ಕೈ ಪಕ್ಷಕ್ಕೆ ಸೇರ್ಪಡೆ
ಮಧು ಬಂಗಾರಪ್ಪ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 27, 2021 | 4:34 PM

Share

ಹುಬ್ಬಳ್ಳಿ: ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರನೂ ಆಗಿರುವ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಜುಲೈ 30ರಂದು ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಜುಲೈ 30ರ ಬೆಳಗ್ಗೆ 9 ಗಂಟೆಗೆ ಹುಬ್ಬಳ್ಳಿಯಲ್ಲಿ ಮಧು ಬಂಗಾರಪ್ಪ ಕೈ ಪಾಳಯಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಹುಬ್ಬಳ್ಳಿಯ ಗೋಕುಲ್ ಗಾರ್ಡನ್​ನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಇತರ ನಾಯಕರ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್​ಗೆ ಸೇರ್ಪಡೆ ಆಗಲಿದ್ದಾರೆ. ಅಂದು ಕಾಂಗ್ರೆಸ್ ವಿಭಾಗೀಯ ಮಟ್ಟದ ಸಭೆ ಹಿನ್ನಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಇತ್ತೀಚೆಗಷ್ಟೇ ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ ಮಾಡಿದ್ದರು. ಕೊಪ್ಪಳದಲ್ಲಿ ಹೇಳಿಕೆ ನೀಡಿರುವ ಅವರು, ಬಿಜೆಪಿಯವರು ಕೇವಲ ವ್ಯವಹಾರಕ್ಕಾಗಿ ಮಾತ್ರ ಬರುತ್ತಾರೆ. ನಂತರ ಇಡೀ ದೇಶ ಲೂಟಿ ಮಾಡಿ, ಹಾಳು ಮಾಡಿ ಹೋಗುತ್ತಾರೆ. ಇದು ನಮ್ಮೆಲ್ಲರ ದುರಂತ ಎಂದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ವ್ಯವಹಾರ ಮಾಡಿದಾಗ ಅದು ಕುದುರದೇ ಹೋದರೆ ವ್ಯವಹಾರ ಬಿದ್ದುಹೋಗುತ್ತದೆ. ಬಿಜೆಪಿ ಸದ್ಯ ಅದೇ ಪರಿಸ್ಥಿತಿಯಲ್ಲಿದೆ. ಅವರ ವ್ಯವಹಾರ ಕುದುರದ ಕಾರಣ, ಸರ್ಕಾರ ಬಿದ್ದು ಹೋಗುವ ಹಂತದಲ್ಲಿದೆ ಎಂದು ಮಧು ಬಂಗಾರಪ್ಪ ವ್ಯಂಗ್ಯವಾಡಿದ್ದರು. ಸಾಮಾನ್ಯ ಜನರ ಸೇವೆ ಮಾಡುವುದು ಕಾಂಗ್ರೆಸ್ ಪಕ್ಷ. ಕರ್ನಾಟಕಕ್ಕೆ ಕಾಂಗ್ರೆಸ್ ಅವಶ್ಯಕತೆ ಇದೆ. ಯಾವಾಗ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷವೇ ಅಧಿಕಾರ ಸ್ಥಾಪಿಸಲಿದೆ ಎಂದು ಅವರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ‘ಬಿಜೆಪಿಯೆಂದರೆ ಬ್ಯುಸಿನೆಸ್ ಜನತಾ ಪಾರ್ಟಿ’: ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ

ಕೆಆರ್‌ಎಸ್‌ಗೆ ದೃಷ್ಟಿ ತಾಗಿದೆಯಂತೆ! ಜೆಡಿಎಸ್ ಶಾಸಕರಿಂದ ಇಂದು ದೃಷ್ಟಿ ದೋಷ ನಿವಾರಣಾ ಪೂಜೆ

(Madhu Bangarappa to join Congress Party Officially on July 30 at Hubballi)

Published On - 4:28 pm, Tue, 27 July 21

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ