AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Cabinet expansion: ಮಧುಗಿರಿ ಶಾಸಕ ಕೆಎನ್ ರಾಜಣ್ಣರಿಗೆ ಒಲಿದ ಸಚಿವ ಸ್ಥಾನ

ಮಧುಗಿರಿ ಕಾಂಗ್ರೆಸ್​ ಶಾಸಕರಾಗಿರುವ ಕೆಎನ್ ರಾಜಣ್ಣರಿಗೆ ಸಚಿವ ಸ್ಥಾನ ಒಲಿದಿದೆ. ಅದರಂತೆ ಇಂದು(ಮೇ.27) ಪ್ರಮಾಣ ವಚನ ಸ್ವೀಕರಿಸಿದರು. ಇವರ ರಾಜಕೀಯ, ಶಿಕ್ಷಣ ಕುರಿತು ಮಾಹಿತಿ ಇಲ್ಲಿದೆ.

Karnataka Cabinet expansion: ಮಧುಗಿರಿ ಶಾಸಕ ಕೆಎನ್ ರಾಜಣ್ಣರಿಗೆ ಒಲಿದ ಸಚಿವ ಸ್ಥಾನ
ಕೆ ಎನ್​ ರಾಜಣ್ಣ
ಕಿರಣ್ ಹನುಮಂತ್​ ಮಾದಾರ್
|

Updated on:May 27, 2023 | 1:21 PM

Share

ತುಮಕೂರು: ಮಧುಗಿರಿ ಕಾಂಗ್ರೆಸ್​ ಶಾಸಕರಾಗಿರುವ ಕೆಎನ್ ರಾಜಣ್ಣ(KN Rajanna)ರಿಗೆ ಸಚಿವ ಸ್ಥಾನ ಒಲಿದಿದೆ. ಅದರಂತೆ ಇಂದು(ಮೇ.27) ಪ್ರಮಾಣ ವಚನ ಸ್ವೀಕರಿಸಿದರು. ತುಮಕೂರು ತಾಲೂಕಿನ ಕ್ಯಾತಸಂದ್ರದಲ್ಲಿ 1951 ಏಪ್ರಿಲ್​ 13 ರಂದು ಜನಿಸಿದ ಇವರು ಬಿಎಸ್ಸಿ, ಎಲ್​ಎಲ್​ಬಿ ಮುಗಿಸಿದ್ದಾರೆ. ಬಳಿಕ ವಕೀಲ ವೃತ್ತಿ ಮಾಡುತ್ತ ಕೃಷಿಯಲ್ಲಿ ತೊಡಗಿಕೊಂಡರು. ನಂತರ ಶ್ರೀಮತಿ ಎಸ್​ ಆರ್​ ಶಾಂತಲಾ ಅವರನ್ನ ಮದುವೆಯಾದರು. ಇವರಿಗೆ ಇಬ್ಬರು ಪುತ್ರರು ಹಾಗೂ ಒಬ್ಬಳು ಮಗಳಿದ್ದಾಳೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ರಾಜಣ್ಣ, ಪ್ರಬಲ ಸಚಿವ ಆಕಾಂಕ್ಷಿಯಾಗಿದ್ದರು. ಕೊನೆಗೂ ಸಚಿವ ಸ್ಥಾನ ಪಡೆಯುವಲ್ಲಿ ಸಕ್ಸಸ್ ಆಗಿದ್ದಾರೆ. ಸಹಕಾರಿ ಖಾತೆಯ ಮೇಲೆ ಕಣ್ಣಿಟ್ಟಿರುವ ರಾಜಣ್ಣರಿಗೆ ಯಾವ ಖಾತೆ ಒಲಿಯಲಿದೆ ಎಂದು ಕಾದು ನೋಡಬೇಕಿದೆ.

ಮುಖ್ಯಮಂತ್ರಿ ಫೈಟ್​ನಲ್ಲಿ ಸಿದ್ದರಾಮಯ್ಯನವರಿಗೆ ಮತ ಹಾಕಿದ್ದೇನೆ ಎಂದು ಬಹಿರಂಗಪಡಿಸಿದ್ದ ಕೆಎನ್ ರಾಜಣ್ಣ!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದ ಕಾಂಗ್ರೆಸ್‌ಗೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರ ದೊಡ್ಡ ಕಗ್ಗಂಟಾಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಯಾರು ಸಿಎಂ ಆಗಬೇಕು ಎಂಬ ಪ್ರಶ್ನೆ ಎದ್ದಿತ್ತು, ಈ ಕಾರಣಕ್ಕೆ ತಡರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿತ್ತು. ಬೆಂಗಳೂರಿನ ಹೋಟೆಲ್‌ನಲ್ಲಿ ಭಾನುವಾರ(ಮೇ.15) ತಡರಾತ್ರಿ ಆರಂಭವಾದ ಸಭೆ ಮಧ್ಯರಾತ್ರಿ 1.30ರವರೆಗೆ ನಡೆದಿತ್ತು. ಇದರಲ್ಲಿ ಹೊಸದಾಗಿ ಆಯ್ಕೆಯಾದ ಎಲ್ಲಾ 135 ಶಾಸಕರು ಭಾಗವಹಿಸಿದ್ದರು. ಮುಂದಿನ ಸಿಎಂ ಯಾರಾಗಬೇಕು ಎಂದು ಗುಪ್ತ ಮತದಾನ ಮಾಡಿರುವ ಶಾಸಕರು ಸುಮ್ಮನಿದ್ದರೇ ಮಧುಗಿರಿ ಶಾಸಕ ಕೆಎನ್ ರಾಜಣ್ಣ ಮಾತ್ರ ತಾವು ಸಿದ್ದರಾಮಯ್ಯಗೆ ಬೆಂಬಲ ನೀಡಿರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ:ನೂತನ 24 ಸಚಿವರ ಪಟ್ಟಾಭೀಷೇಕಕ್ಕೆ ರಾಜಭವನ ಹೇಗೆ ಸಿದ್ಧವಾಗಿದೆ ನೋಡಿ

ಹೌದು ಮತದಾನ ನಡೆಯುತ್ತಿರುವಾಗ ಮತ ಚಲಾಯಿಸಿ ಬಂದ ಕೆಎನ್ ರಾಜಣ್ಣ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದು, “ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೆ. ಆದರೆ, ಯಾರು ಮತ ಚಲಾಯಿಸಿದ್ದಾರೋ ಗೊತ್ತಿಲ್ಲ. ಆದರೆ, ನನ್ನ ಮತ ನಾನು ಸಿದ್ದರಾಮಯ್ಯ ಅವರಿಗೆ ಹಾಕಿದ್ದೇನೆ. ಹೆಚ್ಚು ಶಾಸಕರು ಸಿದ್ದರಾಮಯ್ಯ ಅವರಿಗೆ ಮತ ಹಾಕಿರುವ ಸಾಧ್ಯತೆಯಿದೆ ಎಂದು ಬಹಿರಂಗವಾಗಿ ಹೇಳಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆದರು. ಇದೀಗ ರಾಜಣ್ಣನಿಗೂ ಸಚಿವ ಸ್ಥಾನ ಸಿಕ್ಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:03 am, Sat, 27 May 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ