AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಗೆ ಮತ ನೀಡಿ, ಅಕ್ಷತೆಗಲ್ಲ ಎಂಬುದು ನಮ್ಮ ಉದ್ದೇಶ: ಹೇಳಿಕೆ ಸಮರ್ಥಿಸಿಕೊಂಡ ಹೆಚ್​​ಸಿ ಬಾಲಕೃಷ್ಣ

Magadi MLA HC Balakrishna: ಗ್ಯಾರಂಟಿ ವಿಚಾರವಾಗಿ ಬಾಲಕೃಷ್ಣ ನೀಡಿದ್ದ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿಕೆಯನ್ನು ಖಂಡಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಹ ಸ್ಪಷ್ಟನೆ ನೀಡಿ, ಗ್ಯಾರಂಟಿ ಐದು ವರ್ಷ ಮುಂದುವರಿಯಲಿವೆ ಎಂದು ಹೇಳಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಬಾಲಕೃಷ್ಣ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಗ್ಯಾರಂಟಿಗೆ ಮತ ನೀಡಿ, ಅಕ್ಷತೆಗಲ್ಲ ಎಂಬುದು ನಮ್ಮ ಉದ್ದೇಶ: ಹೇಳಿಕೆ ಸಮರ್ಥಿಸಿಕೊಂಡ ಹೆಚ್​​ಸಿ ಬಾಲಕೃಷ್ಣ
ಹೆಚ್​​ಸಿ ಬಾಲಕೃಷ್ಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Jan 31, 2024 | 2:08 PM

Share

ಮಾಗಡಿ, ಜನವರಿ 31: ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳಿಗೆ ಮತ ನೀಡಬೇಕೇ ಹೊರತು ಬಿಜೆಪಿಯವರ ಅಕ್ಷತೆಗಲ್ಲ ಎಂಬುದಷ್ಟೇ ನಮ್ಮ ಉದ್ದೇಶ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್​ಸಿ ಬಾಲಕೃಷ್ಣ (HC Balakrishna) ಹೇಳಿದ್ದಾರೆ. ಈ ಮೂಲಕ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ಹೆಚ್ಚು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಾಗಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮತ ಹಾಕಲೇಬೇಕು, ಗ್ಯಾರಂಟಿ ಯೋಜನೆ ರದ್ದುಮಾಡಿಯೇ ಬಿಡುತ್ತೇವೆ ಎಂದು ಹೇಳಿಲ್ಲ. ನಮ್ಮದು ಬ್ಲ್ಯಾಕ್​​ಮೇಲ್ ಸಂಸ್ಕೃತಿ ಅಲ್ಲ. ನಾವು ಕೆಲಸ ಮಾಡಿದ್ದೇವೆ, ನಮಗೆ ಮತ ನೀಡಿ ಎಂದು ಕೇಳುತ್ತಿದ್ದೇವಷ್ಟೆ ಎಂದರು.

ನಾವು ವಾಸ್ತವಾಂಶವನ್ನು ಜನರ ಮುಂದೆ ಇಡುತ್ತಿದ್ದೇವೆ. ನಮ್ಮ ವಿರೋಧಿಗಳು ವಿರೋಧಿಸುತ್ತಿದ್ದಾರೆ. ಅವರು ವಿರೋಧ ಮಾಡಲಿ. ಹಿಂದೆ ಜನಧನ್ ಖಾತೆ ಮಾಡಿ ಏನಾಯ್ತು? ಕಳ್ಳರನ್ನು ಹಿಡಿಯುತ್ತೇವೆ, ಸ್ವಿಸ್ ಬ್ಯಾಂಕಿನ ಹಣ ತಂದು ಹದನೈದು ಲಕ್ಷ ಬ್ಯಾಂಕ್ ಖಾತೆಗೆ ಹಾಕುತ್ತೇವೆ ಎಂದಿದ್ದರು. ಹಾಕಿದರಾ? ಅವರು ಹೇಳಿಯೂ ಮಾಡುವುದಿಲ್ಲ. ನಾವು ಹೇಳಿದ್ದನ್ನು ಮಾಡಿದ್ದೇವೆ, ಅದಕ್ಕೆ ಮತ ಕೊಡಿ ಎಂದು ಕೇಳಿದ್ದೇವೆ ಎಂದು ಬಾಲಕೃಷ್ಣ ಹೇಳಿದ್ದಾರೆ.

ಗ್ಯಾರಂಟಿ ರದ್ದು ಕುರಿತು ನೀಡಿದ ಹೇಳಿಕೆ ನನ್ನ ವೈಯಕ್ತಿಕ ವಿಚಾರ. ಆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಗ್ಯಾರಂಟಿ ವಿಚಾರವಾಗಿ ಮುಖ್ಯಮಂತ್ರಿ ಬಳಿ ಚರ್ಚೆ ಮಾಡುತ್ತೇನೆ. ಅದರ ಮೂಲಕ 60 ಸಾವಿರ ಕೋಟಿ ರೂಪಾಯಿ ನಾವು ಜನಗಳಿಗೆ ಕೊಟ್ಟಿದ್ದೇವೆ. ಗ್ಯಾರಂಟಿ ನಿಲ್ಲಸಿಬಿಟ್ಟರೆ ಸಿಗುವ ಹಣದಲ್ಲಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಮಾಡಬಹುದು. ಗ್ಯಾರಂಟಿ ರೂಪದಲ್ಲಿ ಅಷ್ಟೆಲ್ಲಾ ಕೊಟ್ಟೂ ಕೂಡ ಅಭಿವೃದ್ಧಿ ಕಾಮಾಗಾರಿ ಮಾಡುತ್ತಾ ಇದ್ದೇವೆ ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೂ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಪ್ರಸ್ತಾಪ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಯಾಕೆ ಮತ ನೀಡುತ್ತೀರಿ? ದೇವಸ್ಥಾನ ಕಟ್ಟಿದ್ದಕ್ಕೆ ಮತ ನೀಡುತ್ತೀರಾ ಎಂದು ಅವರು ಪ್ರಶ್ನಿಸಿದ್ದಾರೆ. ಬಿಜೆಪಿಯವರಿಗೆ ಬೆಂಬಲ ನೀಡುವ ಬದಲು ನಮಗೆ ಶಕ್ತಿ ತುಂಬಿದರೆ ಇನ್ನೂ ಹಲವಾರ ಯೋಜನೆಗಳನ್ನು ಕೊಡುತ್ತೇವೆ ಎಂದು ಬಾಲಕೃಷ್ಣ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಮತ ಹಾಕದಿದ್ದರೆ ಗ್ಯಾರಂಟಿಗಳು ರದ್ದು: ಮಾಗಡಿ ಶಾಸಕ ಬಾಲಕೃಷ್ಣ ಎಚ್ಚರಿಕೆಗೆ ವಿಜಯೇಂದ್ರ ತಿರುಗೇಟು

ಗ್ಯಾರಂಟಿ ವಿಚಾರವಾಗಿ ಬಾಲಕೃಷ್ಣ ಮಂಗಳವಾರ ಶ್ರೀಗಿರಿಪುರದಲ್ಲಿ ನೀಡಿದ್ದ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ ಹಾಗೂ ಇತರ ಅನೇಕ ನಾಯಕರು ಬಾಲಕೃಷ್ಣ ಹೇಳಿಕೆಯನ್ನು ಖಂಡಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಹ ಸ್ಪಷ್ಟನೆ ನೀಡಿದ್ದು, ಗ್ಯಾರಂಟಿ ಯೋಜನೆಗಳು ಐದು ವರ್ಷ ಮುಂದುವರಿಯಲಿವೆ ಎಂದು ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬಾಲಕೃಷ್ಣ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು