AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Political Crisis ಮತ್ತಷ್ಟು ಬಂಡಾಯ ಶಾಸಕರ ಅನರ್ಹತೆಗೆ ಮುಂದಾದ ಶಿವಸೇನಾ, ಶಿಂಧೆ ಬಣಕ್ಕೆ 44 ಶಾಸಕರ ಬೆಂಬಲ

ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿವಸೇನಾದ ಬಂಡಾಯ ಶಾಸಕರು ಗುರುವಾರ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರಿಗೆ ಪತ್ರವೊಂದನ್ನು ಕಳುಹಿಸಿದ್ದು, ಏಕನಾಥ್ ಶಿಂಧೆ ಅವರು ಶಾಸಕಾಂಗದಲ್ಲಿ ತಮ್ಮ ಗುಂಪಿನ ನಾಯಕರಾಗಿ ಉಳಿಯಲಿದ್ದಾರೆ ಎಂದು ತಿಳಿಸಿದ್ದಾರೆ

Maharashtra Political Crisis ಮತ್ತಷ್ಟು ಬಂಡಾಯ ಶಾಸಕರ ಅನರ್ಹತೆಗೆ ಮುಂದಾದ ಶಿವಸೇನಾ, ಶಿಂಧೆ ಬಣಕ್ಕೆ 44 ಶಾಸಕರ ಬೆಂಬಲ
ಬಂಡಾಯ ಶಾಸಕರೊಂದಿಗೆ ಏಕನಾಥ್ ಶಿಂಧೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 24, 2022 | 2:00 PM

Share

ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಎಂವಿಎ ಸರ್ಕಾರ ಎದುರಿಸುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಶಿವಸೇನಾ ಬಣವು(Shiv Sena) ಏಕನಾಥ್ ಶಿಂಧೆ (Eknath Shinde) ಸೇರಿದಂತೆ 12 ಬಂಡಾಯ ಶಾಸಕರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ರಾಜ್ಯ ವಿಧಾನಸಭೆಯ ಉಪ ಸ್ಪೀಕರ್‌ಗೆ ಮನವಿ ಸಲ್ಲಿಸಿದೆ. ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗದೇ ಇರುವ ಶಾಸಕರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಠಾಕ್ರೆ ಬಣ ಮನವಿ ಮಾಡಿದ್ದು, ಇನ್ನೂ ನಾಲ್ಕು ಬಂಡಾಯ ಶಾಸಕರನ್ನು ಶಿವಸೇನಾ ಅನರ್ಹಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ. ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವಂತೆ ಶಿವಸೇನಾದ ಮುಖ್ಯ ಸಚೇತಕ ಸುನೀಲ್ ಪ್ರಭು ಅವರು ಪಕ್ಷದ ಶಾಸಕರಿಗೆ ಪತ್ರ ಬರೆದಿದ್ದರು. ಏತನ್ಮಧ್ಯೆ, ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿವಸೇನಾದ ಬಂಡಾಯ ಶಾಸಕರು ಗುರುವಾರ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರಿಗೆ ಪತ್ರವೊಂದನ್ನು ಕಳುಹಿಸಿದ್ದು, ಏಕನಾಥ್ ಶಿಂಧೆ ಅವರು ಶಾಸಕಾಂಗದಲ್ಲಿ ತಮ್ಮ ಗುಂಪಿನ ನಾಯಕರಾಗಿ ಉಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಸುನೀಲ್ ಪ್ರಭು ಬದಲಿಗೆ ಶಿವಸೇನಾ ಶಾಸಕ ಭರತ್ ಗೊಗವಾಲೆ ಅವರನ್ನು ಶಾಸಕಾಂಗ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಎಂದು ಅದು ತಿಳಿಸಿದೆ. ಎನ್ಐ ಸುದ್ದಿಸಂಸ್ಥೆ ಪ್ರಕಾರ ಶಿಂಧೆ ಅವರಿಗೆ ಈಗ ಒಟ್ಟು 44 ಶಾಸಕರ ಬೆಂಬಲವಿದ್ದು, ಇದರಲ್ಲಿ 37 ಶಿವಸೇನಾ ಮತ್ತು 7 ಪಕ್ಷೇತರ ಶಾಸಕರು ಇದ್ದಾರೆ.

ಸಾರ್ವಜನಿಕರ ಹಣದ ದುರುಪಯೋಗ ಇದು: ಮಹಾರಾಷ್ಟ್ರ ರಾಜ್ಯಪಾಲರಿಗೆ ಬಿಜೆಪಿ ಸಚಿವರ ಪತ್ರ

ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಪ್ರವೀಣ್ ದಾರೆಕರ್ ಅವರು ರಾಜ್ಯಪಾಲ ಬಿ.ಎಸ್.ಕೊಶ್ಯರಿ ಅವರಿಗೆ ಪತ್ರ ಬರೆದಿದ್ದು ಎಂವಿಎ ಸರ್ಕಾರವು ಕಳೆದ ಕೆಲವು ದಿನಗಳಿಂದ (ಶಿಂಧೆ ಅವರ ದಂಗೆಯನ್ನು ಪ್ರಾರಂಭಿಸಿದಾಗಿನಿಂದ) ನಿಧಿಗಳ ಹಂಚಿಕೆ ಮತ್ತು ವರ್ಗಾವಣೆಗಾಗಿ ತೆಗೆದುಕೊಂಡ ನಿರ್ಧಾರಗಳನ್ನು ತಡೆಹಿಡಿಯಲು ವಿನಂತಿಸಿದ್ದಾರೆ. ಸದ್ಯದ ಪರಿಸ್ಥಿತಿ ಮತ್ತು ಅಸ್ಥಿರತೆಯಲ್ಲಿ ಇದು ಸರಿಯಲ್ಲ. ಇದು ಸಾರ್ವಜನಿಕ ಹಣದ ದುರುಪಯೋಗ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
MVA Crisis: ವಿಶ್ವಾಸಮತ ಯಾಚನೆಗೆ ಮೈತ್ರಿ ಸರ್ಕಾರದ ಸಿದ್ಧತೆ, ಶರದ್ ಪವಾರ್ ಉರುಳಿಸುವ ದಾಳದ ಬಗ್ಗೆ ಕುತೂಹಲ
Image
Maharashtra Political Crisis ಬಂಡಾಯ ಶಾಸಕರು ಮುಂಬೈಗೆ ಹಿಂತಿರುಗಿದ ನಂತರ ಪರಿಸ್ಥಿತಿ ಬದಲಾಗುತ್ತದೆ: ಶರದ್ ಪವಾರ್
Image
ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಶಾಸಕರ ದೂರುಗಳ ಬಗ್ಗೆ ಪತ್ರವೊಂದನ್ನು ಟ್ವೀಟ್ ಮಾಡಿದ ಶಿಂಧೆ; ಅದರಲ್ಲೇನಿದೆ?

ಎನ್‌ಸಿಪಿ, ಕಾಂಗ್ರೆಸ್ ಮತ್ತು ಶಿವಸೇನಾದ ಎಲ್ಲಾ ನಾಯಕರು ಸಂಪರ್ಕದಲ್ಲಿದ್ದಾರೆ: ರಾವತ್

‘ಸಿಎಂ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ನಿರಂತರ ಸಂಪರ್ಕದಲ್ಲಿದ್ದಾರೆ. ಎನ್‌ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆಯ ಎಲ್ಲಾ ನಾಯಕರು ಪರಸ್ಪರ ಸಂಪರ್ಕದಲ್ಲಿದ್ದಾರೆ ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.

ನಾವು ಅವರಿಗೆ ಅವಕಾಶ ನೀಡಿದ್ದೇವೆ:  ಸಂಜಯ್ ರಾವತ್

ಶಿವಸೇನಾ ಸಂಸದ ರಾವುತ್ – ಏಕನಾಥ್ ಶಿಂಧೆ ಬಣದ ವಿರುದ್ಧ ತಮ್ಮ ಪಕ್ಷದ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ. ತಮ್ಮ ಪಕ್ಷ ವಿಶ್ವಾಸ ಮತ  ಗೆಲ್ಲುವ ವಿಶ್ವಾಸವಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. “ನಾವು ಸದನದಲ್ಲಿ ವಿಶ್ವಾಸ ಮತ  ಗೆಲ್ಲುತ್ತೇವನೆ, ನಾವು ಬಿಟ್ಟುಕೊಡುವುದಿಲ್ಲ. ಅವರು (ಬಂಡಾಯ ಶಾಸಕರು) ತುಂಬಾ ತಪ್ಪು ಹೆಜ್ಜೆ ಇಟ್ಟಿದ್ದಾರೆ. ನಾವು ಅವರಿಗೆ ಮುಂಬೈಗೆ ಮರಳಲು ಅವಕಾಶ ನೀಡಿದ್ದೇವೆ. ಈಗ ನಾವು ಅವರಿಗೆ ಸವಾಲು ಹಾಕುತ್ತೇವೆ” ಎಂದು ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

Published On - 1:37 pm, Fri, 24 June 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ