AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕನಾಥ್ ಶಿಂಧೆ ಬಣದ 40, ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ಅನರ್ಹತೆ ಅರ್ಜಿ ಸಂಬಂಧ ನೋಟಿಸ್

ಕಳೆದ ವರ್ಷ ಶಿವಸೇನಾದ ಉದ್ಧವ್ ಠಾಕ್ರೆ ಬಣದಿಂದ ಟಿಕೆಟ್‌ನಲ್ಲಿ ಅಂಧೇರಿ (ಪೂರ್ವ) ಉಪಚುನಾವಣೆಯಲ್ಲಿ ಗೆದ್ದಿದ್ದ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಮತ್ತು ರುತುಜಾ ಲಟ್ಕೆ ಅವರಿಗೆ ನೋಟಿಸ್ ನೀಡಲಾಗಿಲ್ಲ.

ಏಕನಾಥ್ ಶಿಂಧೆ ಬಣದ 40, ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ಅನರ್ಹತೆ ಅರ್ಜಿ ಸಂಬಂಧ ನೋಟಿಸ್
ಉದ್ದವ್ ಠಾಕ್ರೆ- ಏಕನಾಥ್ ಶಿಂಧೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 08, 2023 | 7:30 PM

Share

ಮಹಾರಾಷ್ಟ್ರ (Maharashtra) ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ (Rahul Narwekar) ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ  (Eknath Shinde)ನೇತೃತ್ವದ ಶಿವಸೇನಾ (Shiv sena) ಬಣದ 40 ಶಾಸಕರು ಮತ್ತು ಉದ್ಧವ್ ಠಾಕ್ರೆ (Uddhav Thackeray) ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ಉತ್ತರ ನೀಡುವಂತೆ ನೋಟಿಸ್ ನೀಡಿದ್ದಾರೆ. ಶಾಸಕರಿಗೆ ಪ್ರತಿಕ್ರಿಯೆ ನೀಡಲು ಏಳು ದಿನಗಳ ಕಾಲಾವಕಾಶ ನೀಡಲಾಗಿದ್ದು, ಅನರ್ಹತೆಯ ವಿರುದ್ಧದ ಕ್ರಮವನ್ನು ತಪ್ಪಿಸಲು ಅಗತ್ಯವಿರುವ ಎಲ್ಲಾ ಸಾಕ್ಷ್ಯಗಳನ್ನು ಸಲ್ಲಿಸಬೇಕು. ಚುನಾವಣಾ ಆಯೋಗದಿಂದ (EC) ಶಿವಸೇನಾಸಂವಿಧಾನದ ಪ್ರತಿಯನ್ನು ಸ್ವೀಕರಿಸಿದ್ದೇನೆ ಎಂದು ನಾರ್ವೇಕರ್ ಹೇಳಿದ ನಂತರ ಈ ಬೆಳವಣಿಗೆ ನಡೆದಿದೆ. ಏಕನಾಥ್ ಶಿಂಧೆ ಸೇರಿದಂತೆ  ಶಿವಸೇನಾದ 16 ಶಾಸಕರ ಅನರ್ಹತೆ ಅರ್ಜಿಗಳ ವಿಚಾರಣೆಯು ಶೀಘ್ರದಲ್ಲೇ ನಡೆಯಲಿದೆ.

ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆ ಇಬ್ಬರನ್ನೂ ಸ್ಪೀಕರ್ ಅವರು ಸಾಕ್ಷ್ಯಾಧಾರಗಳೊಂದಿಗೆ ತಮ್ಮ ಅಭಿಪ್ರಾಯಗಳನ್ನು ನೀಡಲು ಕರೆಯುವ ಸಾಧ್ಯತೆ ಇದೆ. ಏತನ್ಮಧ್ಯೆ, ಕಳೆದ ವರ್ಷ ಶಿವಸೇನಾದ ಉದ್ಧವ್ ಠಾಕ್ರೆ ಬಣದಿಂದ ಟಿಕೆಟ್‌ನಲ್ಲಿ ಅಂಧೇರಿ (ಪೂರ್ವ) ಉಪಚುನಾವಣೆಯಲ್ಲಿ ಗೆದ್ದಿದ್ದ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಮತ್ತು ರುತುಜಾ ಲಟ್ಕೆ ಅವರಿಗೆ ನೋಟಿಸ್ ನೀಡಲಾಗಿಲ್ಲ.

ಇದಕ್ಕೂ ಮುನ್ನ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಶಾಸಕ ಸುನೀಲ್ ಪ್ರಭು ಅವರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಏಕನಾಥ್ ಶಿಂಧೆ ಸೇರಿದಂತೆ 16 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ತೀರ್ಮಾನಿಸುವಂತೆ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ತೆಲಂಗಾಣದ ವಾರಂಗಲ್​​​ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ; ಚಿತ್ರಗಳಲ್ಲಿ ನೋಡಿ

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ ಹೊತ್ತಿರುವ ಏಕನಾಥ್ ಶಿಂಧೆ ಸೇರಿದಂತೆ ಶಿವಸೇನಾದ 16 ಶಾಸಕರ ಭವಿಷ್ಯವನ್ನು ನಿರ್ಧರಿಸುವಂತೆ ಮೇ 11ರಂದು ಸುಪ್ರೀಂಕೋರ್ಟ್ ಸ್ಪೀಕರ್‌ಗೆ ಸೂಚಿಸಿತ್ತು.ಕಳೆದ ವರ್ಷ ಜೂನ್‌ನಲ್ಲಿ, ಏಕನಾಥ್ ಶಿಂಧೆ ಮತ್ತು ಇತರ 15 ಶಾಸಕರು ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವನ್ನು ನಡೆಸಿದರು, ಇದು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾಯಿತು. ಇದಾದ ನಂತರ ಶಿಂಧೆ ಮತ್ತು ಬಂಡಾಯ ಶಾಸಕರು ಹೊಸ ಸರ್ಕಾರ ರಚಿಸಲು ಬಿಜೆಪಿ ಜೊತೆ ಕೈಜೋಡಿಸಿದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:28 pm, Sat, 8 July 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ