AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣೆಗೆ ಹೋದ್ರೆ ಕಾಂಗ್ರೆಸ್ ಸಿಂಗಲ್ ಡಿಜಿಟ್​ಗೆ ಬರುತ್ತೆ: ಸಿಟಿ ರವಿ ವ್ಯಂಗ್ಯ

ಮುಂಬರುವ ಮೂರು ತಿಂಗಳ ಅವದಿಯಲ್ಲಿ ಪಕ್ಷ ಸಂಘಟನೆಯನ್ನ ಮಾಡಬೇಕಿದೆ. 11 ಜನ ಎಂಎಲ್​ಸಿ, ಓರ್ವ ಶಾಸಕರಿಗೆ ಸತ್ಕಾರ ಮಾಡಲಾಗಿದೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣೆಗೆ ಹೋದ್ರೆ ಕಾಂಗ್ರೆಸ್ ಸಿಂಗಲ್ ಡಿಜಿಟ್​ಗೆ ಬರುತ್ತೆ: ಸಿಟಿ ರವಿ ವ್ಯಂಗ್ಯ
ಸಿಟಿ ರವಿ
TV9 Web
| Edited By: |

Updated on:Dec 29, 2021 | 6:07 PM

Share

ಹುಬ್ಬಳ್ಳಿ: ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಂಎಲ್​ಸಿ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಕಾಮನ್ ಮ್ಯಾನ್ ಆಗಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​​ ಸಿಂಗ್ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಬಳಿಕ ಮಹೇಶ ಟೆಂಗಿನಕಾಯಿ ಹೇಳಿಕೆ ನೀಡಿದ್ದಾರೆ. 2022ರ ಮಾರ್ಚ್​ 28, 29 ರಂದು ಬಿಜೆಪಿ ವಿಜಯನಗರ ಜಿಲ್ಲೆಯಲ್ಲಿ ಮುಂದಿನ ಕಾರ್ಯಕಾರಿಣಿಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಕಾರ್ಯಕಾರಣಿ ಸಭೆ ಮಾಡಿದಕ್ಕೆ‌ ಧನ್ಯವಾದಗಳನ್ನ ಹೇಳುತ್ತೆನೆ. ಹೊಸ ದಿಕ್ಸೂಚಿ ಕೊಡಲು ಈ ಸಭೆ ನಡೆದಿದೆ. ನಿನ್ನೆ ಮಧ್ಯಾಹ್ನ ಆರಂಭವಾದ ಕಾರ್ಯಕಾರಣಿ ಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ಮಾಡಲಾಗಿದೆ. ಮುಂಬರುವ ಮೂರು ತಿಂಗಳ ಅವದಿಯಲ್ಲಿ ಪಕ್ಷ ಸಂಘಟನೆಯನ್ನ ಮಾಡಬೇಕಿದೆ. 11 ಜನ ಎಂಎಲ್​ಸಿ, ಓರ್ವ ಶಾಸಕರಿಗೆ ಸತ್ಕಾರ ಮಾಡಲಾಗಿದೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

ಮುಂದಿನ ಕಾರ್ಯಕಾರಣಿ ಸಭೆ ಮಾರ್ಚ 28, 29 ರಂದು ವಿಜಯ ನಗರ ಜಿಲ್ಲೆಯಲ್ಲಿ ಮಾಡಲಾಗುವುದು. 150 ಪ್ಲಸ್ ಘೋಷವ್ಯಾಕ್ಯದಿಂದ ನಮ್ಮ ಪಕ್ಷ ಕೆಲಸ ಮಾಡುತ್ತೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ವಿಸ್ತಾರಕರನ್ನ ನೇಮಕ ಮಾಡಲಾಗುತ್ತೆ. ಈ ಕಾರ್ಯಕಾರಣಿ ಸಭೆಯಲ್ಲಿ ಒಳ್ಳೆಯ ರಿಸ್ಪಾನ್ಸ್ ಸಿಕ್ಕಿದೆ. ಈ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಎಲ್ಲರಿಗೂ ಧನ್ಯವಾದ ಎಂದು ಅವರು ತಿಳಿಸಿದ್ದಾರೆ.

ಸಿಎಂ ಕುರ್ಚಿಗೆ ಕಾಂಗ್ರೆಸ್ ನಾಯಕರು ಟವೆಲ್​ ಹಾಕುತ್ತಿದ್ದಾರೆ: ಸಿ.ಟಿ ರವಿ ವ್ಯಂಗ್ಯ ಕಾರ್ಯಕಾರಣಿಯಲ್ಲಿ ವಿಷಯಾಧಾರಿತ ಚರ್ಚೆ ನಡೆದಿದೆ. ಮತ್ತೆ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತೆ. ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ. ಹಿಂದುತ್ವವಾದಿಗಳನ್ನ ಆತಂಕವಾದಿಗಳು ಎಂದು ಬಿಂಬಿಸುತ್ತಿದ್ದಾರೆ. ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿಯ ತಪ್ಪು ನಿರ್ಣಯಗಳಿಂದ 44 ಸ್ಥಾನಳಿಗೆ ಬಂದು ನಿಂತಿದ್ದಾರೆ. ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಚುನಾವಣೆಗೆ ಹೋದ್ರೆ ಸಿಂಗಲ್ ಡಿಜಿಟ್ ಬರುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್​ ಅಧಿಕಾರಕ್ಕೆ ಬರುವ ಬಗ್ಗೆ ತಿರುಕನ ಕನಸು ಕಾಣುತ್ತಿದೆ. ಸಿಎಂ ಕುರ್ಚಿಗೆ ಕಾಂಗ್ರೆಸ್ ನಾಯಕರು ಟವೆಲ್​ ಹಾಕುತ್ತಿದ್ದಾರೆ. ಅವರು ಹಾಕುವ ಟವೆಲ್ ಮುಖ ಒರೆಸಿಕೊಳ್ಳಲು ಬರುತ್ತದೆ. ಅಧಿಕಾರದಲ್ಲಿದ್ದಾಗ ಯಾಕೆ ಮೇಕೆದಾಟು ಯೋಜನೆ ಮಾಡಲಿಲ್ಲ. ಹಿಂದೂಗಳು ದೇಶಭಕ್ತರೇ ಹೊರತು ದೇಶ ವಿರೋಧಿಗಳಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಎಲ್ಲದಕ್ಕೂ ಬಂದ್‌ ಅಂತಿಮ ನಿರ್ಧಾರವಲ್ಲ; ಡಿಸೆಂಬರ್ 31ರ ಬಂದ್ ಕೈಬಿಡುವಂತೆ ಬಸವರಾಜ ಬೊಮ್ಮಾಯಿ ಮನವಿ

ಇದನ್ನೂ ಓದಿ: ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಗೈರಾಗಿ ದೆಹಲಿಗೆ ಹಾರಿದ ರಮೇಶ್ ಜಾರಕಿಹೊಳಿ; ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡದ ಬೊಮ್ಮಾಯಿ

Published On - 4:03 pm, Wed, 29 December 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ