AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಅಮಿತ್ ಶಾರಂತಹ ನೂರು ಜನ ಬರಲಿ, 2024ರಲ್ಲಿ ಕಾಂಗ್ರೆಸ್​ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರುತ್ತೆ: ಮಲ್ಲಿಕಾರ್ಜುನ ಖರ್ಗೆ

ನರೇಂದ್ರ ಮೋದಿ, ಅಮಿತ್​ ಶಾರಂತಹ ನೂರು ಮಂದಿ ಬರಲಿ, 2024ರ ಚುನಾವಣೆ ಬಳಿಕ ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮೋದಿ, ಅಮಿತ್ ಶಾರಂತಹ ನೂರು ಜನ ಬರಲಿ, 2024ರಲ್ಲಿ ಕಾಂಗ್ರೆಸ್​ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರುತ್ತೆ: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
ನಯನಾ ರಾಜೀವ್
|

Updated on: Feb 22, 2023 | 3:11 PM

Share

ನರೇಂದ್ರ ಮೋದಿ, ಅಮಿತ್​ ಶಾರಂತಹ ನೂರು ಮಂದಿ ಬರಲಿ, 2024ರ ಚುನಾವಣೆ ಬಳಿಕ ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೇಶವನ್ನು ಉತ್ತಮ ರೀತಿಯಲ್ಲಿ ಕೊಂಡೊಯ್ಯುವ ವ್ಯಕ್ತಿ ತಾನೊಬ್ಬನೇ, ಬೇರೆ ಯಾರಿಗೂ ನನ್ನ ಜಾಗಕ್ಕೆ ತಲುಪಲು ಸಾಧ್ಯವಿಲ್ಲ ಎಂದುಕೊಂಡಿದ್ದಾರೆ, ಆದರೆ ಈ ಬಾರಿ ಅವರ ಎಲ್ಲಾ ನಂಬಿಕೆಗಳು ಬುಡಮೇಲಾಗಲಿದೆ ಎಂದರು. ನೀವು ಸರ್ವಾಧಿಕಾರಿ ಅಲ್ಲ, ನೀವು ಜನರಿಂದ ಆಯ್ಕೆಯಾಗಿದ್ದೀರಿ ಮತ್ತು ಜನರು ನಿಮಗೆ ಪಾಠ ಕಲಿಸುತ್ತಾರೆ ಎಂದು ನಾಗಾಲ್ಯಾಂಡ್‌ನಲ್ಲಿ ಚುನಾವಣಾ ಜಾಥಾದಲ್ಲಿ ಹೇಳಿದರು.

ದೇಶದಲ್ಲಿ ಸಮಾನತೆ, ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಯಬೇಕಾದರೆ, ಬಿಜೆಪಿ ಅಧಿಕಾರದಿಂದ ತೊಲಗಬೇಕು. ಬಿಜೆಪಿಯನ್ನು ಎದುರಿಸಲು ಸಮಾನ ಮನಸ್ಕ ರಾಜಕೀಯ ಪಕ್ಷಗಳು ಒಂದಾಗಲೇಬೇಕು. ಈ ಮಹಾಮೈತ್ರಿಕೂಟಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ ನಾಯಕತ್ವ ನೀಡಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಾಗಾಲ್ಯಾಂಡ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರು ಹಲವಾರು ಬಾರಿ, ದೇಶ ಒಪ್ಪಿಕೊಂಡ ಏಕೈಕ ನಾಯಕ ನಾನಾಗಿದ್ದು, ಬೇರೆ ಯಾರೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ, ಎಂದು ಹೇಳಿದ್ದಾರೆ. ಯಾವುದೇ ಪ್ರಜಾಪ್ರಭುತ್ವವಾದಿ ಹೀಗೆ ಹೇಳುವುದಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.

ಮತ್ತಷ್ಟು ಓದಿ: ವಿಚಿತ್ರವಾಗಿ ವರ್ತಿಸುತ್ತಿರುವ ಸರ್ಕಾರವನ್ನು ನಿಯಂತ್ರಿಸಿ: ಕೇಂದ್ರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಭಾರತವು ಪ್ರಜಾತಂತ್ರ ವ್ಯವಸ್ಥೆಯನ್ನು ಹೊಂದಿದ್ದು, ನೀವು ನಿರಂಕುಶಾಧಿಕಾರಿ ಅಲ್ಲ ಎಂಬುದನ್ನು ಪ್ರಧಾನಿ ಮೋದಿ ಅವರಿಗೆ ನಾವು ಮನವರಿಕೆ ಮಾಡಿಕೊಡುತ್ತೇವೆ. ಪ್ರಧಾನಿ ಮೋದಿ ಅವರು ಜನರಿಂದ ಆಯ್ಕೆಯಾಗಿದ್ದಾರೆಯೇ ಹೊರತು, ಅವರು ಸರ್ವಾಧಿಕಾರಿ ಅಲ್ಲ. ನಿಮ್ಮ ಸರ್ವಾಧಿಕಾರಿ ವರ್ತನೆಗೆ ಈ ದೇಶದ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಖರ್ಗೆ ಹರಿಹಾಯ್ದರು.

ಪ್ರಜಾಪ್ರಭುತ್ವ ಮತ್ತು ಸಂವಿಧಾನd ರಕ್ಷಣೆಗೆ ನಾವು ಒಂದಾಗಲೇಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದರು. 2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಬರಲಿದೆ. ನಾವು ಈಗಾಗಲೇ ಸಮಾನ ಮನಸ್ಕ ರಾಜಕೀಯ ಪಕ್ಷಗಳೊಂದಿಗೆ ಚರ್ಚೆ ಆರಂಭಿಸಿದ್ದೇವೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?