AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು ಟರ್ಬನ್ , ಕುರ್ತಾ ಧರಿಸಿ ಬೆಲೆ ಏರಿಕೆ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಪ್ರತಿಭಟನೆ

Mallikarjun Kharge ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​​​​ ರಾಷ್ಟ್ರಪತಿ ಭವನಕ್ಕೆ ಮಾರ್ಚ್ ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಲಿದೆ.

ಕಪ್ಪು ಟರ್ಬನ್ , ಕುರ್ತಾ ಧರಿಸಿ ಬೆಲೆ ಏರಿಕೆ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಪ್ರತಿಭಟನೆ
ಮಲ್ಲಿಕಾರ್ಜುನ ಖರ್ಗೆ
TV9 Web
| Edited By: |

Updated on:Aug 05, 2022 | 12:54 PM

Share

ದೆಹಲಿ: ದೇಶದಲ್ಲಿ ಬೆಲೆ ಏರಿಕೆ (price rise)ಮತ್ತು ನಿರುದ್ಯೋಗ ಸಮಸ್ಯೆ ಖಂಡಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು ರಾಜ್ಯಸಭೆಯ ವಿಪಕ್ಷ ನೇತಾರ ಮಲ್ಲಿಕಾರ್ಜುನ ಖರ್ಗೆ (Mallikarjun Kharge )ಇಂದು ಕಪ್ಪು ಟರ್ಬನ್ ಮತ್ತು ಕುರ್ತಾ ತೊಟ್ಟು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ (Congress) ರಾಷ್ಟ್ರಪತಿ ಭವನಕ್ಕೆ ಮಾರ್ಚ್ ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಲಿದೆ. ಬೆಲೆ ಏರಿಕೆ ಮತ್ತು ಜಿಎಸ್​​ಟಿ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಉಭಯ ಸದನಗಳಲ್ಲಿ ಈ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸುತ್ತಿವೆ. ಕಾಂಗ್ರೆಸ್ ಸಂಸದರು ಸದನದ ಒಳಗೆ ಮತ್ತು ಹೊರಗೆ ಇದೇ ವಿಷಯ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಖರ್ಗೆ ಅವರನ್ನು  ಗುರುವಾರ ವಿಚಾರಣೆಗೊಳಡಿಸಿತ್ತು.

ಕಾಂಗ್ರೆಸ್ ಇಂದು ಪ್ರಧಾನಿ ನಿವಾಸಕ್ಕೆ ಮಾರ್ಚ್ ನಡೆಸಲಿದ್ದು ಆನಂತರ ಸಂಸತ್ ನಿಂದ ರೈಸಿನಾ ಹಿಲ್​​ಗೆ ಮಾರ್ಚ್ ನಡೆಯಲಿದೆ. ಶುಕ್ರವಾರ ರಾಜ್ಯಸಭೆ ಕಲಾಪ ಆರಂಭವಾಗಿ 5 ನಿಮಿಷದಲ್ಲಿ ಕಲಾಪ ಮುಂದೂಡಲಾಗಿದೆ.

ಇದನ್ನೂ ಓದಿ
Image
Rahul Gandhi: ರಾಷ್ಟ್ರಪತಿ ಭವನದತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
Image
Rahul Gandhi Press Conference: ಭಾರತದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ, ನಾಲ್ವರಿಂದ ಸರ್ವಾಧಿಕಾರ; ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
Image
Azadi Ka Amrit Mahotsav: 4.5 ಕೋಟಿಗೂ ಹೆಚ್ಚು ರಾಷ್ಟ್ರಧ್ವಜಗಳನ್ನು ಹಾರಿಸಲು ಸಿದ್ಧತೆ ಮಾಡಿಕೊಂಡ ಉತ್ತರ ಪ್ರದೇಶ ಸರ್ಕಾರ
Image
Mamata Banerjee: ದೆಹಲಿ ಪ್ರವಾಸದಲ್ಲಿ ಸಿಎಂ ಮಮತಾ ಬ್ಯಾನರ್ಜಿ; ಇಂದು ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಸಂಸತ್ ಭವನದಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸುತ್ತಿದ್ದಾಗ ರಾಹುಲ್ ಗಾಂಧಿ  ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ ಸಹ ಪ್ರತಿಭಟನೆ ನಡೆಸಿದ್ದಕ್ಕಾಗಿ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಸಂಸತ್ತಿನ ಹೊರಗೆ ಧರಣಿ ನಡೆಸಿದ ಸಂಸದರೊಂದಿಗೆ ರಾಹುಲ್ ಗಾಂಧಿ ರಾಷ್ಟ್ರಪತಿ ಭವನದತ್ತ ಹೊರಟಿದ್ದರು. ಈ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಅಧೀರ್ ರಂಜನ್ ಚೌಧರಿ ಮತ್ತು ಕೆ.ಸಿ ವೇಣುಗೋಪಾಲ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ದೆಹಲಿಯ ಅರೆಸೇನಾ ಪಡೆಗಳು ಮತ್ತು ದೆಹಲಿ ಪೊಲೀಸರು ವಿಜಯ್ ಚೌಕ್ ರಸ್ತೆ ಮತ್ತು ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಹೋಗುವ ಮಾರ್ಗವನ್ನು ಬ್ಯಾರಿಕೇಡ್‌ಗಳ ಮೂಲಕ ನಿರ್ಬಂಧಿಸಿದ್ದಾರೆ. ಕಾಂಗ್ರೆಸ್ ಸಂಸದರ ಪ್ರತಿಭಟನೆಯನ್ನು ತಡೆಯಲು ಬ್ಯಾರಿಕೇಡ್‌ಗಳ ಇನ್ನೊಂದು ಬದಿಯಲ್ಲಿ ಮಹಿಳಾ ಪ್ಯಾರಾ ಸಿಬ್ಬಂದಿಗಳು ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಪ್ರತಿಭಟನೆಗೂ ಮುನ್ನ ಸುದ್ದಿಗೋಷ್ಠಿ ಕರೆದಿದ್ದ ರಾಹುಲ್ ಗಾಂಧಿ, 70 ವರ್ಷದ ಪ್ರಜಾಪ್ರಭುತ್ವ ವ್ಯವಸ್ಥೆ 8 ವರ್ಷದಲ್ಲಿ ನಾಶವಾಗಿದೆ. ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಚರ್ಚಿಸಲು ಅವಕಾಶ ನೀಡುತ್ತಿಲ್ಲ. ದೇಶದಲ್ಲಿ ಇಂದು 4 ಜನರಿಂದ ಸರ್ವಾಧಿಕಾರ ನಡೆಯುತ್ತಿದೆ. ಯಾರಾದರೂ ಆ ಸರ್ವಾಧಿಕಾರಿಗಳ ವಿರುದ್ಧ ತಿರುಗಿಬಿದ್ದರೆ ಸೇಡು ತೀರಿಸಿಕೊಳ್ಳಲಾಗುತ್ತಿದೆ. ಸುಳ್ಳು ಕೇಸ್ ಹಾಕಿ ನಮ್ಮನ್ನು ಜೈಲಿಗೆ ಕಳುಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಸಂಸತ್ನಲ್ಲಿ ಜನರ ಯಾವುದೇ ಸಮಸ್ಯೆಗಳು ಚರ್ಚೆಯಾಗುತ್ತಿಲ್ಲ. ನಾಲ್ಕೈದು ಉದ್ಯಮಿಗಳಿಗಾಗಿ ಇಬ್ಬರು ರಾಜಕಾರಣಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಬಿಜೆಪಿಯ ಬೆದರಿಕೆ ತಂತ್ರವಾಗಿದೆ. ಬಿಜೆಪಿಯವರು ನಮ್ಮ ವಿರುದ್ಧ ಏನೇ ಷಡ್ಯಂತ್ರ ಮಾಡಿದರೂ ಯಾವುದೇ ಬದಲಾವಣೆ ಆಗಲ್ಲ. ನಮ್ಮ ದೇಶ, ಅದರ ಪ್ರಜಾಪ್ರಭುತ್ವವನ್ನು ರಕ್ಷಿಸುವ ಕೆಲಸವನ್ನು ನಾನು ಮುಂದುವರಿಸುತ್ತೇನೆ. ಸ್ವಲ್ಪ ಒತ್ತಡ ಹಾಕಿದರೆ ನಮ್ಮನ್ನು ಸುಮ್ಮನಿರಿಸಬಹುದು ಎಂದು ಅವರು ಭಾವಿಸಿದ್ದಾರೆ. ಆದರೆ, ನಾವು ಸುಮ್ಮನಿರುವುದಿಲ್ಲ. ಬಿಜೆಪಿಯವರ ವಿರುದ್ಧ ನಾವು ನಿಲ್ಲುತ್ತೇವೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಮತ್ತಷ್ಟು  ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Fri, 5 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ