AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಅಧಿಕಾರಿಗಳ ಪರಿಶೀಲನೆ ಅಂತ್ಯ: ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಕಾಂಗ್ರೆಸ್ ಶಾಸಕ

ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ನಿವಾಸದ ಮೇಲೆ ನಡೆದಿದ್ದ ಇಡಿ ದಾಳಿ ಅಂತ್ಯವಾಗಿದೆ. ಇದರ ಬೆನ್ನಲ್ಲೇ ಕೆ.ವೈ ನಂಜೇಗೌಡ ಅವರು ಮಾಧ್ಯಮಗಳ ಮುಂದೆ ಭಾವುಕರಾಗಿದ್ದಾರೆ. ಹಾಗಾದ್ರೆ, ಇಡಿ ಅಧಿಕಾರಿಗಳು ಏನೆಲ್ಲಾ ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ? ಈ ಬಗ್ಗೆ ಶಾಸಕ ಹೇಳಿದ್ದೇನು? ಇಲ್ಲಿದೆ ವಿವರ

ಇಡಿ ಅಧಿಕಾರಿಗಳ ಪರಿಶೀಲನೆ ಅಂತ್ಯ: ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಕಾಂಗ್ರೆಸ್ ಶಾಸಕ
ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Jan 09, 2024 | 10:45 PM

Share

ಕೋಲಾರ, (ಜನವರಿ 09): ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ(Congress MLA KY Nanjegowda)  ನಿವಾಸದ ಮೇಲೆ ನಡೆದಿದ್ದ ಇಡಿ ದಾಳಿ (ED raids) ಅಂತ್ಯವಾಗಿದೆ. ನಿನ್ನೆ(ಜನವರಿ 08) ಇಡಿ ಅಧಿಕಾರಿಗಳು ನಂಜೇಗೌಡ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದು, ಇಂದು (ಜನವರಿ 09) ರಾತ್ರಿ ಪರಿಶೀಲನೆ ಅಂತ್ಯವಾಗಿದೆ. ಆದ್ರೆ, ಮನೆಯಲ್ಲಿ ಸಿಕ್ಕ ದಾಖಲಾತಿಗಳನ್ನು ಅಧಿಕಾರಿಗಳು ಕೊಂಡೊಯ್ದಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡುವ ವೇಳೆ ನಂಜೇಗೌಡ ದಂಪತಿ ಕಣ್ಣೀರಿಟ್ಟಿದ್ದಾರೆ.

ಇಡಿ ಅಧಿಕಾರಿಗಳು ಪರಿಶೀಲನೆ ಮಾಡಿ ವಾಪಸ್ ಹೋದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಂಜೇಗೌಡ, ನಿನ್ನೆ ಇಡಿ ಅಧಿಕಾರಿಗಳು ನಮ್ಮ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಅವರು ಕೇಳಿದ ಎಲ್ಲಾ ಮಾಹಿತಿ ಕೊಟ್ಟಿದ್ದೇನೆ. ಮುಂದೆ ಸಹ ಏನೂ ಆಗಲ್ಲ ಅನ್ನೋ ನಂಬಿಕೆ ಇದೆ. ಮೂರು ವಿಚಾರವಾಗಿ ನನ್ನ ಬಳಿ ಮಾಹಿತಿ ಕೇಳಿದ್ರು, ಒಂದು ಕೋಚಿಮುಲ್ ನೇಮಕಾತಿ, ಎರಡನೆಯದು ಭೂ ಮಂಜೂರಾತಿ ಹಾಗೂ ನನ್ನ ಬಿಸಿನೆಸ್ ಬಗ್ಗೆ ಮಾಹಿತಿ ಕೇಳಿದ್ರು ಎಂದು ವಿವರಿಸಿದರು.

ಇದನ್ನೂ ಓದಿ: ಕೋಚಿಮುಲ್ ಅವ್ಯವಹಾರ: ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇಡಿ ದಾಳಿ

ನನ್ನ ಮುಗಿಸಲು ಸಾಕಷ್ಟು ಜನರ ಸಂಚು ರೂಪಿಸಿದ್ದಾರೆ. ಕೆಲವು ದಾಖಲೆ ಹಾಗೂ ತಮ್ಮನ ಮಗಳ ಮದುವೆಗೆ ಬಟ್ಟೆ ತರಲು ಹಣ ಹೊಂದಿಸಿದ್ದೆ, ಆ ಹಣ ಹಾಗೂ ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. 16 ಲಕ್ಷ ರೂ. ಹಣ ತೆಗೆದುಕೊಂಡು ಹೋಗಿದ್ದಾರೆ. ಹಣ ವಾಪಸ್ ಕೊಡಿ ಎಂದು ನಮ್ಮ ಮನೆಯವರು ಸಹ ಕೇಳಿಕೊಂಡೆವು. ಆದ್ರೂ ಹಣ ಹಾಗೂ ದಾಖಲೆಗಳು ವಶಕ್ಕೆ ಪಡೆದಿದ್ದಾರೆ, ಮತ್ತೆ ವಿಚಾರಣೆಗೆ ಕರೆದಿದ್ದಾರೆ ಹೋಗುವೆ. ಇಡಿ ಯನ್ನ ಕಾಂಗ್ರೇಸ್ ಮೇಲೆ ಯಾವ ರೀತಿ ದಾಳಿ‌ ಮಾಡಿಸುತ್ತಿದೆ ಎಂದು ಗೊತ್ತಿದೆ. ಅದರ ಕುರಿತು ನಾನೇನು ಮಾತನಾಡುವುದಿಲ್ಲ ಎಂದು ಭಾವುಕರಾದರು. ಇದನ್ನು ನೋಡಿ ಪಕ್ಕದಲ್ಲೇ ಇದ್ದ ಪತ್ನಿ ರತ್ನಮ್ಮ ಸಹ ಕಣ್ಣೀರು ಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:40 pm, Tue, 9 January 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು