AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಮತ ಹಾಕದವರಿಗೆ ಸಹಿ ಕೂಡ ಮಾಡಲ್ಲ ಎಂದ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ನನಗೆ ಮತ ಹಾಕದವರಿಗೆ ಒಂದು ಸಹಿ ಕೂಡ ಮಾಡುವುದಿಲ್ಲವೆಂದು ಹೇಳಿಕೆ ನೀಡಿದ್ದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಗೆ ಈಗ ಸಂಕಷ್ಟ ಎದುರಾಗಿದೆ.

ನನಗೆ ಮತ ಹಾಕದವರಿಗೆ ಸಹಿ ಕೂಡ ಮಾಡಲ್ಲ ಎಂದ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು
ಎನ್.ಚಲುವರಾಯಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 2:24 PM

Share

ಮಂಡ್ಯ: ನನಗೆ ಮತ ಹಾಕದವರಿಗೆ ಒಂದು ಸಹಿ ಕೂಡ ಮಾಡುವುದಿಲ್ಲವೆಂದು ಹೇಳಿಕೆ ನೀಡಿದ್ದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬಿಜೆಪಿ ವಕ್ತಾರ ಸಿ.ಟಿ ಮಂಜುನಾಥ್ ಎನ್ನುವರು ಮಂಡ್ಯ ಜಿಲ್ಲಾಧಿಕಾರಿಗಳ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಗ, ದ್ವೇಷ, ತಾರತಮ್ಯ ಮಾಡದೆ ಸಂವಿಧಾನದ ಆಶಯದಂತೆ ಕೆಲಸ ಮಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿದ್ರು ತಾರತಮ್ಯದ ಮಾತುಗಳನ್ನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಜುನಾಥ್ ಪತ್ರದ ಮೂಲಕ ರಾಜ್ಯಪಾಲರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: “ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್ ಅಷ್ಟೇ” ವೈರಲ್​ ಆದ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಚಿವ ಚಲುವರಾಯಸ್ವಾಮಿ

ನನಗೆ ಮತ ಹಾಕದವರಿಗೆ ಒಂದು ಸಹಿ ಕೂಡ ಮಾಡುವುದಿಲ್ಲವೆಂದು ಇತ್ತೀಚೆಗೆ ನಾಗಮಂಗಲದ ಕೃತಜ್ಞತಾ ಸಮಾರಂಭದದಲ್ಲಿ ಚಲುವರಾಯಸ್ವಾಮಿ ಹೇಳಿದ್ದು, ಈ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾವಗಿತ್ತು. ಅಲ್ಲದೇ ಈ ಬಗ್ಗೆ ಸಾಮಾಜಿಕ ಜಾಲತಾಣಗಳದಲ್ಲಿ ಆಕ್ರೋಶಕ್ಕೆ ಕಾರವಾಗಿತ್ತು. ಮೊದಲ ಬಾರಿಗೆ ಮಂಗಳವಾರ ನಾಗಮಂಗಲಕ್ಕೆ ಭೇಟಿ ನೀಡಿದ್ದ ಎನ್‌.ಚಲುವರಾಯಸ್ವಾಮಿ, ನೀಡಿರುವ ಹೇಳಿಕೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

ರಾಜಕೀಯ ಅಂದ ಮೇಲೆ ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಒಂದು ಪಕ್ಷ ಸೋಲಬೇಕು, ಇನ್ನೊಂದು ಪಕ್ಷ ಗೆಲ್ಲಬೇಕು. ಚುನಾವಣೆಯಲ್ಲಿ ಒಂದು ಪಕ್ಷವನ್ನು ಪ್ರತಿನಿಧಿಸುವ ಅಭ್ಯರ್ಥಿ, ಗೆದ್ದು ಬಂದ ಬಳಿಕ ಒಂದು ಪಕ್ಷದ ಅಭ್ಯರ್ಥಿ ಆಗಿ ಉಳಿಯುವುದಿಲ್ಲ. ಒಂದು ಕ್ಷೇತ್ರದ ಜನಪ್ರತಿನಿಧಿಯಾಗಿ ನಿಲ್ಲುತ್ತಾರೆ. ಹೀಗಾಗಿ ಗೆಲುವು ಕಂಡ ಜನಪ್ರತಿನಿಧಿ ಇಡೀ ಕ್ಷೇತ್ರದ ಅಭಿವೃದ್ಧಿಗೆ ಶ್ರಮ ಪಡಬೇಕು. ಒಂದು ವೇಳೆ ಸಚಿವ ಸ್ಥಾನ ಸಿಕ್ಕರೆ ಇಡೀ ರಾಜ್ಯದ ಅಭಿವೃದ್ಧಿಗೆ ಕಟಿಬದ್ಧರಾಗಿ ದುಡಿಯಬೇಕು. ಅಂತಿಮವಾಗಿ ರಾಜ್ಯದ ಜನರ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡಬೇಕು. ಆದರೆ ನಾಗಮಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್‌‌ ಪಕ್ಷದಿಂದ ಗೆದ್ದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕೃಷಿ ಸಚಿವರಾಗಿರುವ ಎನ್‌. ಚಲುವರಾಯಸ್ವಾಮಿ ಸಣ್ಣದೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ