AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಮುನಿಸು ಮರೆತ ನಾರಾಯಣಗೌಡ – ಕುಮಾರಸ್ವಾಮಿ: ಹೆಚ್​ಡಿಕೆಯ ಹಾಡಿಹೊಗಳಿದ ಮಾಜಿ ಸಚಿವ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸುವುದು ಅಧಿಕೃತವಾದ ಬೆನ್ನಲ್ಲೇ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಬಿಜೆಪಿ ನಾಯಕರ ಜತೆ ಸಮನ್ವಯ ಸಾಧಿಸುವ ಕೆಲಸ ಆರಂಭಿಸಿದ್ದಾರೆ. ಇದರ ಮೊದಲ ಯತ್ನವಾಗಿ ಮಾಜಿ ಸಚಿವ ಕೆಸಿ ನಾರಾಯಣಗೌಡ ಜತೆ ಸಂಧಾನ ನಡೆಸಿ ಯಶಸ್ವಿಯಾಗಿದ್ದಾರೆ. ಕುಮಾರಸ್ವಾಮಿ ಬಗ್ಗೆ ನಾರಾಯಣಗೌಡ ಅಚ್ಚರಿಯ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. ಅದೇನೆಂದು ಮುಂದೆ ಓದಿ.

ರಾಜಕೀಯ ಮುನಿಸು ಮರೆತ ನಾರಾಯಣಗೌಡ - ಕುಮಾರಸ್ವಾಮಿ: ಹೆಚ್​ಡಿಕೆಯ ಹಾಡಿಹೊಗಳಿದ ಮಾಜಿ ಸಚಿವ
ನಾರಾಯಣಗೌಡ & ಕುಮಾರಸ್ವಾಮಿ
Sunil MH
| Updated By: Ganapathi Sharma|

Updated on: Mar 27, 2024 | 9:58 AM

Share

ಬೆಂಗಳೂರು, ಮಾರ್ಚ್​ 27: ಲೋಕಸಭೆ ಚುನಾವಣೆಗೆ (Lok Sabha Elections) ಬಿಜೆಪಿ ಜೆಡಿಎಸ್ ಮೈತ್ರಿ (BJP JDA Alliance) ಅಭ್ಯರ್ಥಿಯಾಗಿ ಹೆಚ್​ಡಿ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುವುದು ಖಚಿತವಾದ ಬೆನ್ನಲ್ಲೇ ಮಂಡ್ಯ (Mandya) ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಂಡ್ಯ ಲೋಕಸಭಾ ಕ್ಷೇತ್ರ ಗೆಲ್ಲಲು ಸಂಧಾನ ಸೂತ್ರಕ್ಕೆ ಕುಮಾರಸ್ವಾಮಿ ಮೊರೆಹೋಗಿದ್ದಾರೆ. ವಿಶೇಷವೆಂದರೆ, ರಾಜಕೀಯವಾಗಿ ಮುನಿಸಿಕೊಂಡಿದ್ದ ಬಿಜೆಪಿ ನಾಯಕ ಕೆಸಿ ನಾರಾಯಣಗೌಡ ಹಾಗೂ ಕುಮಾರಸ್ವಾಮಿ ಇದೀಗ ಒಂದಾಗಿದ್ದಾರೆ. ಅಷ್ಟೇ ಏಕೆ, ನನ್ನ ರಾಜಕೀಯ ಜೀವನ ಆರಂಭವಾಗಿದ್ದೇ ನಿಮ್ಮಿಂದ, ನಿಮ್ಮ ಗೆಲುವಿಗೆ ಶ್ರಮಿಸುವೆ ಎಂದು ಕುಮಾರಸ್ವಾಮಿಗೆ ಮಾಜಿ ಸಚಿವ ಕೆಸಿ ನಾರಾಯಣಗೌಡ ಭರವಸೆ ನೀಡಿದ್ದಾರೆ!

ಕುಮಾರಸ್ವಾಮಿ ಮತ್ತು ನಾರಾಯಣಗೌಡ ನಡುವೆ ಸಂಧಾನ ಯಶಸ್ವಿಯಾಗಿದೆ. ಜೆಡಿಎಸ್​ನ ಸಿಎಸ್ ಪುಟ್ಟರಾಜು, ಅಶ್ವಥ್ ನಾರಾಯಣ್ ಉಭಯ ನಾಯಕರ ನಡುವೆ ಸಂಧಾನ ಮಾಡಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ, ಮಂಡ್ಯದಲ್ಲಿ ಕಾಂಗ್ರೆಸ್ ಓಟಕ್ಕೆ ತಡೆಯೊಡ್ಡಲು ಬಿಜೆಪಿಯ ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ. ಇದರ ಮೊದಲ ಭಾಗವಾಗಿಯೇ ಮಾಜಿ ಸಚಿವ ನಾರಾಯಣಗೌಡ ಮನವೊಲಿಕೆ ಮಾಡಲಾಗಿದೆ.

ಏನಂದರು ನಾರಾಯಣಗೌಡ?

ಎಲ್ಲರೂ ಒಟ್ಟಾಗಿ ನಿಮ್ಮನ್ನು ಗೆಲ್ಲಿಸಲು ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿಗೆ ನಾರಾಯಣಗೌಡ ಭರವಸೆ ನೀಡಿದ್ದಾರೆ. ಮಂಡ್ಯದಲ್ಲಿ ಬೃಹತ್ ಜಂಟಿ ಸಮಾವೇಶ ಮಾಡುವ ಮೂಲಕ ಸಮನ್ವಯ ಸಂದೇಶ ನೀಡೋಣ ಎಂದು ಸಲಹೆಯನ್ನೂ ನೀಡಿದ್ದಾರೆ. ಇದೇ ವೇಳೆ, ನನ್ನ ಗೆಲುವಿಗಿಂತ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ ಮಂಡ್ಯ ಎನ್​​​ಡಿಎ ಉಸ್ತುವಾರಿಯನ್ನು ಜೆಡಿಎಸ್ ನಾಯಕನ ಜೊತೆ ನೀವು ವಹಿಸಿಕೊಳ್ಳಿ ಎಂದು ಕುಮಾರಸ್ವಾಮಿ ನಾರಾಯಣಗೌಡರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನಾರಾಯಣಗೌಡ, ನೀವು ನನಗೆ ಮನವಿ ಮಾಡಬೇಡಿ. ನನ್ನ ರಾಜಕೀಯ ಆರಂಭವಾಗಿದ್ದೇ ನಿಮ್ಮಿಂದ. ನಿಮ್ಮ ಗೆಲುವಿಗಾಗಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಸ್ಪರ್ಧೆ ಹಿಂದೆ ಕುಮಾರಸ್ವಾಮಿಯ ಹಲವು ರಾಜಕೀಯ ಲೆಕ್ಕಾಚಾರ!

ಮುಂದೆ ಹಾಲಿ ಸಂಸದೆ ಸುಮಲತಾ ಜತೆಗೂ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಕುಮಾರಸ್ವಾಮಿ ಉದ್ದೇಶಿಸಿದ್ದಾರೆ. ಶೀಘ್ರದಲ್ಲೇ ಸಂಸದೆ ಸುಮಲತಾ ಜೊತೆ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದಾರೆ. ಈ ಮಧ್ಯೆ, ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲುವಿಗೆ ಪಣತೊಟ್ಟಿರುವ ಜೆಡಿಎಸ್ ಮುಖಂಡರು ಸುಮಲತಾ ಮಾತ್ರವಲ್ಲದೆ, ಸಂಘರ್ಷವಿರುವ ಎಲ್ಲಾ ಬಿಜೆಪಿ ಮುಖಂಡರ ಸಂಧಾನಕ್ಕೆ ಭಾರಿ ಪ್ರಯತ್ನ ಮಾಡುತ್ತಿದ್ದಾರೆ.

ವಿಧಾನಸಭೆ ಚುನಾವಣೆ ವೇಳೆ ನಡೆದಿತ್ತು ವಾಕ್ಸಮರ

ಕಳೆದ ವರ್ಷ ವಿಧಾನಸಭೆ ಚುನಾವಣೆ ನಾರಾಯಣಸ್ವಾಮಿ ಮತ್ತು ಕುಮಾರಸ್ವಾಮಿ ಮಧ್ಯೆ ತೀವ್ರ ವಾಕ್ಸಮರ ಏರ್ಪಟ್ಟಿದ್ದು ಕೂಡ ಗಮನಾರ್ಹ

ಇದನ್ನೂ ಓದಿ: ಟಿಕೆಟ್​​ ಕೊಡಿಸಿದ್ದು ನಾನು, ಕುತ್ತಿಗೆ ಕೊಯ್ದು ಹೋದವನು ನೀನು: ಸಚಿವ ನಾರಾಯಣಗೌಡ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!