AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌತುಕ ಸೃಷ್ಟಿಸಿದ ಮಂಡ್ಯ ಲೋಕಸಭಾ ಅಖಾಡ; ಹೈಕಮಾಂಡ್​ ಘೋಷಣೆಗೂ ಮುನ್ನ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ ಲೋಕಸಭಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಒಂದೆಡೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಇನ್ನೊಂದೆಡೆ, ಹೈಕಮಾಂಡ್ ಘೋಷಣೆಗೂ ಮುನ್ನ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯದ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಅವರ ಪರ ಪ್ರಚಾರವನ್ನೂ ಆರಂಭಿಸಿದ್ದಾರೆ.

ಕೌತುಕ ಸೃಷ್ಟಿಸಿದ ಮಂಡ್ಯ ಲೋಕಸಭಾ ಅಖಾಡ; ಹೈಕಮಾಂಡ್​ ಘೋಷಣೆಗೂ ಮುನ್ನ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗ
ಹೈಕಮಾಂಡ್​ ಘೋಷಣೆಗೂ ಮುನ್ನವೇ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗ
Follow us
ಪ್ರಶಾಂತ್​ ಬಿ.
| Updated By: Rakesh Nayak Manchi

Updated on:Feb 22, 2024 | 8:33 AM

ಮಂಡ್ಯ, ಫೆ.22: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ (Mandya) ಲೋಕಸಭಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಒಂದೆಡೆ ಬಿಜೆಪಿ-ಜೆಡಿಎಸ್ (BJP JDS) ಮೈತ್ರಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಇನ್ನೊಂದೆಡೆ, ಹೈಕಮಾಂಡ್ ಘೋಷಣೆಗೂ ಮುನ್ನ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ (Ravikumar Ganiga) ಅವರು ಮಂಡ್ಯದ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಅವರ ಪರ ಪ್ರಚಾರವನ್ನೂ ಆರಂಭಿಸಿದ್ದಾರೆ.

ನಾಗಮಂಗಲದ ಉದ್ಯಮಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೇಗೌಡ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕ್ಷೇತ್ರದ ಮತದಾರರಿಗೆ ಶಾಸಕರ ರವಿ ಗಣಿಗ ಅವರು ಪರಿಚಯ ಮಾಡಿಕೊಡುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಸ್ಟಾರ್ ಚಂದ್ರು ಅವರನ್ನು ನಿಲ್ಲಿಸುತ್ತಿದ್ದೇವೆ. ಆಶೀರ್ವಾದ ಮಾಡುವಂತೆ ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ರಂಗೇರಿದ ಲೋಕ ಅಖಾಡ; ಒಂದೇ ವೇದಿಕೆಯಲ್ಲಿ ಕಾಣಿಸ್ಕೊಂಡ ಮೂರು ಪಕ್ಷಗಳ ಸಂಭಾವ್ಯ ಅಭ್ಯರ್ಥಿಗಳು

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಟಾರ್ ಚಂದ್ರು

ಸ್ಟಾರ್ ಚಂದ್ರು ಅವರನ್ನು ಜನರಿಗೆ ಪರಿಚಯಿಸಲು ಸರ್ಕಾರಿ ಕಾರ್ಯಕ್ರಮಗಳನ್ನೂ ಶಾಸಕರು ಬಳಕೆ ಮಾಡುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರುವ ಸ್ಟಾರ್ ಚಂದ್ರು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡಿದ್ದರು. ಗುದ್ದಲಿ ಪೂಜೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಶಾಸಕರು ತಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗುತ್ತಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 am, Thu, 22 February 24

ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ