AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ

ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್​ ಭದ್ರಕೋಟಯನ್ನು ಛಿದ್ರಗೊಳಿಸುರುವ ಕಾಂಗ್ರೆಸ್, ಇದೀಗ ಮನ್ಮುಲ್ ಚುಕ್ಕಾಣಿ ಹಿಡಿಯಲು ಕಸರತ್ತು ನಡೆಸಿದೆ.

ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ
ಜೆಡಿಎಸ್​​, ಕಾಂಗ್ರೆಸ್​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 03, 2023 | 2:34 PM

Share

ಮಂಡ್ಯ: ಮಂಡ್ಯದ ಮನ್ಮುಲ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 6ರಂದು ಮನ್ಮುಲ್(Mandya Manmul) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮನ್ಮುಲ್ ಹಾಲು ಒಕ್ಕೂಟ  12 ನಿರ್ದೇಶಕರನ್ನು ಹೊಂದಿದ್ದು, 12ರಲ್ಲಿ 7 ಜೆಡಿಎಸ್ ಬೆಂಬಲಿತ ಹಾಗೂ 3 ಕಾಂಗ್ರೆಸ್ ಬೆಂಬಲಿತ ಇಬ್ಬರು ಬಿಜೆಪಿ ಬೆಂಬಲಿತ ನಿರ್ದೇಶಕರು ಇದ್ದು, ಅಧ್ಯಕ್ಷ ಸ್ಥಾನಕ್ಕೆ ಮೂವರು ಸರ್ಕಾರಿ ಅಧಿಕಾರಿಗಳು ಹಾಗೂ 1 ನಾಮನಿರ್ದೇಶಿತ ಸದಸ್ಯ ಸೇರಿ ಒಟ್ಟು 16 ಜನರಿಗೆ ಮತದಾನದ ಹಕ್ಕು ಹೊಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಭದ್ರಕೋಟೆಯಾಗಿದ್ದ ಮಂಡ್ಯವನ್ನು ಛಿದ್ರಗೊಳಿಸಿರುವ ಕಾಂಗ್ರೆಸ್, ಇದೀಗ ಮಂಡ್ಯದ ಮನ್ಮುಲ್ ವಶಕ್ಕೆ ಪಡೆದುಕೊಳ್ಳಲು ರಣತಂತ್ರ ರೂಪಿಸಿದೆ.

ಇದನ್ನೂ ಓದಿ: ಮಂಡ್ಯದೊಳಗೆ ನುಗ್ಗಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಗೊಳಿಸಿದ ಕಾಂಗ್ರೆಸ್​ ಮುಂದಿದೆ ಮತ್ತೊಂದು ಟಾರ್ಗೆಟ್

ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್, ಜೆಡಿಎಸ್ ಪೈಪೋಟಿ ಶುರುವಾಗಿದ್ದು, 2 ಪಕ್ಷಗಳಿಗೂ ಬಿಜೆಪಿ ಬೆಂಬಲಿತರ ನಿರ್ದೇಶಕರ ಬೆಂಬಲ ಅನಿವಾರ್ಯವಾಗಿದೆ. ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್​ ಉಮ್ಮಡಹಳ್ಳಿ ಶಿವಪ್ಪಗೆ ಜೆಡಿಎಸ್​ನ ​ನೆಲ್ಲಿಗೆರೆ ಬಾಲು ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮನ್ಮುಲ್ ಅಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

2018ರಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7ಕ್ಕೆ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಕ್ಲೀನ್​ ಸ್ವಿಪ್​ ಮಾಡಿದ್ದ ಜೆಡಿಎಸ್‌, ಈಗ ಒಂದು ಸ್ಥಾನಕ್ಕೆ ಕುಸಿದು ತನ್ನ ಪ್ರಾಬಲ್ಯವನ್ನು ಕಳೆದುಕೊಂಡಿದೆ. ಇದರ ಮಧ್ಯೆ ಇದೀಗ ಮನ್‌ಮುಲ್‌ ಆಡಳಿತ ಚುಕ್ಕಾಣಿಯನ್ನುಕಳೆದುಕೊಳ್ಳುವ ಪರಿಸ್ಥಿತಿಯಲ್ಲಿ ಜೆಡಿಎಸ್‌ ಇದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ