AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ

ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್​ ಭದ್ರಕೋಟಯನ್ನು ಛಿದ್ರಗೊಳಿಸುರುವ ಕಾಂಗ್ರೆಸ್, ಇದೀಗ ಮನ್ಮುಲ್ ಚುಕ್ಕಾಣಿ ಹಿಡಿಯಲು ಕಸರತ್ತು ನಡೆಸಿದೆ.

ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ
ಜೆಡಿಎಸ್​​, ಕಾಂಗ್ರೆಸ್​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 03, 2023 | 2:34 PM

Share

ಮಂಡ್ಯ: ಮಂಡ್ಯದ ಮನ್ಮುಲ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 6ರಂದು ಮನ್ಮುಲ್(Mandya Manmul) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮನ್ಮುಲ್ ಹಾಲು ಒಕ್ಕೂಟ  12 ನಿರ್ದೇಶಕರನ್ನು ಹೊಂದಿದ್ದು, 12ರಲ್ಲಿ 7 ಜೆಡಿಎಸ್ ಬೆಂಬಲಿತ ಹಾಗೂ 3 ಕಾಂಗ್ರೆಸ್ ಬೆಂಬಲಿತ ಇಬ್ಬರು ಬಿಜೆಪಿ ಬೆಂಬಲಿತ ನಿರ್ದೇಶಕರು ಇದ್ದು, ಅಧ್ಯಕ್ಷ ಸ್ಥಾನಕ್ಕೆ ಮೂವರು ಸರ್ಕಾರಿ ಅಧಿಕಾರಿಗಳು ಹಾಗೂ 1 ನಾಮನಿರ್ದೇಶಿತ ಸದಸ್ಯ ಸೇರಿ ಒಟ್ಟು 16 ಜನರಿಗೆ ಮತದಾನದ ಹಕ್ಕು ಹೊಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಭದ್ರಕೋಟೆಯಾಗಿದ್ದ ಮಂಡ್ಯವನ್ನು ಛಿದ್ರಗೊಳಿಸಿರುವ ಕಾಂಗ್ರೆಸ್, ಇದೀಗ ಮಂಡ್ಯದ ಮನ್ಮುಲ್ ವಶಕ್ಕೆ ಪಡೆದುಕೊಳ್ಳಲು ರಣತಂತ್ರ ರೂಪಿಸಿದೆ.

ಇದನ್ನೂ ಓದಿ: ಮಂಡ್ಯದೊಳಗೆ ನುಗ್ಗಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಗೊಳಿಸಿದ ಕಾಂಗ್ರೆಸ್​ ಮುಂದಿದೆ ಮತ್ತೊಂದು ಟಾರ್ಗೆಟ್

ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್, ಜೆಡಿಎಸ್ ಪೈಪೋಟಿ ಶುರುವಾಗಿದ್ದು, 2 ಪಕ್ಷಗಳಿಗೂ ಬಿಜೆಪಿ ಬೆಂಬಲಿತರ ನಿರ್ದೇಶಕರ ಬೆಂಬಲ ಅನಿವಾರ್ಯವಾಗಿದೆ. ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್​ ಉಮ್ಮಡಹಳ್ಳಿ ಶಿವಪ್ಪಗೆ ಜೆಡಿಎಸ್​ನ ​ನೆಲ್ಲಿಗೆರೆ ಬಾಲು ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮನ್ಮುಲ್ ಅಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

2018ರಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7ಕ್ಕೆ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಕ್ಲೀನ್​ ಸ್ವಿಪ್​ ಮಾಡಿದ್ದ ಜೆಡಿಎಸ್‌, ಈಗ ಒಂದು ಸ್ಥಾನಕ್ಕೆ ಕುಸಿದು ತನ್ನ ಪ್ರಾಬಲ್ಯವನ್ನು ಕಳೆದುಕೊಂಡಿದೆ. ಇದರ ಮಧ್ಯೆ ಇದೀಗ ಮನ್‌ಮುಲ್‌ ಆಡಳಿತ ಚುಕ್ಕಾಣಿಯನ್ನುಕಳೆದುಕೊಳ್ಳುವ ಪರಿಸ್ಥಿತಿಯಲ್ಲಿ ಜೆಡಿಎಸ್‌ ಇದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು