ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ

ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್​ ಭದ್ರಕೋಟಯನ್ನು ಛಿದ್ರಗೊಳಿಸುರುವ ಕಾಂಗ್ರೆಸ್, ಇದೀಗ ಮನ್ಮುಲ್ ಚುಕ್ಕಾಣಿ ಹಿಡಿಯಲು ಕಸರತ್ತು ನಡೆಸಿದೆ.

ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ
ಜೆಡಿಎಸ್​​, ಕಾಂಗ್ರೆಸ್​
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 03, 2023 | 2:34 PM

ಮಂಡ್ಯ: ಮಂಡ್ಯದ ಮನ್ಮುಲ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 6ರಂದು ಮನ್ಮುಲ್(Mandya Manmul) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮನ್ಮುಲ್ ಹಾಲು ಒಕ್ಕೂಟ  12 ನಿರ್ದೇಶಕರನ್ನು ಹೊಂದಿದ್ದು, 12ರಲ್ಲಿ 7 ಜೆಡಿಎಸ್ ಬೆಂಬಲಿತ ಹಾಗೂ 3 ಕಾಂಗ್ರೆಸ್ ಬೆಂಬಲಿತ ಇಬ್ಬರು ಬಿಜೆಪಿ ಬೆಂಬಲಿತ ನಿರ್ದೇಶಕರು ಇದ್ದು, ಅಧ್ಯಕ್ಷ ಸ್ಥಾನಕ್ಕೆ ಮೂವರು ಸರ್ಕಾರಿ ಅಧಿಕಾರಿಗಳು ಹಾಗೂ 1 ನಾಮನಿರ್ದೇಶಿತ ಸದಸ್ಯ ಸೇರಿ ಒಟ್ಟು 16 ಜನರಿಗೆ ಮತದಾನದ ಹಕ್ಕು ಹೊಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಭದ್ರಕೋಟೆಯಾಗಿದ್ದ ಮಂಡ್ಯವನ್ನು ಛಿದ್ರಗೊಳಿಸಿರುವ ಕಾಂಗ್ರೆಸ್, ಇದೀಗ ಮಂಡ್ಯದ ಮನ್ಮುಲ್ ವಶಕ್ಕೆ ಪಡೆದುಕೊಳ್ಳಲು ರಣತಂತ್ರ ರೂಪಿಸಿದೆ.

ಇದನ್ನೂ ಓದಿ: ಮಂಡ್ಯದೊಳಗೆ ನುಗ್ಗಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಗೊಳಿಸಿದ ಕಾಂಗ್ರೆಸ್​ ಮುಂದಿದೆ ಮತ್ತೊಂದು ಟಾರ್ಗೆಟ್

ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್, ಜೆಡಿಎಸ್ ಪೈಪೋಟಿ ಶುರುವಾಗಿದ್ದು, 2 ಪಕ್ಷಗಳಿಗೂ ಬಿಜೆಪಿ ಬೆಂಬಲಿತರ ನಿರ್ದೇಶಕರ ಬೆಂಬಲ ಅನಿವಾರ್ಯವಾಗಿದೆ. ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್​ ಉಮ್ಮಡಹಳ್ಳಿ ಶಿವಪ್ಪಗೆ ಜೆಡಿಎಸ್​ನ ​ನೆಲ್ಲಿಗೆರೆ ಬಾಲು ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮನ್ಮುಲ್ ಅಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

2018ರಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7ಕ್ಕೆ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಕ್ಲೀನ್​ ಸ್ವಿಪ್​ ಮಾಡಿದ್ದ ಜೆಡಿಎಸ್‌, ಈಗ ಒಂದು ಸ್ಥಾನಕ್ಕೆ ಕುಸಿದು ತನ್ನ ಪ್ರಾಬಲ್ಯವನ್ನು ಕಳೆದುಕೊಂಡಿದೆ. ಇದರ ಮಧ್ಯೆ ಇದೀಗ ಮನ್‌ಮುಲ್‌ ಆಡಳಿತ ಚುಕ್ಕಾಣಿಯನ್ನುಕಳೆದುಕೊಳ್ಳುವ ಪರಿಸ್ಥಿತಿಯಲ್ಲಿ ಜೆಡಿಎಸ್‌ ಇದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ