ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ

ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್​ ಭದ್ರಕೋಟಯನ್ನು ಛಿದ್ರಗೊಳಿಸುರುವ ಕಾಂಗ್ರೆಸ್, ಇದೀಗ ಮನ್ಮುಲ್ ಚುಕ್ಕಾಣಿ ಹಿಡಿಯಲು ಕಸರತ್ತು ನಡೆಸಿದೆ.

ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ
ಜೆಡಿಎಸ್​​, ಕಾಂಗ್ರೆಸ್​
Edited By:

Updated on: Jul 03, 2023 | 2:34 PM

ಮಂಡ್ಯ: ಮಂಡ್ಯದ ಮನ್ಮುಲ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 6ರಂದು ಮನ್ಮುಲ್(Mandya Manmul) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮನ್ಮುಲ್ ಹಾಲು ಒಕ್ಕೂಟ  12 ನಿರ್ದೇಶಕರನ್ನು ಹೊಂದಿದ್ದು, 12ರಲ್ಲಿ 7 ಜೆಡಿಎಸ್ ಬೆಂಬಲಿತ ಹಾಗೂ 3 ಕಾಂಗ್ರೆಸ್ ಬೆಂಬಲಿತ ಇಬ್ಬರು ಬಿಜೆಪಿ ಬೆಂಬಲಿತ ನಿರ್ದೇಶಕರು ಇದ್ದು, ಅಧ್ಯಕ್ಷ ಸ್ಥಾನಕ್ಕೆ ಮೂವರು ಸರ್ಕಾರಿ ಅಧಿಕಾರಿಗಳು ಹಾಗೂ 1 ನಾಮನಿರ್ದೇಶಿತ ಸದಸ್ಯ ಸೇರಿ ಒಟ್ಟು 16 ಜನರಿಗೆ ಮತದಾನದ ಹಕ್ಕು ಹೊಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಭದ್ರಕೋಟೆಯಾಗಿದ್ದ ಮಂಡ್ಯವನ್ನು ಛಿದ್ರಗೊಳಿಸಿರುವ ಕಾಂಗ್ರೆಸ್, ಇದೀಗ ಮಂಡ್ಯದ ಮನ್ಮುಲ್ ವಶಕ್ಕೆ ಪಡೆದುಕೊಳ್ಳಲು ರಣತಂತ್ರ ರೂಪಿಸಿದೆ.

ಇದನ್ನೂ ಓದಿ: ಮಂಡ್ಯದೊಳಗೆ ನುಗ್ಗಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಗೊಳಿಸಿದ ಕಾಂಗ್ರೆಸ್​ ಮುಂದಿದೆ ಮತ್ತೊಂದು ಟಾರ್ಗೆಟ್

ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್, ಜೆಡಿಎಸ್ ಪೈಪೋಟಿ ಶುರುವಾಗಿದ್ದು, 2 ಪಕ್ಷಗಳಿಗೂ ಬಿಜೆಪಿ ಬೆಂಬಲಿತರ ನಿರ್ದೇಶಕರ ಬೆಂಬಲ ಅನಿವಾರ್ಯವಾಗಿದೆ. ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್​ ಉಮ್ಮಡಹಳ್ಳಿ ಶಿವಪ್ಪಗೆ ಜೆಡಿಎಸ್​ನ ​ನೆಲ್ಲಿಗೆರೆ ಬಾಲು ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮನ್ಮುಲ್ ಅಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

2018ರಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7ಕ್ಕೆ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಕ್ಲೀನ್​ ಸ್ವಿಪ್​ ಮಾಡಿದ್ದ ಜೆಡಿಎಸ್‌, ಈಗ ಒಂದು ಸ್ಥಾನಕ್ಕೆ ಕುಸಿದು ತನ್ನ ಪ್ರಾಬಲ್ಯವನ್ನು ಕಳೆದುಕೊಂಡಿದೆ. ಇದರ ಮಧ್ಯೆ ಇದೀಗ ಮನ್‌ಮುಲ್‌ ಆಡಳಿತ ಚುಕ್ಕಾಣಿಯನ್ನುಕಳೆದುಕೊಳ್ಳುವ ಪರಿಸ್ಥಿತಿಯಲ್ಲಿ ಜೆಡಿಎಸ್‌ ಇದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us