AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಸರಿ ಪಾಳಯದಲ್ಲಿ ಸುಮಲತಾ ಅಂಬರೀಶ್: ಸಂಚಲನ ಮೂಡಿಸಿದ ‘ಸ್ವಾಭಿಮಾನಿ’ ಸಂಸದೆಯ ರಾಜಕೀಯ ನಡೆ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ತಾರೆ ಎನ್ನುವ ಅಂತೆ-ಕಂತೆಗಳ ಸುದ್ದಿ ಕಳೆದ ಒಂದು ವರ್ಷದಿಂದ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಇದೀಗ 'ಸ್ವಾಭಿಮಾನಿ' ಸಂಸದೆಯ ಫೋಟೋ ಕೇಸರಿ ಪಾಳಯದಲ್ಲಿ ರಾರಾಜಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಕೇಸರಿ  ಪಾಳಯದಲ್ಲಿ ಸುಮಲತಾ ಅಂಬರೀಶ್: ಸಂಚಲನ ಮೂಡಿಸಿದ 'ಸ್ವಾಭಿಮಾನಿ' ಸಂಸದೆಯ ರಾಜಕೀಯ ನಡೆ
Mandya BJP
TV9 Web
| Edited By: |

Updated on: Dec 29, 2022 | 4:03 PM

Share

ಮಂಡ್ಯ: ಸಕ್ಕರೆ ನಾಡು ಮಂಡ್ಯ (mandya)ಗೆ ನಾಳೆ (ಡಿಸೆಂಬರ್ 30) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಗಮಿಸುತ್ತಿದ್ದಾರೆ.ಈ ಹಿನ್ನೆಲೆ ಮಂಡ್ಯ ನಗರ ಫುಲ್ ಕೇಸರಿಮಯವಾಗಿದೆ. ಜೊತೆಗೆ ಅಮಿತ್ ಶಾ ಅವರನ್ನು ಸ್ವಾಗತಿಸಿ ಹಾಕಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಫೋಟೋ ರಾರಾಜಿಸುತ್ತಿದೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚನಲ ಮೂಡಿಸಿದೆ.

ಇದನ್ನೂ ಓದಿ: Amit Shah: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ಅಮಿತ್ ಶಾ 3 ದಿನ ರಾಜ್ಯ ಪ್ರವಾಸ: ಇಲ್ಲಿದೆ ವೇಳಾಪಟ್ಟಿ

ಹೌದು… ನಾಳೆ(ಶುಕ್ರವಾರ) 11 ಗಂಟೆಗೆ ಮಂಡ್ಯಗೆ ಹೆಲಿಕಾಪ್ಟರ್ ಮೂಲಕ ಬರಲಿರುವ ಅಮಿತ್ ಶಾ, 11.15ಕ್ಕೆ ಗೆಜ್ಜಲಗೆರೆಯ ಮನ್‍ಮುಲ್‍ನ ಮೆಗಾ ಡೈರಿ ಉದ್ಘಾಟನೆ ಮಾಡಲಿದ್ದಾರೆ. ಇದರಿಂದ ಮಂಡ್ಯದ ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದೆ. ಜೊತೆಗೆ ಅಮಿತ್ ಶಾ ಸ್ವಾಗತಕ್ಕೆ ಕೋರುವ ಫ್ಲೆಕ್ಸ್ ಗಳು ಕೂಡ ರಾರಾಜಿಸುತ್ತಿವೆ. ಅಮಿತ್ ಶಾಗೆ ಸ್ವಾಗತ ಕೋರಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಭಾವಚಿತ್ರವಿರುವುದು ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾದ ಆಪ್ತ ಇಂಡವಾಳು ಸಚ್ಚಿದಾನಂದ (Indavalu Sacchidananda) ಸ್ವಾಗತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ. ಸುಮಲತಾ ಅನುಮತಿ ಪಡೆದೆ ಬಿಜೆಪಿ ಸೇರಿರುವುದಾಗಿ ಹೇಳಿದ್ದ ಸಚ್ಚಿದಾನಂದ, ಇದೀಗ ಆಪ್ತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಇರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: Karnataka Assembly Election 2023: ತಮ್ಮ ಸಾಧನೆ ತಿಳಿಸಲು ಮನೆ ಮನೆಗೆ ಸಂಪರ್ಕ ಅಭಿಯಾನಕ್ಕೆ ಮುಂದಾದ ಬಿಜೆಪಿ

ಸಂಸದೆ ಸಮುಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಕಳೆದ ಒಂದು ವರ್ಷದಿಂದಲೂ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂಕರವೆಂಬಂತೆ ಸುಮಲತಾ ಅಂಬರೀಶ್ ಅವರ ಆಪ್ತ ಇಂಡವಾಳು ಸಚ್ಚಿದಾನಂದ ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿದ್ದು, ಮುಂದಿನ ದಿನಗಳಲ್ಲಿ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಸೇರ್ತಾರೆ ಎನ್ನುವ ಅಂತೆ ಕಂತೆ ಸುದ್ದಿ ಇದೆ. ಇದೀಗ ಶಾ ಫೆಕ್ಸ್​ಗಳಲ್ಲಿ ಭಾವಚಿತ್ರದೊಂದಿಗೆ ಬಿಜೆಪಿ ಸೇರ್ಪಡೆಯಾಗುವ ಸುಳಿವು ನೀಡಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಇನ್ನು ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲಪಡಿಸುವಂತೆ ಹೈಕಮಾಂಡ್​ ರಾಜ್ಯ ನಾಯಕರಿಗೆ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು , ಹಳೇ ಮೈಸೂರು ಭಾಗದ ಬೇರೆ-ಬೇರೆ ಪಕ್ಷದ ಪ್ರಮುಖ ನಾಯಕರಿಗೆ ಗಾಳ ಹಾಕುತ್ತಿದೆ. ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸಲು ಸುಮಲತಾ ಅಂಬರೀಶ್ ಅವರಿಗೂ ಸಹ ಗಾಳ ಹಾಕಿದ್ದು, ಒಂದೆರಡು ಸುತ್ತಿನ ಮಾತುಕತೆಗಳು ಸಹ ನಡೆದಿವೆ ಎನ್ನಲಾಗಿದೆ. ಆದ್ರೆ, ಇದನ್ನು ಸ್ವತಃ ಸಂಸದೆ ಸುಮಲತಾ ಅವರು ಅಲ್ಲಗಳೆದಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ನಾಯಕರ ಫೆಕ್ಸ್​ನಲ್ಲಿ ಸ್ವಾಭಿಮಾನಿ ಸುಮಲತಾ ಅಂಬರೀಶ್ ಅವರ ಫೋಟೋ ರಾರಾಜಿಸುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಸಂಲಚನ ಮೂಡಿಸಿದ್ದು, ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?