AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ರಾಜಕಾರಣದ ಸೆಂಟರ್‌ ಆಫ್ ಅಟ್ರಾಕ್ಷನ್ ಆಯ್ತು ಮಂಡ್ಯ, ಹಲ್‌ಚಲ್ ಎಬ್ಬಿಸಿದ ಸುಮಲತಾ ರಾಜಕೀಯ ನಿಗೂಢ ಹೆಜ್ಜೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ರಾಜಕಾರಣದ ಸೆಂಟರ್‌ ಆಫ್ ಅಟ್ರಾಕ್ಷನ್ ಆಗಿತ್ತು, ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಸಹ ಮಂಡ್ಯ ಭಾರೀ ಸದ್ದು ಮಾಡುತ್ತಿದೆ. ಅದರರಲ್ಲೂ ಸಂಸದೆ ಸುಮಲತಾ ಅಂಬರೀಶ್​ ರಾಜಕೀಯ ನಡೆ ಹಲ್‌ಚಲ್ ಎಬ್ಬಿಸಿದೆ.

ಮತ್ತೆ ರಾಜಕಾರಣದ ಸೆಂಟರ್‌ ಆಫ್ ಅಟ್ರಾಕ್ಷನ್ ಆಯ್ತು ಮಂಡ್ಯ, ಹಲ್‌ಚಲ್ ಎಬ್ಬಿಸಿದ ಸುಮಲತಾ ರಾಜಕೀಯ ನಿಗೂಢ ಹೆಜ್ಜೆ
ರಮೇಶ್ ಬಿ. ಜವಳಗೇರಾ
|

Updated on: Mar 05, 2023 | 1:27 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಮೀಪಿಸುತ್ತಿದ್ದಂತೆಯೇ ಪಕ್ಷಾಂತರ ಪರ್ವ ಜೋರಾಗಿದೆ. ಇದರ ಮಧ್ಯೆ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌(Sumalatha Ambareesh) ಅವರ ರಾಜಕೀಯ ನಡೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ರಾಜ್ಯ ರಾಜಕಾರಣದಲ್ಲಿ ಇರಲು ಸುಮಕತಾ ಅಂಬರೀಶ್ ಬಯಸಿದ್ದು, ಇದಕ್ಕಾಗಿ ಯಾವುದಾದರೂ ಒಂದು ರಾಷ್ಟ್ರೀಯ ಪಕ್ಷ ಸೇರಲು ಚಿಂತನೆ ನಡೆಸಿದ್ದಾರೆ. ಮೂಲಗಳ ಪ್ರಕಾರ ಈಗಾಗಲೇ ಬಿಜೆಪಿಯ ಪ್ರಮುಖ ನಾಯಕರೊಂದಿಗೆ ಸುಮಲತಾ ಎರಡ್ಮೂರು ಸುತ್ತಿನ ಮಾತುಕತೆ ನಡೆಸಿದ್ದು, ಇದೀಗ ಆಪ್ತರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ಎಸ್​ಎಂ ಕೃಷ್ಣ ಭೇಟಿಯಾದ ಸಂಸದೆ ಸುಮಲತಾ; ಬಿಜೆಪಿ ಸೇರ್ಪಡೆ ಬಗ್ಗೆ ಏನಂದ್ರು ನೋಡಿ

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ತಾರಾ..? ಈ ಚುನಾವಣೆಯಲ್ಲೇ ಬಿಜೆಪಿಯಿಂದ ವಿಧಾನಸಭಾ ಅಖಾಡಕ್ಕೆ ಧುಮುಕುತ್ತಾರಾ..? ಹೀಗೆ ನಾನಾ ಪ್ರಶ್ನೆಗಳು ಮಂಡ್ಯ ರಾಜಕೀಯದಲ್ಲಿ ಹರಿದಾಡುತ್ತಿವೆ. ಮಂಡ್ಯದಲ್ಲಿ ತಮ್ಮ ಆಪ್ತರು ಹಾಗೂ ಬೆಂಬಲಿಗರೊಂದಿಗೆ ಹಲವು ಸುತ್ತಿನ ಸಭೆ ನಡೆಸಿರುವ ಸುಮಲತಾ ಅವರು ನಿನ್ನೆ(ಶನಿವಾರ) ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಭೆ ನಡೆಸಿ ಅಭಿಪ್ರಾಯ ಆಲಿಸಿದರು. ಕಾಂಗ್ರೆಸ್‌ ಅಥವಾ ಬಿಜೆಪಿ ಪೈಕಿ ಯಾವ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂಬುದರ ಬಗ್ಗೆ ಬಹುತೇಕ ಮುಂದಿನ ವಾರ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಬಿಜೆಪಿಯತ್ತ ಸುಮಲತಾ ಒಲವು?

ಹೌದು…ಸುಮತಾ ಅಂಬರೀಶ್ ಅವರ ಚಿತ್ತ ಹೆಚ್ಚಾಗಿ ಬಿಜೆಪಿಯತ್ತ ನೆಟ್ಟಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸುಮಲತಾರ ನಿಗೂಢ ಹೆಜ್ಜೆಗಳು ಕುತೂಹಲ ಕೆರಳಿಸಿವೆ. ಪ್ರಹ್ಲಾದ್ ಜೋಶಿ ಜೊತೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದ ಸುಮಲತಾ, ಮೋದಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದರು. ಮೋದಿಯನ್ನ ಹಾಡಿ ಹೊಗಳಿದ್ರು. ಇನ್ನೊಂದೆಜ್ಜೆ ಮುಂದೆ ಹೋಗಿ ಇವತ್ತು ಬಿಜೆಪಿ ಹಿರಿಯ ಮುಖಂಡ ಎಸ್‌.ಎಂ ಕೃಷ್ಣರನ್ನ ಭೇಟಿ ಮಾಡಿ ರಾಜಕೀಯ ನಡೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಆದ್ರೆ, ಇನ್ನೂ ಬಿಜೆಪಿಗೆ ಸೇರುವ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಡದ ಸುಮಲತಾ, ಸದ್ಯಕ್ಕೆ ಯಾವುದೇ ತೀರ್ಮಾನ ಮಾಡಿಲ್ಲ. ಆಪ್ತರು, ಕಾರ್ಯಕರ್ತರು, ಕುಟುಂಬದವರು, ಹಿರಿಯರ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ.

ಮೂಲಗಳ ಪ್ರಕಾರ ರಾಜ್ಯ ರಾಜಕಾರಣಕ್ಕೆ ಸುಮಲತಾ ಪ್ರವೇಶ ಬಹುತೇಕ ಫಿಕ್ಸ್ ಆದಂತಿದೆ. ಅಲ್ಲದೇ, ಬಿಜೆಪಿಯಿಂದಲೇ ಸ್ಪರ್ಧೆ ಮಾಡುವುದು ಪಕ್ಕಾ ಎಂಬ ಮಾತುಗಳು ಕೇಳಿಬರುತ್ತಿವೆ. ಆದ್ರೆ, ಮಂಡ್ಯದಿಂದ ಕಣಕ್ಕಿಳಿತಾರಾ, ಮದ್ದೂರಿನಿಂದ ಸ್ಪರ್ಧಿಸುತ್ತಾರಾ? ಎನ್ನುವುದು ಇನ್ನೂ ನಿಗೂಢ. ಒಂದು ವೇಳೆ ಸುಮಲತಾ ವಿಧಾನಸಭೆಗೆ ಮಂಡ್ಯದಿಂದ ಸ್ಪರ್ಧಿಸಿದರೆ, ಎದುರಾಳಿಯಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್​ನಿಂದ ಯಾರು ಕಣಕ್ಕಿಳಿತಾರೆ ಎನ್ನುವುದು ಈ ಕ್ಷಣಕ್ಕೂ ಮಂಡ್ಯ ಕಣ ಕುತೂಹಲವಾಗಿಯೇ ಉಳಿದಿದೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?