AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಿರ್ಧಾರಗಳಿಗೂ ನನಗೂ ಸಂಬಂಧವಿಲ್ಲ ಎಂದ ಮಂಡ್ಯ ಸಂಸದೆ ಸುಮಲತಾ; ಬೆಂಬಲದ ಬಗ್ಗೆ ಹೇಳಿದ್ದೇನು?

Mandya MP Sumalatha Ambareesh Reaction on BJP decisions; ಎಲ್ಲವನ್ನೂ ನನ್ನ ಬಳಿ ಕೇಳಿಯೇ ಬಿಜೆಪಿಯವರು ಮಾಡಬೇಕು ಎಂಬುದೇನೂ ಇಲ್ಲ. ಮೈತ್ರಿ ನೆಲೆಯಲ್ಲಿ ಏನು ಮಾತನಾಡಬೇಕೋ ಅಷ್ಟೇ ಹೇಳಬಹುದಲ್ಲದೆ ಪ್ರತಿಯೊಂದು ವಿಷಯದಲ್ಲಿಯೂ ನಾನು ಮಧ್ಯಪ್ರವೇಶಿಸಲಾಗದು ಎಂದು ಸುಮಲತಾ ಹೇಳಿದ್ದಾರೆ.

TV9 Web
| Updated By: Ganapathi Sharma|

Updated on: Aug 19, 2023 | 1:40 PM

Share

ಮಂಡ್ಯ, ಆಗಸ್ಟ್ 19: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ (Sumalatha Ambareesh), ಬಿಜೆಪಿ (BJP) ನಿರ್ಧಾರಗಳಿಗೂ ನನಗೂ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಆದರೆ, ಬಿಜೆಪಿಗೆ ನೀಡಿರುವ ಬೆಂಬಲ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ನಾಯಕರು ಮಾಡಿರುವ ಆರೋಪಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೂ ನನಗೂ ಸಂಬಂಧವಿಲ್ಲ. ಯಾರು ಆರೋಪ ಮಾಡಿದ್ದಾರೆಯೋ ಅವರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಹೀಗಿರುವಾಗ ಆ ವಿಚಾರವಾಗಿ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.

ಸುಮಲತಾ ಹೇಳಿದ್ದೇನು?

ನಾನು ಬಿಜೆಪಿ ಸಂಸದೆ ಅಲ್ಲ, ಸ್ವತಂತ್ರ ಅಭ್ಯರ್ಥಿಯಾಗಿ ಸಂಸದೆಯಾಗಿ ಆಯ್ಕೆಯಾದವಳು ಎಂಬುದನ್ನು ನೆನಪಿಟ್ಟುಕೊಳ್ಳಿ. ಬಿಜೆಪಿಗೆ ಬೆಂಬಲ ನೀಡಿರುವುದು. ನೀಡುತ್ತಿರುವುದು ನಿಜ. ಹಾಗೆಂದು ಅವರು ಕೈಗೊಂಡ ನಿರ್ಧಾರಗಳಿಗೂ ನನಗೂ ಸಂಬಂಧ ಇರುವುದಿಲ್ಲ. ಸ್ವತಂತ್ರವಾಗಿ ನನ್ನದೇ ಆದ ಅನಿಸಿಕೆಗಳನ್ನು ವ್ಯಕ್ತಪಡಿಸಲು ನನಗೂ ಸ್ವಾತಂತ್ರ್ಯವಿದೆ. ನನ್ನ ನಿಲುವು ಏನು ಎಂಬುದನ್ನು ನಾನು ಸ್ಪಷ್ಟಪಡಿಸುತ್ತೇನೆ. ಪಕ್ಷದ ನಿಲುವಿನ ಬಗ್ಗೆ ಸಂಬಂಧಪಟ್ಟವರಲ್ಲಿ ಅಥವಾ ಪಕ್ಷದ ವಕ್ತಾರರ ಬಳಿ ಕೇಳಬಹುದು ಎಂದು ಸುಮಲತಾ ಹೇಳಿದ್ದಾರೆ.

ಎಲ್ಲವನ್ನೂ ನನ್ನ ಬಳಿ ಕೇಳಿಯೇ ಬಿಜೆಪಿಯವರು ಮಾಡಬೇಕು ಎಂಬುದೇನೂ ಇಲ್ಲ. ಮೈತ್ರಿ ನೆಲೆಯಲ್ಲಿ ಏನು ಮಾತನಾಡಬೇಕೋ ಅಷ್ಟೇ ಹೇಳಬಹುದಲ್ಲದೆ ಪ್ರತಿಯೊಂದು ವಿಷಯದಲ್ಲಿಯೂ ನಾನು ಮಧ್ಯಪ್ರವೇಶಿಸಲಾಗದು ಎಂದು ಸುಮಲತಾ ಹೇಳಿದ್ದಾರೆ.

ಇದನ್ನೂ ಓದಿ: Karnataka Politics: ಬಿಜೆಪಿಗೆ ಮತ್ತೆ ಅನಿವಾರ್ಯವಾದರೇ ಬಿಎಸ್ ಯಡಿಯೂರಪ್ಪ, ಇತ್ತೀಚಿನ ಬೆಳವಣಿಗೆಗಳು ಹೇಳುವುದೇನು?

ಬಿಜೆಪಿಯ ನಿರ್ಧಾರಗಳಿಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಲಾರೆ. ಹಾಗೆಂದು ನನ್ನ ಸ್ವಂತ ಅಭಿಪ್ರಾಯ ನನ್ನದು. ಪಕ್ಷದ ನಿಲುವನ್ನು ನನ್ನ ಬಳಿ ತಿಳಿಸಿ, ಅದರ ಬಗ್ಗೆ ನನಗೆ ಸಹಮತ ಮೂಡಿದರೆ ಖಂಡಿತಾ ಬೆಂಬಲಿಸುತ್ತೇನೆ. ಈ ವಿಚಾರದಲ್ಲಿ ಅಷ್ಟು ಬೆಳವಣಿಗೆ ಆಗಿಲ್ಲ. ಈಗ ಸಭೆ ನಡೆದ ನಂತರ ಎಲ್ಲವೂ ಗೊತ್ತಾಗಲಿದೆ ಎಂದು ಅವರು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ