ಲೋಕಸಭೆಯಲ್ಲಿ ಸುಮಲತಾ ಬರಪರಿಸ್ಥಿತಿ ಬಗ್ಗೆ ಪ್ರಸ್ತಾಪಿದ್ರೆ, ಜಾತಿ ಮೀಸಲಾತಿ ಕೊಡಿ ಎಂದ ಬಿಜೆಪಿ ಸಂಸದ

ಮಂಡ್ಯ ಪಕ್ಷೇತರ ಸಂಸದ ಸುಮಲತಾ ಅಂಬರೀಶ್ ಅವರು ಲೋಕಸಭಾ ಅಧಿವೇಶನದಲ್ಲಿಂದು ಕರ್ನಾಟಕದಲ್ಲಿ ಎದುರಾಗಿರುವ ಬರಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದ್ರೆ, ಮತ್ತೊಂದೆಡೆ ಬಿಜೆಪಿ ಸಂಸದರೊಬ್ಬರು ಜಾತಿ ಮೀಸಲಾತಿ ಬಗ್ಗೆ ಪ್ರಸ್ತಾಪಿಸಿದ್ದಾರೆ.

Follow us
| Updated By: ರಮೇಶ್ ಬಿ. ಜವಳಗೇರಾ

Updated on:Dec 12, 2023 | 4:19 PM

ನವದೆಹಲಿ, (ಡಿಸೆಂಬರ್ 12): ಮಂಡ್ಯ ಪಕ್ಷೇತರ ಸಂಸದ ಸುಮಲತಾ ಅಂಬರೀಶ್ (Sumalatha Ambareesh) ಅವರು ಲೋಕಸಭಾ ಅಧಿವೇಶನದಲ್ಲಿಂದು (Loksabha Session 2023) ಕರ್ನಾಟಕದಲ್ಲಿ ಎದುರಾಗಿರುವ ಬರಪರಿಸ್ಥಿತಿ (drought) ಬಗ್ಗೆ ಪ್ರಸ್ತಾಪಿಸಿದ್ದಾರೆ. ಇಂದು(ಡಿಸೆಂಬರ್ 12) ಶೂನ್ಯವೇಳೆಯಲ್ಲಿ ಮಾತನಾಡಿದ ಸುಮಲತಾ, 2023ರಲ್ಲಿ ಇಂದೆಂದೂ ಕಾಣದ ಉಷ್ಣತೆ ಹೆಚ್ಚಾಗಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಮಾನ್ಸೂನ್ ಕ್ಷೀಣಿಸಿದೆ. ಇದರ ಪರಿಣಾಮ ರಾಜ್ಯದ 223 ತಾಲೂಕುಗಳು ಬರ ಪೀಡಿತವಾಗಿವೆ. ಅಂದಾಜು 30 ಸಾವಿರ ಕೋಟಿ‌ ರೂಪಾಯಿಯಷ್ಟು ನಷ್ಟವಾಗಿದೆ. ಹೀಗಾಗಿ ಕರ್ನಾಟಕದ ರೈತರಿಗೆ ನೆರವಾಗಬೇಕು ಎಂದು ಪ್ರಧಾನಿ ನರೇಂದ್ರ ಅವರಿಗೆ ಮನವಿ ಮಾಡಿದರು.

ಮಂಡ್ಯದ ಎಲ್ಲಾ ತಾಲೂಕುಗಳನ್ನು ಬರ ಪೀಡಿತವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. 60ರಿಂದ 70 ಪರ್ಸೆಂಟ್ ಬೆಳೆ ನಾಶವಾಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ವಿಮೆ ಲಭ್ಯವಾಗಿಲ್ಲ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟದ ರೈತರ ನೆರವಿಗೆ ಧಾವಿಸಬೇಕು. ಅಲ್ಲದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Belagavi Session: ಮತ್ತೆ ಬಿಜೆಪಿಗೆ ಮುಜುಗರ ತರುವ ರೀತಿಯಲ್ಲಿ ಮಾತನಾಡಿದ ಯತ್ನಾಳ್

ಜಾತಿ ಮೀಸಲಾತಿ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ಸಂಸದ

ಸುಮಲತಾ ಅಂಬರೀಶ್ ಅವರು ಕರ್ನಾಟಕದಲ್ಲಿನ ಬರಪರಿಸ್ಥಿತಿಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದರೆ, ಮತ್ತೊಂದೆ ಕಲಬುರಗಿ ಬಿಜೆಪಿ ಸಂಸದ ಜಾತಿ ಮೀಸಲಾತಿ ಬಗ್ಗೆ ಮಾತನಾಡಿದ್ದಾರೆ. ಲೋಕಸಭೆಯ ಶೂನ್ಯವೇಳೆಯಲ್ಲಿ ವೇಳೆಯಲ್ಲಿ ಮಾತನಾಡಿದ ಉಮೇಶ್ ಜಾಧವ್, ಕೋಲಿ, ಕಬ್ಬಲಿಗ, ಗಂಗಾಮತಸ್ಥ ಸಮುದಾಯವನ್ನು ಎಸ್​ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.

ಓರ್ವ ಮಹಿಳಾ ಸಂಸದೆ ಕರ್ನಾಟಕದಲ್ಲಿನ ಭೀಕರ ಬರಪರಿಸ್ಥಿತಿಯನ್ನು ಸದನದಲ್ಲಿ ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ಗಮನ ಸೆಳೆದರೆ, ಬಿಜೆಪಿ ಸಂಸದ ಉಮೇಶ್ ಜಾಧವ್ ಮಾತ್ರ ಬರಪರಿಸ್ಥಿತಿ ಬಗ್ಗೆ ಒಂದು ಮಾತು ತುಟಿಕ್​ ಪಿಟಿಕ್​ ಎನ್ನದೇ ಕೇವಲ ಜಾತಿ ಮೀಸಲಾತಿ ಬಗ್ಗೆ ಮಾತನಾಡಿರುವುದು ದುರಂತ.

ಸುಮಲತಾ ಅಂಬರೀಶ್ ಅವರನ್ನು ಹೊರತುಪಡಿಸಿದರೆ ಈವರೆಗೂ ಕರ್ನಾಟಕದ ಯಾವೊಬ್ಬ ಸಂಸದ ರಾಜ್ಯದ ಬರಪರಿಸ್ಥಿತಿ ಬಗ್ಗೆ ಲೋಕಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿಲ್ಲ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 12 December 23