Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕೋಡಿ ಲೋಕಾಸಭಾ ಬಿಜೆಪಿ ಟಿಕೆಟ್​ಗಾಗಿ ಕಸರತ್ತು; ಮೂವರ ಮಧ್ಯೆ ಫೈಟ್​

ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು‌ ಬಾಕಿ ಇದ್ದು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈಗಿನಿಂದಲೇ ಬಿಜೆಪಿ ಟಿಕೆಟ್​ಗಾಗಿ ನಾಯಕರ ಮಧ್ಯೆ ಮುಸುಕಿನ ಗುದ್ದಾಟ ಜೋರಾಗಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಫುಲ್ ಆ್ಯಕ್ಟೀವ್ ಆಗಿದ್ದು, ಅದ್ಧೂರಿಯಾಗಿ ತಮ್ಮ ಜನ್ಮದಿನ ಕೂಡ ಆಚರಿಸಿಕೊಂಡಿದ್ದಾರೆ. ಮತ್ತೊಂದೆಡೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಿನಿಂದಲೇ ಹಾಲಿ ಸಂಸದರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ಚಿಕ್ಕೋಡಿ ಲೋಕಾಸಭಾ ಬಿಜೆಪಿ ಟಿಕೆಟ್​ಗಾಗಿ ಕಸರತ್ತು; ಮೂವರ ಮಧ್ಯೆ ಫೈಟ್​
ಮಹಾಂತೇಶ ಕವಟಗಿಮಠ, ಅಣ್ಣಾಸಾಹೇಬ ಜೊಲ್ಲೆ, ರಮೇಶ್ ಕತ್ತಿ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 08, 2023 | 9:28 PM

ಬೆಳಗಾವಿ, ಅ.08: ಲೋಕಸಭೆ ಚುನಾವಣೆ(Loka Sabha Elections)ಗೆ ಕೆಲವೇ ತಿಂಗಳುಗಳು ಬಾಕಿ ಇದ್ದು, ಚಿಕ್ಕೋಡಿ (Chikkodi) ಬಿಜೆಪಿ ಪಾಳಯದಲ್ಲಿ ಟಿಕೆಟ್​ ಪಡೆಯಲು ಈಗಿನಿಂದಲೇ ತೆರೆಮರೆಯ ಕಸರತ್ತು ಜೋರಾಗಿದೆ. ಮಾಜಿ ಸಂಸದ ಹಾಗೂ ದಿವಂಗತ ಉಮೇಶ ಕತ್ತಿ‌ ಸಹೋದರ ರಮೇಶ್ ಕತ್ತಿ(Ramesh katti) ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ (Mahantesh kavatagimath)ಈಗಾಗಲೇ ಬಹಿರಂಗವಾಗಿ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದಾರೆ. ಈ ಬಾರಿ ಟಿಕೆಟ್ ನನಗೆ ಸಿಗುತ್ತೆ ಎನ್ನುವ ಲೆಕ್ಕಾಚಾರದಲ್ಲಿ ಇರುವ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ(Annasaheb Jolle)ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.

ಅದ್ಧೂರಿಯಾಗಿ ಜನ್ಮದಿನ ಆಚರಿಸಿ ಅಣ್ಣಾಸಾಹೇಬ್ ಜೊಲ್ಲೆ ಶಕ್ತಿಪ್ರದರ್ಶನ

ಚಿಕ್ಕೋಡಿ ಪಟ್ಟಣದಲ್ಲಿ ತಮ್ಮ 61ನೇ ಜನ್ಮದಿನ ಅದ್ಧೂರಿಯಾಗಿ ಆಚರಿಸಿಕೊಳ್ಳುವ ಮೂಲಕ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ. ಚಿಕ್ಕೋಡಿ ಲೋಕಸಭೆಯನ್ನೇ ಟಾರ್ಗೇಟ್ ಮಾಡಿ ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಟ್ಯಾಲೆಂಟ್ ಸ್ಪರ್ಧೆ ಆಯೋಜಿಸಿ, ನಿನ್ನೆ(ಅ.07) ಚಿಕ್ಕೋಡಿಯಲ್ಲಿ ಗ್ರ್ಯಾಂಡ್ ಫೈನಲ್ ಸಮಾರಂಭ ಮಾಡಿದರು. ಇಂದು ಚಿಕ್ಕೋಡಿಯ ಆರ್.ಡಿ.ಹೈಸ್ಕೂಲ್ ಮೈದಾನದಲ್ಲಿ ಅದ್ಧೂರಿ ಸಮಾರಂಭ ಮಾಡುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಇನ್ನು ಈ ಜನ್ಮದಿನ ಆಚರಣೆಯನ್ನು ಚುನಾವಣೆ ಪ್ರಚಾರ ಎಂದು ತಿಳಿದುಕೊಳ್ಳಬಹುದು ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆ ಪತ್ನಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಇದನ್ನೂ ಓದಿ:ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉಗ್ರಪ್ಪ ಫುಲ್​ ಆ್ಯಕ್ಟಿವ್​​: ಗಣೇಶ ಚತುರ್ಥಿಯಂದೇ ಬಳ್ಳಾರಿಯಲ್ಲಿ ‌ಮನೆ ಮಾಡಿದ ಮಾಜಿ ಸಂಸದ

ಕಾರ್ಯಕ್ರಮಕ್ಕೆ ಗೈರಾದ ಟಿಕೆಟ್ ಆಕಾಂಕ್ಷಿ ರಮೇಶ್ ಕತ್ತಿ, ಮಹಾಂತೇಶ್ ಕವಟಗಿಮಠ

ಇನ್ನು ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಿನಿಂದಲೇ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ಜನ್ಮದಿನ ಸಮಾರಂಭಕ್ಕೆ ಆಹ್ವಾನ ಇದ್ದರೂ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಚಿಕ್ಕೋಡಿ ಲೋಕಸಭಾ ಟಿಕೆಟ್​ಗಾಗಿ ಬೇಡಿಕೆ ಇಟ್ಟಿದ್ದ ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಮಾಜಿ ಎಂಎಲ್​ಸಿ ಮಹಾಂತೇಶ್ ಕವಟಗಿಮಠ ಕಾರ್ಯಕ್ರಮಕ್ಕೆ ಗೈರಾಗಿದ್ದು, ಈ ಕುರಿತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ರಾಜಕೀಯ ವಲಯದಲ್ಲಿ ತರಹೇವಾರು ಚರ್ಚೆ ಶುರುವಾಗಿದೆ.

ಆಹ್ವಾನ ಪತ್ರಿಕೆಯಲ್ಲಿ ಪ್ರಮುಖ ಉಪಸ್ಥಿತಿ ಎಂದು ಹುಕ್ಕೇರಿ ಬಿಜೆಪಿ ಶಾಸಕ ನಿಖಿಲ್ ಕತ್ತಿ, ಮಾಜಿ ಸಂಸದ ರಮೇಶ್ ಕತ್ತಿ, ಮಾಜಿ ಎಂಎಲ್​ಸಿ ಮಹಾಂತೇಶ್ ಕವಟಗಿಮಠ ಹೆಸರಿದ್ದರೂ ಮೂವರು ನಾಯಕರು ಗೈರಾಗಿದ್ದಾರೆ. ಇನ್ನೂ ಕಾರ್ಯಕ್ರಮದಲ್ಲಿ ರಾಯಬಾಗ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹಾಗೂ ಮಾಜಿ ಶಾಸಕ ಪಿ.ರಾಜೀವ್ ಭಾಗಿಯಾಗಿದ್ದರು. ಸಂಸದ ಅಣ್ಣಾಸಾಹೇಬ್ ಜೊಲ್ಲೆ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಮಾಜಿ ಶಾಸಕ ಪಿ ರಾಜೀವ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಣ್ಣಾಸಾಹೇಬ್​ ಜೊಲ್ಲೆ ಅವರನ್ನ ಗೆಲ್ಲಿಸುವಂತೆ ಮನವಿ ಮಾಡುವ ಮೂಲಕ ಅಣ್ಣಾಸಾಹೇಬ್ ಜೊಲ್ಲೆ ಪರ ಬ್ಯಾಟ್ ಬೀಸಿದ್ದಾರೆ. ಒಟ್ಟಿನಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ಈಗಿ‌ನಿಂದಲೇ ಅಸಮಾಧಾನದ ಹೊಗೆಯಾಡುತ್ತಿದ್ದು, ಬಿಜೆಪಿ ನಾಯಕರು ಇದನ್ನ ಹೇಗೆ ನಿಭಾಯಿಸುತ್ತಾರೆ, ಚಿಕ್ಕೋಡಿ ಲೋಕಸಭಾ ಬಿಜೆಪಿ ಟಿಕೆಟ್ ಯಾರ ಪಾಲಾಗುತ್ತೆ ಎಂಬುದಕ್ಕೆ ಕಾಲವೇ ಉತ್ತರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ