AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರಿಗೆ ಅಹಂಕಾರ: ಆಕ್ಷೇಪಕ್ಕೆ ಕಾರಣವಾದ ಸ್ವಪಕ್ಷದ ಶಾಸಕ ಉಮಾನಾಥ ಕೋಟ್ಯಾನ್​ ಹೇಳಿಕೆ

ಬಿಜೆಪಿಗೆ ಮುಸ್ಲಿಮರು ಮತ ಹಾಕಲ್ಲವೆಂದು ಪಕ್ಷದವರು ಹೇಳುತ್ತಾರೆ, ನಾವು ಯಾಕೆ ಮುಸ್ಲಿಮರ ಕೆಲಸ ಮಾಡಬೇಕು ಅಂತಾ ಹೇಳುತ್ತಾರೆ. ನಾನು‌ ಈ ಎರಡಕ್ಕೂ ವಿರುದ್ಧವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಹೇಳಿರುವ ವಿಡಿಯೋವನ್ನು ಕಾಂಗ್ರೆಸ್ ವೈರಲ್ ಮಾಡಿದೆ.

ಬಿಜೆಪಿಯವರಿಗೆ ಅಹಂಕಾರ: ಆಕ್ಷೇಪಕ್ಕೆ ಕಾರಣವಾದ ಸ್ವಪಕ್ಷದ ಶಾಸಕ ಉಮಾನಾಥ ಕೋಟ್ಯಾನ್​ ಹೇಳಿಕೆ
ಬಿಜೆಪಿ ಶಾಸಕ ಉಮನಾಥ ಕೋಟ್ಯಾನ್
Follow us
Rakesh Nayak Manchi
|

Updated on:Mar 13, 2023 | 10:58 PM

ಮಂಗಳೂರು: ಸಮೀಪಿಸುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ಅದರಲ್ಲೂ ವಿಶೇಷವಾಗಿ ಕರಾವಳಿ ಕರ್ನಾಟಕದಲ್ಲಿ ಮತಗಳನ್ನು ಸೆಳೆಯಲು ಕರ್ನಾಟಕ ಬಿಜೆಪಿ ಹಿಂದುತ್ವದ ಹಲಗೆಯನ್ನು ಬಳಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದರೆ, ಪಕ್ಷದ ಶಾಸಕರೊಬ್ಬರು ಜಾತ್ಯತೀತ ಮಾರ್ಗವನ್ನು ಅನುಸರಿಸಿದ್ದಾರೆ. ಮೂಡುಬಿದಿರೆಯ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಮಾತನಾಡಿ, ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಸದ್ಯ, ಇದರ ವಿಡಿಯೋ ವೈರಲ್ (Video Viral) ಆಗಿದೆ. ಬಿಜೆಪಿಗೆ ಮುಸ್ಲಿಮರು ಮತ ಹಾಕಲ್ಲವೆಂದು ಪಕ್ಷದವರು ಹೇಳುತ್ತಾರೆ, ನಾವು ಯಾಕೆ ಮುಸ್ಲಿಮರ ಕೆಲಸ ಮಾಡಬೇಕು ಅಂತಾ ಹೇಳುತ್ತಾರೆ. ನಮ್ಮ ಬಿಜೆಪಿಯವರಿಗೆ ಅಹಂಕಾರ. ಆದರೆ ನಾನು ಹಾಗಲ್ಲ,‌ ಈ ಎರಡಕ್ಕೂ ವಿರುದ್ಧವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಕಿನ್ನಿಗೋಳಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಸದ್ಯ ಬಿಜೆಪಿ (BJP) ವಲಯದಲ್ಲೇ ಕೋಟ್ಯಾನ್​ ಹೇಳಿಕೆ ಆಕ್ಷೇಪಕ್ಕೆ ಕಾರಣವಾಗಿದ್ದು, ಮುಸ್ಲಿಮರ ಓಲೈಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​​ ಆರೋಪಿಸಿದೆ.

ಈ ಮಾತನ್ನು ಬೇರೆ ಯಾರೂ ಹೇಳುವುದಲ್ಲ, ಉಮನಾಥ ಕೋಟ್ಯಾನ್ ಹೇಳುತ್ತಿರುವು. ಏಕೆಂದರೆ ನಾನು ನೇರವಾಗಿ ಮಾತನಾಡುವವ ಎಂದು ಹೇಳಿರುವುದನ್ನು ವಿಡಿಯೋದಲ್ಲಿ ಕೇಳಿಸಬಹುದಾಗಿದೆ. ಬಿಜೆಪಿ ಶಾಸಕರ ಈ ಹೇಳಿಕೆ ಬಿಜೆಪಿ ವಲಯದಲ್ಲಿ ಮಾತ್ರವಲ್ಲದೆ, ಹಿಂದೂಪರ ಸಂಘಟನೆಗಳ ಕಣ್ಣುಗಳನ್ನು ಕೆಂಪಗಾಗಿಸಿದೆ. ಹಿಂದುತ್ವದ ಹೆಸರಿನಲ್ಲಿ ಮತಕ್ಕಾಗಿ ನಾಟಕ ಮಾಡುತ್ತಿದ್ದಾರೆ. ನಿಮ್ಮಂತ ರಾಜಕಾರಣಿಗಳು ಹಿಂದೂ ಧರ್ಮಕ್ಕೆ ಕಳಂಕ ಎಂದು ಬರೆದು ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಹೊಟೇಲ್​ ಮಾದರಿಯಲ್ಲಿ ವರ್ಗಾವಣೆ, ನೇಮಕಾತಿಗೆ ದರ ಫಿಕ್ಸ್ ಮಾಡಿದ ಕರ್ನಾಟಕ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಈ ವಿಡಿಯೋ ಬಗ್ಗೆ ಶಾಸಕರು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಶಾಸಕರು ಚುನಾವಣೆ ವೇಳೆ ಮುಸ್ಲಿಮರನ್ನು ಓಲೈಸಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಏತನ್ಮಧ್ಯೆ, ಹಿಂದೂ ಜಾಗರಣ ವೇದಿಕೆಯಂತಹ ಹಿಂದೂ ಪರ ಸಂಘಟನೆಗಳು ಶಾಸಕರ ವಿರುದ್ಧ ಪ್ರಚಾರವನ್ನು ಪ್ರಾರಂಭಿಸಿವೆ ಮತ್ತು ಛೀಮಾರಿ ಹಾಕಲು ಆರಂಭಿಸಿವೆ. ಹಿಂದೂ ಜಾಗರಣ ವೇದಿಕೆಯ ಪೋಸ್ಟರ್ ಒಂದರಲ್ಲಿ “ನಿಮ್ಮಂತಹ ರಾಜಕಾರಣಿಗಳು ಹಿಂದೂ ಧರ್ಮಕ್ಕೆ ಕಪ್ಪು ಚುಕ್ಕೆ ಎಂದಿದೆ. ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿಯಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Mon, 13 March 23

ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್