AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತ ಸಮುದಾಯವನ್ನ ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಜುಲೈ 27ರಂದು ಬೃಹತ್​ ಸಭೆ

ಕೇಂದ್ರದಲ್ಲಿ ಕೆಲವು ವರ್ಗಕ್ಕೆ ಮಾತ್ರ ಒಬಿಸಿ ಪಟ್ಟಿಯಲ್ಲಿ ಸೇರಿಸಲಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು OBC ಪಟ್ಟಿಗೆ ಸೇರಿಸಬೇಕು ಎಂದು ಶಿವಮೊಗ್ಗದಲ್ಲಿ ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಸ್ವಾಮೀಜಿ ಒತ್ತಾಯಿಸಿದ್ದಾರೆ. ಈ ಕುರಿತಾಗಿ ಜು. 27ರಂದು ಬೃಹತ್ ಸಭೆ ನಡೆಯಲಿದೆ.

ವೀರಶೈವ ಲಿಂಗಾಯತ ಸಮುದಾಯವನ್ನ ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಜುಲೈ 27ರಂದು ಬೃಹತ್​ ಸಭೆ
ಪ್ರಾತಿನಿಧಿಕ ಚಿತ್ರ
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 24, 2023 | 3:24 PM

Share

ಶಿವಮೊಗ್ಗ, ಜುಲೈ 24: ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮುದಾಯ ದೊಡ್ಡದಿದೆ. ಒಬಿಸಿ (OBC) ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಲಿದ್ದು, ಜು. 27ರಂದು ಬೃಹತ್ ಸಭೆ ನಡೆಯಲಿದೆ ಎಂದು ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಕೆಲವು ವರ್ಗಕ್ಕೆ ಮಾತ್ರ ಒಬಿಸಿ ಪಟ್ಟಿಯಲ್ಲಿ ಸೇರಿಸಲಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಸಹ ಓಬಿಸಿ ಪಟ್ಟಿಗೆ ಸೇರಿಸಬೇಕು ಎಂದರು.

ವೀರಶೈವ ಲಿಂಗಾಯತ ಸಮುದಾಯದ ಒಗ್ಗಟ್ಟು ಅವಶ್ಯಕವಾಗಿದೆ. ಸಮಗ್ರ ವೀರಶೈವ ಲಿಂಗಾಯತ ಸಮುದಾಯಕ್ಕೆ ಸವಲತ್ತು ಸಿಗಬೇಕು ಎಂದು ಹೇಳಿದರು.

ಇದನ್ನೂ ಓದಿ: Kuruba Community: ಕುರುಬ ಸಮುದಾಯವನ್ನು ಕಡೆಗಣಿಸಬೇಡಿ, ಕಾಂಗ್ರೆಸ್​ಗೆ ಸಿದ್ದರಾಮಾನಂದಪುರಿ ಸ್ವಾಮೀಜಿ ಎಚ್ಚರಿಕೆ

ಶಿವಮೊಗ್ಗದ ವೀರಶೈವ ಸಾಂಸ್ಕೃತಿಕ ಭವನದಲ್ಲಿ ಸಭೆ ನಡೆಯಲಿದ್ದು, ನಾಡಿನ ವೀರಶೈವ ಲಿಂಗಾಯತ ಮಠಾಧೀಶರು ಭಾಗಿಯಾಗಲಿದ್ದಾರೆ. ಸಮಾಜದ ಮುಖಂಡರು, ಜನಪ್ರತಿನಿಧಿಗಳು ಸೇರಿದಂತೆ ಸುಮಾರು 5000 ಜನರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಕುರುಬರ ಎಸ್​​ಟಿ ಸೇರ್ಪಡೆಗೆ ಕರ್ನಾಟಕದ ಶಿಫಾರಸಷ್ಟೇ ಸಾಕೇ? ಕೇಂದ್ರ ಅನುಸರಿಸುವ ಮುಂದಿನ ಹಂತಗಳೇನು?

ಈ ಹಿಂದೆ ವೀರಶೈವ ಲಿಂಗಾಯತ ಸಮಾಜದ ಮೀಸಲಾತಿ ಹೋರಾಟ ನೆನಗುದಿಗೆ ಬಿದ್ದಿತ್ತು. ಇದೀಗ ಕಳೆದುಹೋಗಿದ್ದ ಹೋರಾಟಕ್ಕೆ ಮರುಜೀವ ಬಂದಿದೆ. ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳನ್ನ ಕೇಂದ್ರದ ಓಬಿಸಿ ಪಟ್ಟಿಗೆ ಸೇರ್ಪಡೆ ಮಾಡುವ ಹೋರಾಟಕ್ಕೆ ಮತ್ತೆ ಮರುಜೀವ ಸಿಕ್ಕಿದೆ. ಅದಕ್ಕಾಗಿ ವೀರಶೈವ ಲಿಂಗಾಯತ ಮಠಾಧೀಶರಿಂದ ಬೃಹತ್ ಸಭೆಯನ್ನ ಆಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ