AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಬ್ಬರಿಗೆ ಬೆಂಬಲ ಬೆಲೆ ಆಗ್ರಹಿಸಿ ಜೆಡಿಎಸ್​​ನಿಂದ ಬೃಹತ್ ಪ್ರತಿಭಟನೆ: 120 ಕಿಮೀ ಪಾದಯಾತ್ರೆಗೆ ಕುಮಾರಸ್ವಾಮಿ ಸಿದ್ಧತೆ

ಅರಸೀಕೆರೆ, ತಿಪಟೂರು, ತುರುವೇಕೆರೆ, ತುಮಕೂರು ತಾಲೂಕಿನಲ್ಲಿ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆ ಮೂಲಕ ಸರ್ಕಾರಕ್ಕೆ ಚಾಟಿ ಬೀಸಲು ಕುಮಾರಸ್ವಾಮಿ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.

ಕೊಬ್ಬರಿಗೆ ಬೆಂಬಲ ಬೆಲೆ ಆಗ್ರಹಿಸಿ ಜೆಡಿಎಸ್​​ನಿಂದ ಬೃಹತ್ ಪ್ರತಿಭಟನೆ: 120 ಕಿಮೀ ಪಾದಯಾತ್ರೆಗೆ ಕುಮಾರಸ್ವಾಮಿ ಸಿದ್ಧತೆ
ಹೆಚ್​​ಡಿ ಕುಮಾರಸ್ವಾಮಿ
TV9 Web
| Edited By: |

Updated on: Dec 16, 2023 | 3:15 PM

Share

ಬೆಂಗಳೂರು, ಡಿಸೆಂಬರ್ 16: ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಜೆಡಿಎಸ್ (JDS) ಮುಂದಾಗಿದೆ. ಪಾದಯಾತ್ರೆ ಮೂಲಕ ಬೆಂಬಲ ಬೆಲೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಪಕ್ಷ ಮುಂದಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಅವರು 120 ಕಿಮೀ ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜನವರಿ ಮೊದಲ ವಾರದಲ್ಲಿ ನಾಲ್ಕು ತಾಲೂಕಿನಲ್ಲಿ ಕುಮಾರಸ್ವಾಮಿ ಪಾದಯಾತ್ರೆ ಮಾಡಲಿದ್ದಾರೆ. ಹಾಸನದಿಂದ ಆರಂಭವಾಗಲಿರುವ ಪಾದಯಾತ್ರೆ ತುಮಕೂರಿನಲ್ಲಿ ಅಂತ್ಯವಾಗಲಿದೆ. ಸುಮಾರು 120 ಕಿಮೀ ಪಾದಯಾತ್ರೆ ನಡೆಯಲಿದೆ. ಒಟ್ಟು ಹತ್ತು ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, ಕುಮಾರಸ್ವಾಮಿ ಅವರು ಕೊಬ್ಬರಿ ಬೆಳೆಗಾರರು ಮತ್ತು ರೈತರ ಸಮಸ್ಯೆ ಆಲಿಸಲಿದ್ದಾರೆ.

ಅರಸೀಕೆರೆ, ತಿಪಟೂರು, ತುರುವೇಕೆರೆ, ತುಮಕೂರು ತಾಲೂಕಿನಲ್ಲಿ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆ ಮೂಲಕ ಸರ್ಕಾರಕ್ಕೆ ಚಾಟಿ ಬೀಸಲು ಕುಮಾರಸ್ವಾಮಿ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ವಿಚಾರವಾಗಿ ಚರ್ಚೆಯಾಗಿತ್ತು. ಈ ವಿಚಾರವನ್ನು ಹೊಳೆನರಸೀಪುರದ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಸದನದಲ್ಲಿ ಪ್ರಸ್ತಾಪಿಸಿದ್ದರು. ಇದೇ ವೇಳೆ, ಹೆಚ್​ಡಿ ಕುಮಾರಸ್ವಾಮಿ ಸಹ ಮಧ್ಯ ಪ್ರವೇಶಿಸಿ ಇಡೀ ರಾಜ್ಯದ ರೈತರ ಪರ ವಹಿಸಿ ಮಾತನಾಡಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ಸಂಸತ್ ದಾಳಿ: ಲೋಕಸಭೆ ಚುನಾವಣೆಯಲ್ಲಿ ಪುತ್ರನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತರ: ಲೆಹರ್ ಸಿಂಗ್

ಮುಂಬರುವ ಲೋಕಸಭೆ ಚುನಾವಣೆಗೆ ಎನ್​ಡಿಎ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಕುಮಾರಸ್ವಾಮಿ ಮತ್ತೆ ಸಕ್ರಿಯರಾಗಿದ್ದಾರೆ. ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿರುವ ಅವರು, ಇದೀಗ ಪಾದಯಾತ್ರೆ ಮೂಲಕ ಚಾಟಿ ಬೀಸಲು ಮುಂದಾಗಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ