AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಬ್ಬರಿಗೆ ಬೆಂಬಲ ಬೆಲೆ ಆಗ್ರಹಿಸಿ ಜೆಡಿಎಸ್​​ನಿಂದ ಬೃಹತ್ ಪ್ರತಿಭಟನೆ: 120 ಕಿಮೀ ಪಾದಯಾತ್ರೆಗೆ ಕುಮಾರಸ್ವಾಮಿ ಸಿದ್ಧತೆ

ಅರಸೀಕೆರೆ, ತಿಪಟೂರು, ತುರುವೇಕೆರೆ, ತುಮಕೂರು ತಾಲೂಕಿನಲ್ಲಿ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆ ಮೂಲಕ ಸರ್ಕಾರಕ್ಕೆ ಚಾಟಿ ಬೀಸಲು ಕುಮಾರಸ್ವಾಮಿ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.

ಕೊಬ್ಬರಿಗೆ ಬೆಂಬಲ ಬೆಲೆ ಆಗ್ರಹಿಸಿ ಜೆಡಿಎಸ್​​ನಿಂದ ಬೃಹತ್ ಪ್ರತಿಭಟನೆ: 120 ಕಿಮೀ ಪಾದಯಾತ್ರೆಗೆ ಕುಮಾರಸ್ವಾಮಿ ಸಿದ್ಧತೆ
ಹೆಚ್​​ಡಿ ಕುಮಾರಸ್ವಾಮಿ
TV9 Web
| Edited By: |

Updated on: Dec 16, 2023 | 3:15 PM

Share

ಬೆಂಗಳೂರು, ಡಿಸೆಂಬರ್ 16: ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಜೆಡಿಎಸ್ (JDS) ಮುಂದಾಗಿದೆ. ಪಾದಯಾತ್ರೆ ಮೂಲಕ ಬೆಂಬಲ ಬೆಲೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಪಕ್ಷ ಮುಂದಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಅವರು 120 ಕಿಮೀ ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜನವರಿ ಮೊದಲ ವಾರದಲ್ಲಿ ನಾಲ್ಕು ತಾಲೂಕಿನಲ್ಲಿ ಕುಮಾರಸ್ವಾಮಿ ಪಾದಯಾತ್ರೆ ಮಾಡಲಿದ್ದಾರೆ. ಹಾಸನದಿಂದ ಆರಂಭವಾಗಲಿರುವ ಪಾದಯಾತ್ರೆ ತುಮಕೂರಿನಲ್ಲಿ ಅಂತ್ಯವಾಗಲಿದೆ. ಸುಮಾರು 120 ಕಿಮೀ ಪಾದಯಾತ್ರೆ ನಡೆಯಲಿದೆ. ಒಟ್ಟು ಹತ್ತು ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, ಕುಮಾರಸ್ವಾಮಿ ಅವರು ಕೊಬ್ಬರಿ ಬೆಳೆಗಾರರು ಮತ್ತು ರೈತರ ಸಮಸ್ಯೆ ಆಲಿಸಲಿದ್ದಾರೆ.

ಅರಸೀಕೆರೆ, ತಿಪಟೂರು, ತುರುವೇಕೆರೆ, ತುಮಕೂರು ತಾಲೂಕಿನಲ್ಲಿ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆ ಮೂಲಕ ಸರ್ಕಾರಕ್ಕೆ ಚಾಟಿ ಬೀಸಲು ಕುಮಾರಸ್ವಾಮಿ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ವಿಚಾರವಾಗಿ ಚರ್ಚೆಯಾಗಿತ್ತು. ಈ ವಿಚಾರವನ್ನು ಹೊಳೆನರಸೀಪುರದ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಸದನದಲ್ಲಿ ಪ್ರಸ್ತಾಪಿಸಿದ್ದರು. ಇದೇ ವೇಳೆ, ಹೆಚ್​ಡಿ ಕುಮಾರಸ್ವಾಮಿ ಸಹ ಮಧ್ಯ ಪ್ರವೇಶಿಸಿ ಇಡೀ ರಾಜ್ಯದ ರೈತರ ಪರ ವಹಿಸಿ ಮಾತನಾಡಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ಸಂಸತ್ ದಾಳಿ: ಲೋಕಸಭೆ ಚುನಾವಣೆಯಲ್ಲಿ ಪುತ್ರನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತರ: ಲೆಹರ್ ಸಿಂಗ್

ಮುಂಬರುವ ಲೋಕಸಭೆ ಚುನಾವಣೆಗೆ ಎನ್​ಡಿಎ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಕುಮಾರಸ್ವಾಮಿ ಮತ್ತೆ ಸಕ್ರಿಯರಾಗಿದ್ದಾರೆ. ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿರುವ ಅವರು, ಇದೀಗ ಪಾದಯಾತ್ರೆ ಮೂಲಕ ಚಾಟಿ ಬೀಸಲು ಮುಂದಾಗಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ