AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರದ್ ಪವಾರ್ ನಮ್ಮ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಕೆಲವರಿಗೆ ರಾತ್ರಿ ನಿದ್ರೆ ಬರಲ್ಲ; ಏಕನಾಥ್ ಶಿಂಧೆ ಲೇವಡಿ

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಏಕನಾಥ್ ಶಿಂಧೆ, ಶರದ್ ಪವಾರ್ ನಮ್ಮೊಂದಿಗೆ ವೇದಿಕೆ ಹಂಚಿಕೊಳ್ಳುವುದರಿಂದ ಕೆಲವರು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.

ಶರದ್ ಪವಾರ್ ನಮ್ಮ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಕೆಲವರಿಗೆ ರಾತ್ರಿ ನಿದ್ರೆ ಬರಲ್ಲ; ಏಕನಾಥ್ ಶಿಂಧೆ ಲೇವಡಿ
ಶರದ್ ಪವಾರ್ ಜೊತೆ ಏಕನಾಥ್ ಶಿಂಧೆ
TV9 Web
| Edited By: |

Updated on: Oct 20, 2022 | 9:30 AM

Share

ಮುಂಬೈ: ನನ್ನ ಜೊತೆ ಮತ್ತು ಬಿಜೆಪಿ ನಾಯಕರ ಜೊತೆ ಶರದ್ ಪವಾರ್ (Sharad Pawar) ವೇದಿಕೆ ಹಂಚಿಕೊಂಡಿರುವುದನ್ನು ನೋಡಿರುವ ಕೆಲವರಿಗೆ ರಾತ್ರಿ ನಿದ್ರೆಯೇ ಬರುವುದಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಲೇವಡಿ ಮಾಡಿದ್ದಾರೆ. ಯಾರ ಹೆಸರನ್ನೂ ಅವರು ಪ್ರಸ್ತಾಪಿಸಿಲ್ಲವಾದರೂ ಉದ್ಧವ್ ಠಾಕ್ರೆ ಅವರನ್ನೇ ಗುರಿಯಾಗಿಸಿಕೊಂಡು ಈ ಹೇಳಿಕೆ ನೀಡಿದ್ದಾರೆ.

ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​(ಎಂಸಿಎ) ಚುನಾವಣೆಯ ಹಿಂದಿನ ದಿನ ನಡೆದ ವಿಶೇಷ ಭೋಜನಕೂಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಬಿಜೆಪಿ ನಾಯಕ ಆಶಿಶ್ ಶೆಲಾರ್ ಬುಧವಾರ ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ ಬೈಕ್​ಗಳು, ಇನ್ನೂ ಮೂರು ದಿನಕ್ಕೆ ಯೆಲ್ಲೊ ಅಲರ್ಟ್

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಏಕನಾಥ್ ಶಿಂಧೆ, ಶರದ್ ಪವಾರ್ ನಮ್ಮೊಂದಿಗೆ ವೇದಿಕೆ ಹಂಚಿಕೊಳ್ಳುವುದರಿಂದ ಕೆಲವರು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. ಶಿವಸೇನೆ ನಾಯಕತ್ವದ ವಿರುದ್ಧ ಏಕನಾಥ್ ಶಿಂಧೆ ಬಂಡಾಯವೆದ್ದಿದ್ದರು. ಇದು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾಯಿತು. ಈ ವೇಳೆ ಶಿವಸೇನೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಅಧಿಕಾರವನ್ನು ಹಂಚಿಕೊಂಡಿತ್ತು. ಈ ವರ್ಷದ ಜೂನ್‌ನಲ್ಲಿ ಶಿವಸೇನೆಯ 55 ಶಾಸಕರ ಪೈಕಿ 39 ಶಾಸಕರೊಂದಿಗೆ ಏಕನಾಥ್ ಶಿಂಧೆ ಬಂಡಾಯವೆದ್ದು ಶಿವಸೇನೆ ಪಕ್ಷದಲ್ಲಿ ಬಿರುಕು ಮೂಡಲು ಕಾರಣವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ