AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2008-09 ರವರೆಗೆ ದೇಶದ ಎಲ್ಲಾ ಮಾಧ್ಯಮಗಳು ನನ್ನ ಬಗ್ಗೆ 24 ಗಂಟೆ ಹೊಗಳುತ್ತಿದ್ದವು, ನಿಮಗೆ ನೆನಪಿದೆಯೇ?: ರಾಹುಲ್ ಗಾಂಧಿ

ಮೂಲತಃ ಮಹಾರಾಜರಿಗೆ ಸೇರಿದ್ದ ಭಾರತದ ಆಸ್ತಿಯನ್ನು ಸಂವಿಧಾನದ ಮೂಲಕ ಸಾರ್ವಜನಿಕರಿಗೆ ನೀಡಲಾಗಿದೆ. ಆದರೆ ಬಿಜೆಪಿ ಇದಕ್ಕೆ ವಿರುದ್ಧವಾಗಿ ಮಾಡುತ್ತಿದೆ. ಅವರು ಆ ಆಸ್ತಿಗಳನ್ನು ನಿಮ್ಮಿಂದ ತೆಗೆದುಕೊಳ್ಳುವ 'ಮಹಾರಾಜರಿಗೆ' ಹಿಂದಿರುಗಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

2008-09 ರವರೆಗೆ ದೇಶದ ಎಲ್ಲಾ ಮಾಧ್ಯಮಗಳು ನನ್ನ ಬಗ್ಗೆ 24 ಗಂಟೆ ಹೊಗಳುತ್ತಿದ್ದವು, ನಿಮಗೆ ನೆನಪಿದೆಯೇ?: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 04, 2022 | 8:22 PM

Share

ನಾನು ರಾಜಕೀಯಕ್ಕೆ ಸೇರಿದಾಗ, ದೇಶದ ಮಾಧ್ಯಮಗಳು ಕನಿಷ್ಠ 5-6 ವರ್ಷಗಳ ಕಾಲ ಅವರನ್ನು ಹೊಗಳುತ್ತಲೇ ಇದ್ದವು ಆದರೆ ಅದರ ನಂತರ ಏನೋ ಬದಲಾಗಿದೆ ಎಂದು ರಾಹುಲ್ ಗಾಂಧಿ (Rahul Gandhi) ಭಾರತ್ ಜೋಡೋ ಯಾತ್ರೆಯ (Bharat Jodo yatra) ನಡುವೆ ಕಾಂಗ್ರೆಸ್ (Congress) ಬಿಡುಗಡೆ ಮಾಡಿದ ಇತ್ತೀಚಿನ ವಿಡಿಯೊದಲ್ಲಿ ಹೇಳಿದ್ದಾರೆ. “ನಾನು ರಾಜಕೀಯಕ್ಕೆ ಸೇರಿದಾಗ, 2008-09 ರವರೆಗೆ, ದೇಶದ ಎಲ್ಲಾ ಮಾಧ್ಯಮಗಳು ನನ್ನ ಬಗ್ಗೆ 24 ಗಂಟೆಗಳ ಕಾಲ ‘ವಾಹ್, ವಾಹ್’ ಮಾಡುತ್ತಿದ್ದವು. ನಿಮಗೆ ನೆನಪಿದೆಯೇ? ನಂತರ ನಾನು ಎರಡು ವಿಷಯಗಳನ್ನು ಎತ್ತಿದಾಗ ಎಲ್ಲವೂ ಬದಲಾಯಿತು ಎಂದು ರಾಹುಲ್ ಗಾಂಧಿ ವಿಡಿಯೊದಲ್ಲಿ ಹೇಳಿದ್ದಾರೆ. ಭಾರತ್ ಜೋಡೋ ಭಾಷಣಗಳ ಸಂಗ್ರಹ ಮತ್ತು ರಾಜಕೀಯದಲ್ಲಿ ಅವರ ಆರಂಭಿಕ ದಿನಗಳ ತುಣುಕುಗಳು ಈ ವಿಡಿಯೊದಲ್ಲಿದೆ.”ನಾನು ಎರಡು ವಿಷಯಗಳನ್ನು ಎತ್ತಿದ್ದೆ. ಅದರಲ್ಲಿ ಒಂದು ನಿಯಮ್​​ಗಿರಿ ಮತ್ತು ಎರಡನೆಯದು ಭಟ್ಟ ಪರ್ಸೌಲ್. ನಾನು ಭೂಮಿಯ ಪ್ರಶ್ನೆಯನ್ನು ಎತ್ತಿದ ಕ್ಷಣ ಮತ್ತು ನಾನು ಭೂಮಿಯ ಮೇಲಿನ ಬಡವರ ಹಕ್ಕನ್ನು ರಕ್ಷಿಸಲು ಪ್ರಾರಂಭಿಸಿದ ಕ್ಷಣ ಇಡೀ ಮಾಧ್ಯಮದ ತಮಾಶೆ ಪ್ರಾರಂಭವಾಯಿತು. ನಾವು ಆದಿವಾಸಿಗಳಿಗೆ PESA ಕಾಯ್ದೆ ಮತ್ತು ಅವರ ಭೂಮಿಯ ಹಕ್ಕುಗಳಿಗಾಗಿ ಇತರ ಕಾನೂನುಗಳನ್ನು ತಂದೆವು. ನಂತರ ಮಾಧ್ಯಮಗಳು ನನ್ನ ವಿರುದ್ಧ 24 ಗಂಟೆಗಳ ಕಾಲ ಬರೆಯಲು ಪ್ರಾರಂಭಿಸಿದವು ಎಂದು ರಾಹುಲ್ ಗಾಂಧಿ ಹೇಳಿದರು.

ಮೂಲತಃ ಮಹಾರಾಜರಿಗೆ ಸೇರಿದ್ದ ಭಾರತದ ಆಸ್ತಿಯನ್ನು ಸಂವಿಧಾನದ ಮೂಲಕ ಸಾರ್ವಜನಿಕರಿಗೆ ನೀಡಲಾಗಿದೆ. ಆದರೆ ಬಿಜೆಪಿ ಇದಕ್ಕೆ ವಿರುದ್ಧವಾಗಿ ಮಾಡುತ್ತಿದೆ. ಅವರು ಆ ಆಸ್ತಿಗಳನ್ನು ನಿಮ್ಮಿಂದ ತೆಗೆದುಕೊಳ್ಳುವ ‘ಮಹಾರಾಜರಿಗೆ’ ಹಿಂದಿರುಗಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಬಿಜೆಪಿ ನನ್ನ ಇಮೇಜ್ ಡ್ಯಾಮೇಜ್ ಮಾಡಲು ಸಾವಿರಾರು ಕೋಟಿ ಖರ್ಚು ಮಾಡಿದೆ ಎಂದ ರಾಹುಲ್ ಗಾಂಧಿ, ಅದ್ಯಾವುದೂ ವರ್ಕೌಟ್ ಆಗಿಲ್ಲ. ಸತ್ಯಕ್ಕೆ ಅಲ್ಲೊಮ್ಮೆ ಇಲ್ಲೊಮ್ಮೆ ತಲೆ ಹಾಕುವ ಕೆಟ್ಟ ಅಭ್ಯಾಸವಿದೆ. ನನ್ನ ಇಮೇಜ್ ಹಾಳು ಮಾಡಲು ಅವರೆಷ್ಟು ಖರ್ಚು ಮಾಡುತ್ತಾರೆ. ಅವರು ನನಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತಿದ್ದಾರೆ ಏಕೆಂದರೆ ಸತ್ಯವನ್ನು ನಿಗ್ರಹಿಸಲು ಸಾಧ್ಯವಿಲ್ಲ. ನೀವು ಒಂದು ಪ್ರಮುಖ ಶಕ್ತಿಯೊಂದಿಗೆ ಹೋರಾಡಿದಾಗ, ನಿಮ್ಮ ಮೇಲೆ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತದೆ. ಹಾಗಾಗಿ ನಾನು ವೈಯಕ್ತಿಕವಾಗಿ ದಾಳಿಗೊಳಗಾದಾಗ ನಾನು ಸರಿಯಾದ ಹಾದಿಯಲ್ಲಿದ್ದೇನೆ ಎಂದು ನನಗೆ ತಿಳಿದಿದೆ.

“ಇದು ನನ್ನ ಗುರು. ಇದು ನನಗೆ ಯಾವ ಕಡೆ ಆಯ್ಕೆ ಮಾಡಬೇಕೆಂದು ಕಲಿಸುತ್ತದೆ. ನನ್ನ ಹೋರಾಟದಲ್ಲಿ ನಾನು ಮುಂದೆ ಹೋಗುತ್ತಿದ್ದೇನೆ. ನಾನು ಮುಂದೆ ಹೋಗುವವರೆಗೆ ಎಲ್ಲವೂ ಸರಿಯಾಗಿದೆ” ಎಂದು ರಾಹುಲ್ ಗಾಂಧಿ ವಿಡಿಯೊದಲ್ಲಿ ಹೇಳಿದ್ದಾರೆ.

ಒಡಿಶಾದಲ್ಲಿ ವೇದಾಂತದ ಗಣಿಗಾರಿಕೆ ಕಾರ್ಯಾಚರಣೆಗೆ ನಿಯಮ್ ಗಿರಿ ಭೂಸ್ವಾಧೀನವನ್ನು ಕಾನೂನುಬಾಹಿರ ಎಂದು ರಾಹುಲ್ ಗಾಂಧಿ ವಿರೋಧಿಸಿದ್ದರು. ಆಮೇಲೆ ಅನುಮತಿ ನಿರಾಕರಿಸಲಾಯಿತು. ಉತ್ತರ ಪ್ರದೇಶದ ಪರ್ಸೌಲ್ ನಲ್ಲಿರುವ ಭಟ್ಟ, 2011 ರಲ್ಲಿ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಬೃಹತ್ ರೈತರ ಪ್ರತಿಭಟನೆಗೆ ಸಾಕ್ಷಿಯಾಯಿತು. ಮಾಯಾವತಿ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆಗೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಇದು ರಾಜಕೀಯದಲ್ಲಿ ರಾಹುಲ್ ಗಾಂಧಿಯವರ ಪ್ರಯಾಣದ ಗಮನಾರ್ಹ ಕ್ಷಣಗಳಲ್ಲಿ ಒಂದಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ