AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಭೇಟಿ ಆಗಲಿರುವ ಸಚಿವ ಆನಂದ್ ಸಿಂಗ್; ಅಸಮಾಧಾನ ಬಗೆಹರಿಸುವ ವಿಶ್ವಾಸದಲ್ಲಿ ಬಸವರಾಜ ಬೊಮ್ಮಾಯಿ

Basavaraj Bommai on Anand Singh: ಪಕ್ಷದ ಹಿರಿಯರು, ವರಿಷ್ಠರು ಆನಂದ್ ಜತೆ ಮಾ‍ತನಾಡ್ತಾರೆ. ಇಂದು ಸಂಜೆಯೇ ನನ್ನನ್ನು ಭೇಟಿಯಾಗುವುದಾಗಿ ಆನಂದ್ ಸಿಂಗ್ ಹೇಳಿದ್ದಾರೆ. ಅವರ ಜೊತೆ ಮಾತನಾಡುವೆ, ಎಲ್ಲವೂ ಸರಿಹೋಗಲಿದೆ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಭೇಟಿ ಆಗಲಿರುವ ಸಚಿವ ಆನಂದ್ ಸಿಂಗ್; ಅಸಮಾಧಾನ ಬಗೆಹರಿಸುವ ವಿಶ್ವಾಸದಲ್ಲಿ ಬಸವರಾಜ ಬೊಮ್ಮಾಯಿ
ಆನಂದ್ ಸಿಂಗ್
TV9 Web
| Edited By: |

Updated on:Aug 11, 2021 | 5:21 PM

Share

ಬೆಂಗಳೂರು: ಸಂಜೆಯೇ ಸಚಿವ ಆನಂದ್ ಸಿಂಗ್ ಅವರನ್ನು ಭೇಟಿ ಆಗಲಿರುವ ಬಗ್ಗೆ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಆಗಸ್ಟ್ 11) ಹೇಳಿಕೆ ನೀಡಿದ್ದಾರೆ. ಆನಂದ್ ಸಿಂಗ್ ಬಂಡಾಯ, ಅಸಾಮಾಧಾನ ಅಥವಾ ಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸದಲ್ಲಿ ಸಿಎಂ ಬೊಮ್ಮಾಯಿ ಇದ್ದಾರೆ. ಆನಂದ್ ಸಿಂಗ್ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ. ಸಚಿವ ಆನಂದ್ ಸಿಂಗ್ ಭಾವನಾತ್ಮಕವಾಗಿ ಮಾತನಾಡ್ತಿದ್ದಾರೆ. ನಾನು ಅವರ ಜೊತೆ ಮಾತನಾಡುತ್ತೇನೆ. ಸಚಿವ ಆನಂದ್‌ ಸಿಂಗ್‌ಗೆ ಬರಲು ಹೇಳಿದ್ದೇನೆ, ಮಾತಾಡುವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪಕ್ಷದ ಹಿರಿಯರು, ವರಿಷ್ಠರು ಆನಂದ್ ಜತೆ ಮಾ‍ತನಾಡ್ತಾರೆ. ಇಂದು ಸಂಜೆಯೇ ನನ್ನನ್ನು ಭೇಟಿಯಾಗುವುದಾಗಿ ಆನಂದ್ ಸಿಂಗ್ ಹೇಳಿದ್ದಾರೆ. ಅವರ ಜೊತೆ ಮಾತನಾಡುವೆ, ಎಲ್ಲವೂ ಸರಿಹೋಗಲಿದೆ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಆನಂದ್ ಸಿಂಗ್ ನಾಳೆ ಬರುವುದು ಇತ್ತು. ನಾಳೆ ನಾನಿರಲ್ಲ ಅಂದಿದ್ದೆ. ಹೀಗಾಗಿ ಇವತ್ತು ಸಂಜೆಯೇ ಭೇಟಿಯಾಗ್ತಿನಿ ಅಂದಿದ್ದಾರೆ. ಅವರ ಜೊತೆ ಮಾತನಾಡುತ್ತೇನೆ ಎಲ್ಲವೂ ಸರಿಹೋಗಲಿದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆನಂದ್ ಸಿಂಗ್ ಶಾಂತವಾಗಿ ಕೂತು ವಿಚಾರ ಮಾಡಲಿ. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲವೂ ಒಳ್ಳೆಯದಾಗುತ್ತೆ ಎಂಬ ಭಾವನೆ ಇದೆ ಎಂದು ತಿಳಿಸಿದ್ದಾರೆ.

ಸದ್ಯ ಸಚಿವ ಆನಂದ್ ಸಿಂಗ್ ಶಾಂತವಾಗಿದ್ದಾರೆ: ಆರ್. ಅಶೋಕ್ ಸಚಿವ ಆನಂದ್ ಸಿಂಗ್ ಜತೆ ಸಿಎಂ, ರಾಜುಗೌಡ ಚರ್ಚಿಸಿದ್ದಾರೆ. ಸದ್ಯ ಸಚಿವ ಆನಂದ್ ಸಿಂಗ್ ಶಾಂತವಾಗಿದ್ದಾರೆ. ಆನಂದ್ ಸಿಂಗ್ ಸಮಸ್ಯೆಯನ್ನು ಸಿಎಂ ಬಗೆಹರಿಸುತ್ತಾರೆ. ಅವರಿಂದ ಈ ಹಿಂದೆಯೂ ಬೇಸರದ ಹೇಳಿಕೆ ಕೇಳಿಬಂದಿದೆ. ನಾವೆಲ್ಲರೂ ಸಚಿವ ಆನಂದ್ ಸಿಂಗ್ ಜೊತೆ ಇದ್ದೇವೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

2 ದಿನದ ಹಿಂದೆ ಪೂರ್ಣಿಮಾ ಶ್ರೀನಿವಾಸ್ ಜತೆ ಚರ್ಚಿಸಿದ್ದೇನೆ. ಪೂರ್ಣಿಮಾ ಶ್ರೀನಿವಾಸ್ ಕೂಡ ಬೇಸರ ಇಲ್ಲ ಅಂತ ಹೇಳಿದ್ದಾರೆ. ಹಾಸನ ಶಾಸಕ ಪ್ರೀತಂ ಗೌಡರದ್ದೂ ಯಾವುದೇ ಸಮಸ್ಯೆ ಇಲ್ಲ. ಸಚಿವ ಎಂಟಿಬಿ ನಾಗರಾಜ್ ಕೂಡ ಸಮಾಧಾನಗೊಂಡಿದ್ದಾರೆ. ಎಂಟಿಬಿ ಸೋತರೂ ಎಂಎಲ್‌ಸಿ ಮಾಡಿ ಮಂತ್ರಿ ಮಾಡಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ. ಏನೇ ಸಮಸ್ಯೆ ಆದರೂ ಅದನ್ನು ಸರಿಯಾಗಿ ನಿಭಾಯಿಸ್ತೇವೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಸರ್ಕಾರ ಹೆಚ್ಚು ದಿನ ಇರಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಆರ್. ಅಶೋಕ್ ಟಾಂಗ್ ಕೊಟ್ಟಿದ್ದಾರೆ. ನಾವು ಕೂಡ ಈ ಹಿಂದೆ ಗಿಣಿಶಾಸ್ತ್ರವನ್ನು ಹೇಳಿದ್ದೆವು. ಸಿದ್ದರಾಮಯ್ಯ ಸರ್ಕಾರ ಇರಲ್ಲವೆಂದು ಗಿಣಿಶಾಸ್ತ್ರ ಹೇಳಿದ್ದೆವು. ಈಗ ಅವರು ವಿರೋಧ ಪಕ್ಷದಲ್ಲಿದ್ದಾರೆ ಅದಕ್ಕೆ ಹೇಳುತ್ತಾರೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: ಬ್ಲಾಕ್‌ಮೇಲ್‌ ತಂತ್ರ ಮಾಡುವುದಿಲ್ಲ, ನೇರವಾಗಿ ಕೇಳುತ್ತೇನೆ: ಸಚಿವ ಆನಂದ್ ಸಿಂಗ್

ಸ್ಪೀಕರ್ ಭೇಟಿಗೆ ಸಮಯ ಕೇಳಿದ ಆನಂದ್ ಸಿಂಗ್, ಶ್ರಾವಣ ಶುಕ್ರವಾರ ರಾಜೀನಾಮೆ ಫಿಕ್ಸ್​? ಅದಕ್ಕೂ ಮುನ್ನ ಸಿಎಂ, ಮಾಜಿ ಸಿಎಂ ಭೇಟಿ

(Minister Anand Singh to meet CM Basavaraj Bommai at Bengaluru Karnataka Politics)

Published On - 5:16 pm, Wed, 11 August 21

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ