AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

136 ಶಾಸಕರನ್ನು ಇಟ್ಟುಕೊಂಡು ನಾವೇನು ಕಡಲೆಕಾಯಿ ತಿನ್ನಬೇಕಾ? ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ತಿಳಿದು ಮಾತಾಡುತ್ತಾರೋ, ತಿಳಿಯದೆ ಮಾತಾಡುತ್ತಾರೋ ಗೊತ್ತಿಲ್ಲ. 5 ವರ್ಷ ನಾನೇ ಸಿಎಂ ಅಂತಾ ಅವರೂ ಹೇಳಲ್ಲ, ಇನ್ನೊಬ್ಬರೂ ಪೂರ್ತಿ ಅವಧಿ ಇರುತ್ತಾರೆ ಅಂತಾನೂ ಹೇಳಲ್ಲ. ಹಾಗಾದರೆ 136 ಶಾಸಕರನ್ನು ಇಟ್ಟುಕೊಂಡು ನಾವೇನು ಕಡಲೆಕಾಯಿ ತಿನ್ನುತ್ತಾ ಇರುತ್ತೇವಾ ಎಂದು ಕೃಷಿ ಇಲಾಖೆಯ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಾಡಿದ್ದಾರೆ.

136 ಶಾಸಕರನ್ನು ಇಟ್ಟುಕೊಂಡು ನಾವೇನು ಕಡಲೆಕಾಯಿ ತಿನ್ನಬೇಕಾ? ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
ಸಚಿವ ಚಲುವರಾಯಸ್ವಾಮಿ
ಕಿರಣ್​ ಹನಿಯಡ್ಕ
| Edited By: |

Updated on:Sep 30, 2023 | 8:44 PM

Share

ಬೆಂಗಳೂರು, ಸೆಪ್ಟೆಂಬರ್​ 30: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ತಿಳಿದು ಮಾತಾಡುತ್ತಾರೋ, ತಿಳಿಯದೆ ಮಾತಾಡುತ್ತಾರೋ ಗೊತ್ತಿಲ್ಲ. 5 ವರ್ಷ ನಾನೇ ಸಿಎಂ ಅಂತಾ ಅವರೂ ಹೇಳಲ್ಲ, ಇನ್ನೊಬ್ಬರೂ ಪೂರ್ತಿ ಅವಧಿ ಇರುತ್ತಾರೆ ಅಂತಾನೂ ಹೇಳಲ್ಲ. ಹಾಗಾದರೆ 136 ಶಾಸಕರನ್ನು ಇಟ್ಟುಕೊಂಡು ನಾವೇನು ಕಡಲೆಕಾಯಿ ತಿನ್ನುತ್ತಾ ಇರುತ್ತೇವಾ ಎಂದು ಕೃಷಿ ಇಲಾಖೆಯ ಸಚಿವ ಚಲುವರಾಯಸ್ವಾಮಿ (chaluvaraya swamy) ವಾಗ್ದಾಳಿ ಮಾಡಿದ್ದಾರೆ. 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ನಗರದಲ್ಲಿ ಟಿವಿ9 ಜೊತೆ ಅವರು ಮಾತನಾಡಿದ್ದಾರೆ.

ಇವರು ಹೇಳಿದಂತೆ ಸರ್ಕಾರ ಬೀಳಲು ನಮ್ಮ ಶಾಸಕರು ಇವರ ಹತ್ತಿರ ಹೋಗಿದ್ದಾರಾ? ಅವರ ಮೈತ್ರಿಯಿಂದ ಮೊದಲು ಎಷ್ಟು ಜನ ಡಿಸ್ಟರ್ಬ್ ಆಗಿದ್ದಾರೆ ಮೊದಲು ಅದನ್ನು ಸರಿಪಡಿಸಲಿ. 99% ಜನ ಬಿಜೆಪಿಯವರು ಇವರ ಮೈತ್ರಿ ಒಪ್ಪುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಸ್ಲಿಂ ವಿರೋಧಿಯಲ್ಲ, ಹಾಗೆ ಬಿಂಬಿಸಲಾಗುತ್ತಿದೆ; ಛಲವಾದಿ ನಾರಾಯಣಸ್ವಾಮಿ ಕೊಟ್ಟ ಕಾರಣ ಇಲ್ಲಿದೆ ನೋಡಿ

ನಮ್ಮ ಮುಂದೆ ಚರ್ಚೆಯೇ ಆಗಿಲ್ಲ ಅಂತಾ ಅವರು ಹೇಳುತ್ತಿದ್ದಾರೆ. ಬಿಜೆಪಿಯವರು ಎಲ್ಲಿ ಡಿಸ್ಟರ್ಬ್ ಆಗುತ್ತಾರೋ ಅಂತಾ ಈ ರೀತಿ ಮಾತಾಡುತ್ತಾರೆ. ಈ ರೀತಿಯ ಕುಮಾರಸ್ವಾಮಿ ಮಾತು ಹೊಸದೇನಲ್ಲ, ಪಾಪಾ‌ ಮಾತಾಡಲಿ ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ: ಈ ಸಂಬಂಧ ನಾನು ನೀಡಿರುವ ಹೇಳಿಕೆಗೆ ಬದ್ಧ: ಶಾಸಕ ಶಾಮನೂರು

ಅವರ ನಾಯಕರಿಗೆ ಸಮಾಧಾನ ಮಾಡಲು ಹೇಳುವುದಾದರೆ ನಾವ್ಯಾಕೆ ಬೇಜಾರು ಮಾಡಿಕೊಳ್ಳೋಣ? ನನ್ನ ತಂದೆ ಸಿಎಂ ಆಗಿದ್ದಾಗ ನನ್ನ ಕಾಂಪೌಂಡ್ ಒಳಗೂ ಬಿಟ್ಟುಕೊಳ್ಳುತ್ತಿರಲಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಮಾಜಿ ಪ್ರಧಾನಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತಾಡುತ್ತಿದ್ದಾಗ ಇವರು ಮಧ್ಯದಲ್ಲಿ ಯಾವ ರೀತಿ ಡಿಸ್ಟರ್ಬ್ ಮಾಡಿದ್ದಾರೆ ಅಂತಾ ಮಾಧ್ಯಮದಲ್ಲಿ ನೋಡಿದ್ದೇವೆ, ಅದಕ್ಕಿಂತ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದ್ದಾರೆ.

ಮೈತ್ರಿ ಪವಿತ್ರವೋ ಅಪವಿತ್ರವೋ ಎಂದು ಜನ ತೀರ್ಮಾನಿಸುತ್ತಾರೆ: ಸಂಸದ ಡಿ.ಕೆ.ಸುರೇಶ್ 

ಅಲ್ಪಸಂಖ್ಯಾತರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ತೀರ್ಪು ನೀಡಿದ್ದಾರೆ. ಮೈತ್ರಿ ಪವಿತ್ರವೋ ಅಪವಿತ್ರವೋ ಎಂದು ಜನ ತೀರ್ಮಾನಿಸುತ್ತಾರೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರ ಮೇಲಿನ ಕೇಸ್​ಗಳ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:32 pm, Sat, 30 September 23

Follow Us
Kiran Haniyadka
Kiran Haniyadka
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ