AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಕಬಳಿಕೆ ಮಾಡಿಲ್ಲ: ತಮ್ಮ ವಿರುದ್ಧದ ಆರೋಪಕ್ಕೆ ಸಚಿವ ಡಿ.ಸುಧಾಕರ್ ಸ್ಪಷ್ಟನೆ

ಜಮೀನು ವಿಚಾರದಲ್ಲಿ ವಂಚನೆ ಹಾಗೂ ಜಾತಿ ನಿಂದನೆ ಆರೋಪ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಿರುದ್ಧ ಕೇಳಿಬಂದಿದ್ದು, ಎಫ್​​ಐಆರ್ ಕೂಡ ದಾಖಲಾಗಿದೆ. ಈ ಬಗ್ಗೆ ಸ್ವತಃ ಸ್ಪಷ್ಟನೆ ನೀಡಿದ ಸುಧಾಕರ್, ಇಲ್ಲಿ ಭೂ ಕಬಳಿಕೆ ಮಾಡುವಂತಹ ಪ್ರಶ್ನೆಯೇ ಉದ್ಭವ ಆಗಿಲ್ಲ. ಕಾನೂನಾತ್ಮಕವಾಗಿಯೇ ಜಮೀನು ಖರೀದಿ ಮಾಡಿದ್ದೇವೆ ಎಂದಿದ್ದಾರೆ.

ಭೂ ಕಬಳಿಕೆ ಮಾಡಿಲ್ಲ: ತಮ್ಮ ವಿರುದ್ಧದ ಆರೋಪಕ್ಕೆ ಸಚಿವ ಡಿ.ಸುಧಾಕರ್ ಸ್ಪಷ್ಟನೆ
ಸಚಿವ ಡಿ ಸುಧಾಕರ್
ಪ್ರಸನ್ನ ಗಾಂವ್ಕರ್​
| Edited By: |

Updated on: Sep 12, 2023 | 4:30 PM

Share

ಬೆಂಗಳೂರು, ಸೆ.12: ಜಮೀನು ವ್ಯವಹಾರ ಪ್ರಕರಣದಲ್ಲಿ ಕಾನೂನಾತ್ಮಕವಾದ ತೊಡಕು ಯಾವುದೂ ಇಲ್ಲ. ಇದು ಬಹಳ ಹಳೇ ಕೇಸ್, ಕಾನೂನು ಪ್ರಕಾರ ವ್ಯವಹಾರ ನಡೆದಿದೆ ಎಂದು ಹೇಳುವ ಮೂಲಕ ತಮ್ಮ ವಿರುದ್ಧ ಕೇಳಿಬಂದ ಆರೋಪಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ (D.Sudhakar) ಸ್ಪಷ್ಟನೆ ನೀಡಿದರು. ನಗರದಲ್ಲಿ ಮಾತನಾಡಿದ ಅವರು, ಭೂ ಕಬಳಿಕೆ ಮಾಡುವಂತಹ ಪ್ರಶ್ನೆಯೇ ಉದ್ಭವ ಆಗಿಲ್ಲ. ಕಾನೂನಾತ್ಮಕವಾಗಿಯೇ ಜಮೀನು ಖರೀದಿ ಮಾಡಿದ್ದೇವೆ ಎಂದರು.

ಅವರು ನನ್ನನ್ನು ಭೇಟಿ ಮಾಡುವುದು, ದೌರ್ಜನ್ಯದ ಕೇಸ್ ಹಾಕುವುದು, ವಿಡಿಯೋ ತುಣುಕುಗಳನ್ನು ಬಿಡುವುದು ಇದೆಲ್ಲವೂ ಶುದ್ಧ ಸುಳ್ಳು. ಸಚಿವನಾಗಿದ್ದೇನೆ ಅನ್ನೋ ಕಾರಣಕ್ಕೆ ತೇಜೋವಧೆ ಮಾಡಲು ಪಿತೂರಿ ನಡೆಸಲಾಗುತ್ತಿದೆ. ಆದರೆ ಇದರಲ್ಲಿ ಅವರಿಗೆ ಜಯ ಸಿಗುವುದಿಲ್ಲ ಎಂದು ಟಿವಿ9ಗೆ ಸುಧಾಕರ್ ಹೇಳಿದರು.

ತಪ್ಪು ಮಾಡಿದ್ದರೆ ಇಷ್ಟೊತ್ತಿಗೆ ನಾನು ರಾಜೀನಾಮೆ ಕೊಡುತ್ತಿದ್ದೆ. ತಪ್ಪು ಮಾಡದಿದ್ದಾಗ ರಾಜೀನಾಮೆ ಏಕೆ ಕೊಡಬೇಕು ಎಂದು ಪ್ರಶ್ನಿಸಿದ ಸುಧಾಕರ್, 60 ವರ್ಷದಲ್ಲಿ ಎಲ್ಲಿಯೂ ಕೂಡ ನನ್ನ ಮೇಲೆ ಆಪಾದನೆಗಳು ಇಲ್ಲ. ನಾನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವಿರಗೆ ಏನು ದಾಖಲೆ ಕೊಡಬೇಕೋ ಕೊಟ್ಟಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನ್ಯಾಯ ಕೊಡಿಸಿ ಎಂದು ಕೇಳಿದ್ದೇನೆ ಎಂದರು.

ಇದನ್ನೂ ಓದಿ: ಡಿ ಸುಧಾಕರ್​ ವಿರುದ್ಧ ದಾಖಲಾಗಿರುವುದು ಸುಳ್ಳು ಮೊಕದ್ದಮೆ; ಡಿಸಿಎಂ ಡಿಕೆ ಶಿವಕುಮಾರ್

ಬ್ರಾಹ್ಮಣರ ಬಗ್ಗೆ ಸಚಿವ ಡಿ.ಸುಧಾಕರ್ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ನನಗೆ ಎಲ್ಲಾ ಜಾತಿಗಳ ಬಗ್ಗೆ ಅಪಾರ ಗೌರವವಿದೆ. ಬ್ರಾಹ್ಮಣ ಸಂಸ್ಕೃತಿ, ಜೈನ ಸಂಸ್ಕೃತಿ ಎರಡು ಒಂದೇ. ಬ್ರಾಹ್ಮಣರು ಜನಿವಾರ ಹಾಕುತ್ತಾರೆ, ಜೈನರೂ ಜನಿವಾರ ಹಾಕುತ್ತಾರೆ. ಬ್ರಾಹ್ಮಣರ ಆಚಾರ ವಿಚಾರಗಳಂತೆಯೇ ನಮ್ಮ ವಿಚಾರಗಳು ಇವೆ ಎಂದರು.

ನಾನು ಯಾವುದೇ ಜಾತಿಯನ್ನು ನಿಂದನೆ ಮಾಡುವಂಥ ಪ್ರಶ್ನೆ ಇಲ್ಲ. ನನ್ನ ರಾಜಕೀಯ ಜೀವನದಲ್ಲಿ ಎಲ್ಲೂ ಜಾತಿ ನಿಂದನೆ ಮಾಡಿಲ್ಲ. ಸಣ್ಣಪುಟ್ಟ ಸಮುದಾಯವನ್ನೂ ಕೂಡ ಪ್ರೀತಿಯಿಂದ ಕಂಡಿದ್ದೇನೆ ಎಂದು ಸುಧಾಕರ್ ಹೇಳಿದ್ದಾರೆ.

ಸುಧಾಕರ್ ಹೆಸರು ಹೇಳಿ ಹಲ್ಲೆ ನಡೆಸಿದ ರೌಡಿಗಳು

ರೌಡಿಗಳ ಗುಂಪು ಬಂದು ನಮ್ಮ ಶೆಡ್ ಹೊಡೆದು ಹಾಕಿದ್ದಾರೆ. ಹಣ ಕೊಟರೆ ಜಾಗ ಕ್ಲಿಯರ್ ಮಾಡಿಸುತ್ತೇವೆ ಎಂದು ರೌಡಿಗಳು ಹೇಳಿದ್ದರು. ರೌಡಿಗಳ ಜೊತೆ ಬಂದಿದ್ದ ಮಹಿಳೆಯರು ನಮ್ಮ ಮೇಲೆ ಹಲ್ಲೆ ಮಾಡಿದ್ದರು. ಘಟನೆ ನಡೆದ ದಿನ ಸಚಿವ ಡಿ.ಸುಧಾಕರ್ ಅಲ್ಲಿಗೆ ಬಂದಿರಲಿಲ್ಲ, ಸಚಿವ ಡಿ.ಸುಧಾಕರ್ ಹೇಳಿದ್ದಾರೆ ಎಂದು ರೌಡಿಗಳು ಹಲ್ಲೆ ಮಾಡಿದ್ದಾಗಿ ಸಚಿವ ಡಿ.ಸುಧಾಕರ್ ವಿರುದ್ಧ ಪ್ರಕರಣ ದಾಖಲಿಸಿದ ದೂರುದಾರ ಕುಟುಂಬದ ರತ್ನಾ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ