AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಶಕ್ತಿ ವೀರಶೈವ-ಲಿಂಗಾಯತರನ್ನು ಪ್ರತ್ಯೇಕಿಸಲಾಗಲ್ಲ: ಸಚಿವ ಈಶ್ವರ್​ ಖಂಡ್ರೆ

ಯಾವುದೇ ಶಕ್ತಿ ವೀರಶೈವ-ಲಿಂಗಾಯತರನ್ನು ಬೇರೆ ಮಾಡಲು ಸಾಧ್ಯವಿಲ್ಲ. ನಮ್ಮೆಲ್ಲರ ಆರಾಧ್ಯ ದೇವರಾದ ಶತಾಯುಷಿ ಲಿಂಗೈಕ್ಯ ಪೂಜ್ಯ ಶಿವಕುಮಾರ್ ಸ್ವಾಮೀಜಿಗಳು ವೀರಶೈವ-ಲಿಂಗಾಯತರು ಭಿನ್ನ ಅಲ್ಲ, ಒಂದೇ ಅನ್ನೋ ತೀರ್ಪು ನೀಡಿದ್ದಾರೆ. ಇಂದು ನಮ್ಮ ಸಮುದಾಯದ ಎಲ್ಲರು ಒಂದೇ ಅನ್ನೋ ಭಾವನೆಯಿಂದ ಇದ್ದಾರೆ. ಯಾರೇ ಪ್ರತ್ಯೇಕ ಮಾಡಲು ಹೊರಟರೂ ಅದು ಸಾಧ್ಯವಾಗಲ್ಲ ಎಂದು ಸಚಿವ ಈಶ್ವರ್​ ಖಂಡ್ರೆ ಹೇಳಿದ್ದಾರೆ.

ಯಾವುದೇ ಶಕ್ತಿ ವೀರಶೈವ-ಲಿಂಗಾಯತರನ್ನು ಪ್ರತ್ಯೇಕಿಸಲಾಗಲ್ಲ: ಸಚಿವ ಈಶ್ವರ್​ ಖಂಡ್ರೆ
ಸಚಿವ ಈಶ್ವರ್​ ಖಂಡ್ರೆ
ಪ್ರಸನ್ನ ಗಾಂವ್ಕರ್​
| Edited By: |

Updated on:Oct 07, 2025 | 2:52 PM

Share

ಬೆಂಗಳೂರು, ಅಕ್ಟೋಬರ್​ 07: ಯಾವುದೇ ಕಾರಣಕ್ಕೂ ವೀರಶೈವ, ಲಿಂಗಾಯತರನ್ನು (Lingayat) ಪ್ರತ್ಯೇಕ ಮಾಡಲು ಆಗುವುದಿಲ್ಲ. ಹಾಗೇನಾದ್ರೂ ಬೇರೆ ಮಾಡಿದರೆ ವಿಪಕ್ಷ ಲಾಭ ಮಾಡಿಕೊಳ್ಳುತ್ತೆ. ಇದು ದಾರಿ ತಪ್ಪಿಸುವ ಪ್ರಯತ್ನವಾಗಿದ್ದು, ಅಪಪ್ರಚಾರ ಮಾಡಲಾಗ್ತಿದೆ. ಇದರಿಂದ ನಾವು ಜಾಗೃತವಾಗಿ ಎಚ್ಚರಿಕೆಯಿಂದ ಇರಬೇಕು. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಬಹುದಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಅಧ್ಯಯನ ಮಾಡಲು ಹೆಚ್ಚಿನ ಅವಕಾಶವಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಸಿದ್ದರಾಮಯ್ಯ ಯಾವ ಧರ್ಮ, ಜಾತಿಯ ವಿರೋಧಿ ಕೂಡ ಅಲ್ಲ. ಬದಲಾಗಿ ಎಲ್ಲರಿಗೂ ಒಳ್ಳೆಯದು ಮಾಡುವ ಕೆಲಸವನ್ನು ಸಿಎಂ ಮಾಡಿದ್ದಾರೆ. ಇದು ಅವರ ಸಿದ್ಧಾಂತ ಕೂಡ ಆಗಿದ್ದು, ಸಿದ್ದರಾಮಯ್ಯರನ್ನು ಕೆಲವರು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡರೆ ಅದು ತಪ್ಪು. ಮೊನ್ನೆ ಬೆಂಗಳೂರಲ್ಲಿ ಬಸವ ಸಂಸ್ಕೃತಿ ಅಭಿಯಾನ ನಡೆದಿದೆ. ಅಭಿಯಾನ ಸ್ವಾಗತ ಮಾಡಿ ಬೀದರ್​ನಲ್ಲಿ ನಡೆದಾಗ ನಾನೇ ಉದ್ಘಾಟನೆ ಮಾಡಿದ್ದೇನೆ. ಆದರೆ ಸಂಕುಚಿತ ಮನೋಭಾವ ಇರುವ ಕೆಲವರು ಇವತ್ತು ಬೇರೆ ಹೇಳಿಕೆ ನೀಡ್ತಿದ್ದಾರೆ. ದ್ವಂದ್ವ ನಿಲುವು ಇರುವವರನ್ನು ನಾವು ಸಮಾವೇಶಕ್ಕೆ ಕರೆದಿಲ್ಲ ಎಂದು ಹೇಳಿದ್ದಾರೆ. ಇದನ್ನ ಮೊದಲೇ ಹೇಳಬೇಕಿತ್ತು. ಬಸವಣ್ಣ ನಿಮ್ಮ ಖಾಸಗಿ ಆಸ್ತೀನಾ? ಬಸವಣ್ಣ ನಿಮಗಷ್ಟೇ ಸೀಮಿತವಾಗಿರುವವರಾ? ಎಂದು ಖಂಡ್ರೆ ಪ್ರಶ್ನಿಸಿದ್ದಾರೆ.

ಈಶ್ವರ್​ ಖಂಡ್ರೆ ಹೇಳಿದ್ದೇನು?

ಬಸವಣ್ಣ ಎಲ್ಲರಿಗೂ ಬೇಕಾದವರಾಗಿದ್ದು, ಅವರ ತತ್ತ್ವಸಿದ್ಧಾಂತ ಯಾವತ್ತಿಗೂ ಪ್ರಸ್ತುತ. ಹೀಗಿರುವಾಗ ಅವರ ಹೆಸರನ್ನು ಸ್ವಾರ್ಥಕ್ಕಾಗಿ ಬಳಸಬೇಡಿ. ನಮ್ಮವರನ್ನೇ ನಮ್ಮವರು ಎನ್ನದ ನೀವು ಉಳಿದವರನ್ನ ಹೇಗೆ ಒಪ್ಪಿಕೊಳ್ಳುತ್ತೀರಿ? ಇದಕ್ಕೆ ಸ್ವಾಮೀಜಿಗಳು ಭಕ್ತರಿಗೆ ಉತ್ತರ ನೀಡಬೇಕು. ಹಾಗಂತ ನಾನು ಯಾವ ಮಠಾಧೀಶರನ್ನೂ ಟೀಕೆ ಮಾಡುತ್ತಿಲ್ಲ. ಎಲ್ಲ ಪೂಜ್ಯರ ಬಗ್ಗೆ ಅಪಾರ ಗೌರವವಿದ್ದು, ಭಕ್ತರ ಮನಸ್ಸಿನಲ್ಲಿ ಇರುವ ಪ್ರಶ್ನೆ ಗಮನಕ್ಕೆ ತರುತ್ತಿದ್ದೇನೆ ಅಷ್ಟೇ ಎಂದು ಈಶ್ವರ್​ ಖಂಡ್ರೆ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:46 pm, Tue, 7 October 25

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!