Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸೇವೆಗೆ ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ ಮಹದೇವಪ್ಪ ಟಾಂಗ್​​

ದೇವರು ನನ್ನನ್ನು ಒಂದು ಉದ್ದೇಶದಿಂದ ಆಯ್ಕೆ ಮಾಡಿದ್ದಾನೆ. ಆ ಗುರಿ ಪೂರ್ಣವಾಗುವವರೆಗೂ ನಾನು ಕೆಲಸ ಮುಂದುವರೆಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಪ್ರಧಾನಿ ಮೋದಿಯವರ ಹೇಳಿಕೆಗೆ ಸಚಿವ ಹೆಚ್​ಸಿ ಮಹದೇವಪ್ಪ ಟಾಂಗ್​ ಕೊಟ್ಟರು.

ನಿಮ್ಮ ಸೇವೆಗೆ ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ ಮಹದೇವಪ್ಪ ಟಾಂಗ್​​
ಪ್ರಧಾನಿ ಮೋದಿ, ಹೆಚ್​ಸಿ ಮಹದೇವಪ್ಪ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on: May 27, 2024 | 11:52 AM

ಬೆಂಗಳೂರು, ಮೇ 27: ದೇವದೂತ ಬಂದ ನಂತರವೇ ಈ ಎಲ್ಲ ಸಮಸ್ಯೆ ಶುರುವಾದವು ಎಂದು ನಿಮ್ಮ ಸೇವೆ ಮಾಡಲು ದೇವರು ನನ್ನನ್ನು ಕಳುಹಿಸಿದ್ದಾನೆಂಬ ಪ್ರಧಾನಿ ಮೋದಿ (Narendra Modi) ಹೇಳಿಕೆಗೆ ಸಚಿವ ಹೆಚ್​​. ಸಿ.ಮಹದೇವಪ್ಪ (HC Mahadevappa) ಟಾಂಗ್​ ಕೊಟ್ಟಿದ್ದಾರೆ. 72 ರೂಪಾಯಿ ಇದ್ದ ಪೆಟ್ರೋಲ್ ಬೆಲೆ 100 ರೂಪಾಯಿಗೆ ಏರಿತು. 60 ರೂಪಾಯಿ ಇದ್ದ ಡೀಸೆಲ್ 85 ರೂಪಾಯಿಗೆ ಏರಿಕೆಯಾಯಿತು. ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಭಾರಿ ಕುಸಿತ ಕಂಡಿತು. ಅಡುಗೆ ಸಿಲಿಂಡರ್ ಬೆಲೆ 400 ರಿಂದ 1,000 ರೂ.ಗೆ ಏರಿಕೆ ಕಂಡಿತು ಎಂದು ವಾಗ್ದಾಳಿ ಮಾಡಿದ್ದಾರೆ.

ಪುಲ್ವಾಮ ದಾಳಿ ನಡೆದು ಸೈನಿಕರು ಸಾವನ್ನಪ್ಪುವಂತಾಯಿತು. ಭಾರತ ಜಾಗತಿಕ ಹಸಿವಿನ ಸೂಚ್ಯಂಕ 55 ರಿಂದ 102ನೇ ಸ್ಥಾನಕ್ಕೆ ಕುಸಿಯಿತು. ಜನ ಸಾಮಾನ್ಯರ ಕೊಳ್ಳುವ ಶಕ್ತಿಯೇ ಕ್ಷೀಣಿಸಿತು. ಕೊರೊನಾ ವೇಳೆ ಆಕ್ಸಿಜನ್ ಸಿಗದೆ ಲೆಕ್ಕವಿಲ್ಲದ ಸಾವು ನೋವುಗಳಾದವು. ಚೀನಾವು ಗಡಿಯಲ್ಲಿ ಭಾರತವನ್ನು ಆಕ್ರಮಿಸಿ ಗ್ರಾಮಗಳನ್ನು ನಿರ್ಮಿಸಿತು. ಬಾಬಾ ಸಾಹೇಬರು ರಚಿಸಿದ ಸಂವಿಧಾನಕ್ಕೆ ಅಪಾಯ ಒದಗಿತು. ಜನರಿಗೆ ನ್ಯಾಯವಾಗಿಯೇ ನೀಡಬೇಕಿದ್ದ ಬರ ಪರಿಹಾರವನ್ನು, ನ್ಯಾಯಾಲಯದ ಮೆಟ್ಟಿಲೇರಿ ಪರಿಹಾರ ಪಡೆಯುವಂತೆ ಆಯಿತು. ಮಣಿಪುರದಂತಹ ರಾಜಕೀಯ ಅರಾಜಕತೆ, ಹಿಂಸೆ ನಡೆಯಿತು. ದೇಶದ ಸಾಲವು 55 ಲಕ್ಷ ಕೋಟಿಗಳಿಂದ 185 ಲಕ್ಷ ಕೋಟಿಗೆ ಏರಿತು. ದೇವದೂತ ಬಂದ ನಂತರ ಈ ಎಲ್ಲ ಸಮಸ್ಯೆಗಳು ಶುರುವಾದವು ಎಂದು ಹೆಚ್​​ಸಿ ಮಹದೇವಪ್ಪ ಸರಣಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ

ಚುನಾವಣೆಗಾಗಿ ಎಲ್ಲ ಮಾರ್ಗಗಳನ್ನು ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತನ್ನನ್ನು ತಾನು ದೇವದೂತ ಎಂದು ಹೇಳಿಕೊಂಡಿರುವುದು ಹಾಸ್ಯಾಸ್ಪದ ಮತ್ತು ಅಷ್ಟೇ ಮೂಢನಂಬಿಕೆಯಿಂದ ಕೂಡಿದ ಸಂಗತಿಯಾಗಿದೆ. ಜನರಿಂದ ಭಗವಾನ್ ಎಂದು ಕರೆಸಿಕೊಂಡ ಗೌತಮ ಬುದ್ಧರೇ ನಾನು ಎಲ್ಲರಂತೆ ಸಾಮಾನ್ಯ ಎಂದಿರುವಾಗ ಪ್ರಧಾನಿಗಳು ಮೌಢ್ಯದ ಬಿತ್ತಲು ಮಾತನಾಡಬಾರದು ಎಂದು ವಾಗ್ದಾಳಿ ಮಾಡಿದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಅವರಿಂದ ಆಯ್ಕೆಯಾದ ಪ್ರಧಾನಿ ಅವರು ಜನರ ದೂತರೇ ವಿನಃ ದೇವದೂತರಲ್ಲ. ಸಮಾನತೆ, ಸಾಮರಸ್ಯ ಮತ್ತು ಸೌಹಾರ್ದತೆಗೆ ವಿರುದ್ಧವಾದಂತಹ ಮೌಢ್ಯತೆಯನ್ನೇ ಪಾಲಿಸುವ ಪ್ರಧಾನಿಗಳು ಈ ದೇಶದ ಮಹೋನ್ನತವಾದ ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದುರಂತವೇ ಸರಿ ಎಂದರು.

ನಿಮ್ಮ ಸೇವೆಗೆ ದೇವರು ನನ್ನನ್ನು ಕಳುಹಿಸಿದ್ದಾನೆ: ಮೋದಿ

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಬ್ಯೂಸಿಯಾಗಿದ್ದಾರೆ. ಮೂರನೇ ಅವಧಿಯಲ್ಲಿ ಆಯ್ಕೆಯಾಗುವ ನಿರೀಕ್ಷೆಯಲ್ಲಿರುವ ಪ್ರಧಾನಿ ಮೋದಿ ಇತ್ತೀಚಿಗೆ ಪ್ರಧಾನಿ ಮೋದಿ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, “ದೇವರು ನನ್ನನ್ನು ಒಂದು ಉದ್ದೇಶದಿಂದ ಆಯ್ಕೆ ಮಾಡಿದ್ದಾನೆ. ಆ ಗುರಿ ಪೂರ್ಣವಾಗುವವರೆಗೂ ನಾನು ಕೆಲಸ ಮುಂದುವರೆಸುತ್ತೇನೆ” ಎಂದು ಹೇಳಿದ್ದರು. ನನ್ನ ಮೇಲೆ ನಂಬಿಕೆ ಇರಿಸಿಸುವವರ ಸೇವೆ ಸಲ್ಲಿಸುವುದು ನನ್ನ ಕರ್ತವ್ಯ ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ಈ ಹೇಳಿಕೆಗೆ ಸಚಿವ ಹೆಚ್​ಸಿ ಮಹದೇವಪ್ಪ ಟ್ವೀಟ್​ ಮಾಡಿ ಟಾಂಗ್​ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು