AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪ ಹೆಚ್​ಡಿ ರೇವಣ್ಣ ಕಾರಣ; ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿಕೆ

ರೇವಣ್ಣ ಎನರ್ಜಿ ಮಿನಿಸ್ಟರ್ ಆಗಿದ್ದರು. ಸಾವಿರಾರು ಸಬ್ ಸ್ಟೇಷನ್ ಕೊಟ್ಟೆವು ಅಂತ ಹೇಳುತ್ತಿದ್ದಾರೆ. ಕೆ.ಆರ್.ಪೇಟೆಗೆ ಒಂದೇ ಒಂದು ಕೊಟ್ಟಿದ್ದಾರಾ? ಎಂದು ಸಚಿವ ಕೆಸಿ ನಾರಾಯಣ ಗೌಡ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪ ಹೆಚ್​ಡಿ ರೇವಣ್ಣ ಕಾರಣ; ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿಕೆ
ಸಚಿವ ಕೆ.ಸಿ.ನಾರಾಯಣ ಗೌಡ
TV9 Web
| Edited By: |

Updated on:Mar 13, 2022 | 11:57 AM

Share

ಮಂಡ್ಯ: ಜಿಲ್ಲೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸೋಲಿಗೆ ಅವರ ದೊಡ್ಡಪ್ಪ ಹೆಚ್ಡಿ ರೇವಣ್ಣ (HD Revanna) ಕಾರಣ ಅಂತ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಿಂಧಘಟ್ಟ ಗ್ರಾಮದಲ್ಲಿ ಸಚಿವ ಕೆಸಿ ನಾರಾಯಣ ಗೌಡ (KC Narayana Gowda) ಹೇಳಿಕೆ ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಬಗ್ಗೆ ಗೌರವ ಇದೆ. ಅವರು ಸುಮ್ಮನೆ ಮಾತಾಡೋದು ತಪ್ಪು. ನಿಖಿಲ್ ಚಿಕ್ಕ ರಾಜಕಾರಣಿ, ಕುಮಾರಸ್ವಾಮಿ ಸುಪುತ್ರ. ಪ್ರತಿಯೊಂದು ಮಾಹಿತಿ ಪಡೆದು ಮಾತನಾಡಬೇಕು. ಒಂದೂವರೆ ವರ್ಷ ಸರ್ಕಾರ ಇದ್ದಂತಹ ಸಂದರ್ಭದಲ್ಲಿ ಅವರ ದೊಡ್ಡಪ್ಪ ಪಿಡಬ್ಲೂಡಿ (PWD) ಮಿನಿಸ್ಟರ್ ಆಗಿದ್ದರು ಅಂತ ಸಚಿವರು ಹೇಳಿದರು.

ಅವರ ದೊಡ್ಡಪ್ಪನೇ ಎನರ್ಜಿ ಮಿನಿಸ್ಟರ್ ಆಗಿದ್ದರು. ಸಾವಿರಾರು ಸಬ್ ಸ್ಟೇಷನ್ ಕೊಟ್ಟೆವು ಅಂತ ಹೇಳುತ್ತಿದ್ದಾರೆ. ಕೆ.ಆರ್.ಪೇಟೆಗೆ ಒಂದೇ ಒಂದು ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ ಸಚಿವ ಕೆಸಿ ನಾರಾಯಣ ಗೌಡ, ಚನ್ನರಾಯಪಟ್ಟಣ ತಾಲ್ಲೂಕು- ಹಾಸನ ಜಿಲ್ಲೆಗೆ ಸಾವಿರಾರು ಕೋಟಿ ಅನುದಾನ ಕೊಟ್ಟಿದ್ದಾರೆ. ನಮ್ಮ ತಾಲೂಕಿಗೆ ಎಷ್ಟು ಕೊಟ್ಟಿದ್ದಾರೆ ಅವರ ದೊಡ್ಡಪ್ಪನನ್ನೆ ಕೇಳಲಿ ಮೊದಲು. ಇಲ್ಲ ಮಾಹಿತಿ ಹಕ್ಕಿನಲ್ಲಿ ಕೇಳಲಿ ಅಂತ ಹೇಳಿದರು.

ಅವರಿಗೆ ಪಾಪ ವಿಷಯ ಗೊತ್ತಿಲ್ಲ. ಕ್ಷೇತ್ರಕ್ಕೆ ಬಂದ ಅನುದಾನವನ್ನ ಹಾಸನಕ್ಕೆ ಹಾಕಿಕೊಂಡರು. ಮಂಡ್ಯನ ಖಾಲಿ ಬಿಟ್ಟರು. ನಿಖಿಲ್ ಕುಮಾರಸ್ವಾಮಿ ಸೋಲಬೇಕಾದರೆ ಕೆಲಸಗಳು ಕಾರಣ. ಇಷ್ಟು ಸಾವಿರ ಕೋಟಿ ಕೊಡುತ್ತೇವೆ ಅಂತ ಕುಮಾರಸ್ವಾಮಿ ಖಾಲಿ ಪೇಪರ್ನಲ್ಲಿ ಹೇಳಿಕೊಂಡು ಬಂದರು. ರೇವಣ್ಣ ಅವರು ಲೆಟರ್ ಹೆಡ್ನಲ್ಲಿ ಹಣ ಹೊಡೆದುಕೊಂಡು ಹೋಗಿ ಅವರ ಜಿಲ್ಲೆ ಅಭಿವೃದ್ಧಿ ಮಾಡಿಕೊಂಡರು. ಅಲ್ಲಿ ಅವರ ಮಗನ ಗೆಲ್ಲಿಸಿಕೊಂಡರು, ನಿಖಿಲ್​ನ ಸೋಲಿಸಿದರು. ಅದಕ್ಕಿಂತ ಪಾಠ ಬೇಕಾ ನಿಖಿಲ್ ಕುಮಾರಣ್ಣಂಗೆ ಅಂತ ಯುವಜನ ಸೇವೆ, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ಇದನ್ನೂ ಓದಿ

ಅವಧಿಪೂರ್ವ ಚುನಾವಣೆ ಬಗ್ಗೆ ಚರ್ಚೆಯೇ ನಡೆದಿಲ್ಲ, ವರಿಷ್ಠರು ಹೇಳಿದಾಗ ಸಚಿವ ಸಂಪುಟ ಪುನಾರಚನೆ: ಸಿಎಂ ಬೊಮ್ಮಾಯಿ

ಮುಂದುವರೆದ ರಷ್ಯಾ-ಉಕ್ರೇನ್​ ಯುದ್ಧ: ಅಧಿಕೃತವಾಗಿ ಉಕ್ರೇನ್ ಸೇನೆ​ ಸೇರಿದ ಮೊದಲ ಮಹಿಳಾ ಸ್ವಯಂ ಸೇವಕಿ

Published On - 11:53 am, Sun, 13 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ