AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪ ಹೆಚ್​ಡಿ ರೇವಣ್ಣ ಕಾರಣ; ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿಕೆ

ರೇವಣ್ಣ ಎನರ್ಜಿ ಮಿನಿಸ್ಟರ್ ಆಗಿದ್ದರು. ಸಾವಿರಾರು ಸಬ್ ಸ್ಟೇಷನ್ ಕೊಟ್ಟೆವು ಅಂತ ಹೇಳುತ್ತಿದ್ದಾರೆ. ಕೆ.ಆರ್.ಪೇಟೆಗೆ ಒಂದೇ ಒಂದು ಕೊಟ್ಟಿದ್ದಾರಾ? ಎಂದು ಸಚಿವ ಕೆಸಿ ನಾರಾಯಣ ಗೌಡ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪ ಹೆಚ್​ಡಿ ರೇವಣ್ಣ ಕಾರಣ; ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿಕೆ
ಸಚಿವ ಕೆ.ಸಿ.ನಾರಾಯಣ ಗೌಡ
TV9 Web
| Edited By: sandhya thejappa|

Updated on:Mar 13, 2022 | 11:57 AM

Share

ಮಂಡ್ಯ: ಜಿಲ್ಲೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸೋಲಿಗೆ ಅವರ ದೊಡ್ಡಪ್ಪ ಹೆಚ್ಡಿ ರೇವಣ್ಣ (HD Revanna) ಕಾರಣ ಅಂತ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಿಂಧಘಟ್ಟ ಗ್ರಾಮದಲ್ಲಿ ಸಚಿವ ಕೆಸಿ ನಾರಾಯಣ ಗೌಡ (KC Narayana Gowda) ಹೇಳಿಕೆ ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಬಗ್ಗೆ ಗೌರವ ಇದೆ. ಅವರು ಸುಮ್ಮನೆ ಮಾತಾಡೋದು ತಪ್ಪು. ನಿಖಿಲ್ ಚಿಕ್ಕ ರಾಜಕಾರಣಿ, ಕುಮಾರಸ್ವಾಮಿ ಸುಪುತ್ರ. ಪ್ರತಿಯೊಂದು ಮಾಹಿತಿ ಪಡೆದು ಮಾತನಾಡಬೇಕು. ಒಂದೂವರೆ ವರ್ಷ ಸರ್ಕಾರ ಇದ್ದಂತಹ ಸಂದರ್ಭದಲ್ಲಿ ಅವರ ದೊಡ್ಡಪ್ಪ ಪಿಡಬ್ಲೂಡಿ (PWD) ಮಿನಿಸ್ಟರ್ ಆಗಿದ್ದರು ಅಂತ ಸಚಿವರು ಹೇಳಿದರು.

ಅವರ ದೊಡ್ಡಪ್ಪನೇ ಎನರ್ಜಿ ಮಿನಿಸ್ಟರ್ ಆಗಿದ್ದರು. ಸಾವಿರಾರು ಸಬ್ ಸ್ಟೇಷನ್ ಕೊಟ್ಟೆವು ಅಂತ ಹೇಳುತ್ತಿದ್ದಾರೆ. ಕೆ.ಆರ್.ಪೇಟೆಗೆ ಒಂದೇ ಒಂದು ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ ಸಚಿವ ಕೆಸಿ ನಾರಾಯಣ ಗೌಡ, ಚನ್ನರಾಯಪಟ್ಟಣ ತಾಲ್ಲೂಕು- ಹಾಸನ ಜಿಲ್ಲೆಗೆ ಸಾವಿರಾರು ಕೋಟಿ ಅನುದಾನ ಕೊಟ್ಟಿದ್ದಾರೆ. ನಮ್ಮ ತಾಲೂಕಿಗೆ ಎಷ್ಟು ಕೊಟ್ಟಿದ್ದಾರೆ ಅವರ ದೊಡ್ಡಪ್ಪನನ್ನೆ ಕೇಳಲಿ ಮೊದಲು. ಇಲ್ಲ ಮಾಹಿತಿ ಹಕ್ಕಿನಲ್ಲಿ ಕೇಳಲಿ ಅಂತ ಹೇಳಿದರು.

ಅವರಿಗೆ ಪಾಪ ವಿಷಯ ಗೊತ್ತಿಲ್ಲ. ಕ್ಷೇತ್ರಕ್ಕೆ ಬಂದ ಅನುದಾನವನ್ನ ಹಾಸನಕ್ಕೆ ಹಾಕಿಕೊಂಡರು. ಮಂಡ್ಯನ ಖಾಲಿ ಬಿಟ್ಟರು. ನಿಖಿಲ್ ಕುಮಾರಸ್ವಾಮಿ ಸೋಲಬೇಕಾದರೆ ಕೆಲಸಗಳು ಕಾರಣ. ಇಷ್ಟು ಸಾವಿರ ಕೋಟಿ ಕೊಡುತ್ತೇವೆ ಅಂತ ಕುಮಾರಸ್ವಾಮಿ ಖಾಲಿ ಪೇಪರ್ನಲ್ಲಿ ಹೇಳಿಕೊಂಡು ಬಂದರು. ರೇವಣ್ಣ ಅವರು ಲೆಟರ್ ಹೆಡ್ನಲ್ಲಿ ಹಣ ಹೊಡೆದುಕೊಂಡು ಹೋಗಿ ಅವರ ಜಿಲ್ಲೆ ಅಭಿವೃದ್ಧಿ ಮಾಡಿಕೊಂಡರು. ಅಲ್ಲಿ ಅವರ ಮಗನ ಗೆಲ್ಲಿಸಿಕೊಂಡರು, ನಿಖಿಲ್​ನ ಸೋಲಿಸಿದರು. ಅದಕ್ಕಿಂತ ಪಾಠ ಬೇಕಾ ನಿಖಿಲ್ ಕುಮಾರಣ್ಣಂಗೆ ಅಂತ ಯುವಜನ ಸೇವೆ, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ಇದನ್ನೂ ಓದಿ

ಅವಧಿಪೂರ್ವ ಚುನಾವಣೆ ಬಗ್ಗೆ ಚರ್ಚೆಯೇ ನಡೆದಿಲ್ಲ, ವರಿಷ್ಠರು ಹೇಳಿದಾಗ ಸಚಿವ ಸಂಪುಟ ಪುನಾರಚನೆ: ಸಿಎಂ ಬೊಮ್ಮಾಯಿ

ಮುಂದುವರೆದ ರಷ್ಯಾ-ಉಕ್ರೇನ್​ ಯುದ್ಧ: ಅಧಿಕೃತವಾಗಿ ಉಕ್ರೇನ್ ಸೇನೆ​ ಸೇರಿದ ಮೊದಲ ಮಹಿಳಾ ಸ್ವಯಂ ಸೇವಕಿ

Published On - 11:53 am, Sun, 13 March 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು