AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸೂಚನೆ

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿ ಕಳಪೆ ಮತ್ತು ಕೊಳೆತ ಮೊಟ್ಟೆಗಳು ವಿತರಿಸುತ್ತಿರುವ ವಿಚಾರ ಬಯಲಾಗಿದೆ. ಈ ಕುರಿತಾಗಿ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡಿದ್ದಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.​

ಪ್ರಸನ್ನ ಗಾಂವ್ಕರ್​
| Edited By: |

Updated on: Jul 13, 2023 | 5:23 PM

Share

ಬೆಂಗಳೂರು: ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡಿದ್ದಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಮತ್ತು ಸಪ್ಲೈ ಲಿಸ್ಟ್​​​ನಿಂದಲೂ ಕೈ ಬಿಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಯಾವುದೇ ಕಂಟ್ರೋಲ್ ಇಲ್ಲದೆ ಮೊಟ್ಟೆ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕೆಂಬುದು ಇಲಾಖೆ ಉದ್ದೇಶ. ಆದರೆ ಇಲಾಖೆ ಉದ್ದೇಶವೇ ಎಡವುತ್ತಿರುವುದು ಗಮನಕ್ಕೆ ಬಂದಿದೆ ಎಂದರು.

ರಾಮನಗರ, ಹಾಸನ, ಉತ್ತರ ಕರ್ನಾಟಕದ ಹಲವೆಡೆ ಈ ರೀತಿ ಆಗಿದೆ. ಮೊಟ್ಟೆ ವಿಚಾರದ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ಎಲ್ಲೆಲ್ಲಿ ಈ ರೀತಿ ನಡೆದಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲ. ಹಾಗಾಗಿ ಕೂಲಂಕಷವಾಗಿ ಮಾಹಿತಿ ಪಡೆಯುತ್ತೇನೆ. ಈಗಾಗಲೇ ಮೊಟ್ಟೆ ಪೂರೈಕೆ ಸಂಬಂಧಿಸಿದಂತೆ ಸುಮಾರು ಪ್ರಸ್ತಾಪ ಇದೆ. ಸುಮ್ಮನೆ ಡಿಸೈಡ್ ಮಾಡೋಕೆ ಆಗಲ್ಲ ಎಂದು ಹೇಳಿದರು.

ಇದನ್ನೂ ಓದಿ: ಅಂಗನವಾಡಿಗಳಲ್ಲಿ ಗರ್ಭಿಣಿ, ಮಕ್ಕಳಿಗೆ ಕೊಳೆತ ಮೊಟ್ಟೆ ಭಾಗ್ಯ; ಸರ್ಕಾರದ ವಿರುದ್ಧ ಜನರ ಆಕ್ರೋಶ

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿ ಕಳಪೆ ಮತ್ತು ಕೊಳೆತ ಮೊಟ್ಟೆಗಳು ವಿತರಿಸುತ್ತಿರುವ ವಿಚಾರ ಬಯಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಲಕ್ಷ್ಮಿಪುರ ಅಂಗನವಾಡಿ ವ್ಯಾಪ್ತಿಯಲ್ಲಿ ಕಳಪೆ ಮೊಟ್ಟೆ ವಿತರಿಸಲಾಗಿದೆ. ಕೆಟ್ಟು ಹೋದ ಮೊಟ್ಟೆಗಳನ್ನೇ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ವಿತರಿಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

ಹಾವೇರಿಯಲ್ಲೂ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆಗಳ ಪೂರೈಕೆ ಮಾಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೇಜವಾಬ್ದಾರಿಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಅಂಗನವಾಡಿಯಲ್ಲಿ ಕೊಳೆತ ಮೊಟ್ಟೆ ಪೂರೈಕೆ ಆರೋಪ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ಅದೇ ರೀತಿಯಾಗಿ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವನತ್ತೂರು ಅಂಗನವಾಡಿಯಲ್ಲಿ ಕೂಡ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದೆ. ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ