AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ರಾಮ ಬೇರೆಯೇ ಇದ್ದಾನೆ: ಮಧು ಬಂಗಾರಪ್ಪ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶ್ರೀರಾಮನಿಗೆ ಇಲ್ಲಿಂದಲೇ ದೊಡ್ಡ ನಮಸ್ಕಾರ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯರನ್ನೇ ಕರೆದಿಲ್ಲ ಅಂದರೆ ನಮ್ಮನ್ನೆಲ್ಲಿ ಕರೆಯುತ್ತಾರೆ. ನಮ್ಮನ್ನು ಇವರು ಲೆಕ್ಕಕ್ಕೆ ಇಡುತ್ತಾರಾ? ರಾಮ‌ ನಮ್ಮನ್ನು ಲೆಕ್ಕಕ್ಕೆ ಇಡುತ್ತಾರೆ. ನಮ್ಮ ರಾಮ ಬೇರೆಯೇ ಇದ್ದಾನೆ, ಅವನು ಜೋಪಾನವಾಗಿ ಕಾಪಾಡುತ್ತಾನೆ ಎಂದರು.

ನಮ್ಮ ರಾಮ ಬೇರೆಯೇ ಇದ್ದಾನೆ: ಮಧು ಬಂಗಾರಪ್ಪ
ಮಧು ಬಂಗಾರಪ್ಪ
Basavaraj Yaraganavi
| Edited By: |

Updated on: Jan 14, 2024 | 8:23 PM

Share

ಶಿವಮೊಗ್ಗ, ಜ.14: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನೇ ಆಹ್ವಾನಿಸಿಲ್ಲ. ಇನ್ನು ನಮ್ಮನ್ನು ಲೆಕ್ಕಕ್ಕೆ ಇಡುತ್ತಾರಾ? ರಾಮ‌ ನಮ್ಮನ್ನು ಲೆಕ್ಕಕ್ಕೆ ಇಡುತ್ತಾನೆ. ಜನವರಿ 22 ರಂದು ಶ್ರೀರಾಮನಿಗೆ ಇಲ್ಲಿಂದಲೇ ದೊಡ್ಡ ಸಮಸ್ಕಾರ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು. ಅಲ್ಲದೆ, ನಮ್ಮ ರಾಮ ಬೇರೆಯೇ ಇದ್ದಾನೆ, ಜೋಪಾನವಾಗಿ ಕಾಪಾಡುತ್ತಾನೆ ಎಂದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಲ್ಲಿ ಮಾತನಾಡಿದ ಅವರು, ನಮ್ಮೂರಲ್ಲಿ ರಾಮನ ದೇವಸ್ಥಾನ ಇದೆ, ಇದಕ್ಕೆ ಬಹಳ ಕನೆಕ್ಟ್ ಇದೆ. ಅನುಮತಿ ಪಡೆದು ಹೋಗಬೇಕು ಅಂತಾ ತೀರ್ಮಾನ ಮಾಡಿದ್ದೇವೆ. ಕನೆಕ್ಟ್ ಆದ ಮೇಲೆ ಅನುಮತಿ ಪಡೆದು ಹೋಗಬೇಕೆಂದು ತೀರ್ಮಾನಿಸಿದ್ದೇವೆ. ಅದು ಯಾವಾಗ ಕರೆಸಿಕೊಳುತ್ತಾನೋ ನೋಡೋಣ, ಒಟ್ಟಾರೆ ಕರೆಸಿಕೊಳ್ಳುತ್ತಾನೆ ಎಂದರು.

ಇದನ್ನೂ ಓದಿ: ಮೋದಿ ಹೆಸರು ಹೇಳೋದು ಬಿಟ್ಟು ನಳಿನ್ ಕುಮಾರ್ ಕಟೀಲ್ ಏನು ಅಭಿವೃದ್ಧಿ ಮಾಡಿದ್ದಾರೆ: ಮಧು ಬಂಗಾರಪ್ಪ ವಾಗ್ದಾಳಿ

ಸಂಸದ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವರು, ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಬಿಜೆಪಿಯವರು ಹಂತ ಹಂತವಾಗಿ ನಿರ್ನಾಮವಾಗಿ ಹೋಗುತ್ತಿದ್ದಾರೆ. ಇಂತಹ ಹೇಳಿಕೆಗಳಿಂದಲೇ 67 ಸ್ಥಾನಗಳಿಗೆ ಇಳಿದಿದ್ದಾರೆ. ದೇವರು ಹಸರಿನಲ್ಲಿ ನಮಗೆ ಶಾಪ ಕೊಡುತ್ತಾರೆ. ದೇವರು ಕೆಲವೊಮ್ಮೆ ನಮಗೆ ರಿವರ್ಸ್ ಹೊಡೆದು ಬಿಡುತ್ತಾನೆ. ಒಳ್ಳೆಯವರು ಯಾರು, ನಮ್ಮನ್ನು ಯಾರು ದುರುಪಯೋಗ ‌ಪಡಿಸಿಕೊಳ್ಳುತ್ತಾರೆ ಎಂದು ದೇವರಿಗೆ ಚನ್ನಾಗಿ ಗೊತ್ತು‌ ಎಂದರು.

ಯರಿಯೂರಪ್ಪಗೆ ಟಾಂಗ್ ಕೊಟ್ಟ ಮಧು ಬಂಗಾರಪ್ಪ

ವಚನಕಾರ ಅಲ್ಲಮಪ್ರಭು ಜನ್ಮಸ್ಥಳವನ್ನು ಅಭಿವೃದ್ಧಿಪಡಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ ಮಧು ಬಂಗಾರಪ್ಪ, ಇದೇ ಕ್ಷೇತ್ರದವರು ಮುಖ್ಯಮಂತ್ರಿ ಆಗಿದ್ದರು. ಬಳ್ಳಿಗಾವಿ ಅಭಿವೃದ್ಧಿ ಆಗಿಲ್ಲ. ಯಾಕೆ ಬಳ್ಳಿಗಾವಿಯನ್ನ ಅಭಿವೃದ್ಧಿ ಮಾಡಿಲ್ಲ ಎಂಬುದನ್ನು ನೀವೇ ಕೇಳಿ ಎಂದು ಹೇಳುವ ಮೂಲಕ ಬಿಎಸ್ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.

ಪುರಾತತ್ವ ಇಲಾಖೆ ಅಧೀನದಲ್ಲಿ ಇದ್ದಿದ್ದಕ್ಕೆ ಕಸಗುಡಿಸಬೇಡಿ ಎಂದಿದ್ದಾರಾ ಎಂದು ಕೇಳಿದ ಮಧು ಬಂಗಾರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿವೃದ್ಧಿಯ ಬಗ್ಗೆ ಆಸಕ್ತಿ ಇದೆ. ಅಲ್ಲಮಪ್ರಭು ಅವರ ಸ್ಥಾನದಿಂದ ಹೊಸ ಯುಗ ಆರಂಭವಾಗುತ್ತದೆ. ರಾಜಕೀಯ ಸ್ವರೂಪ ಪಡೆದುಕೊಳ್ಳೋದು ಒಳ್ಳೆಯದೇ. ಆದರೆ ಎಲ್ಲದಕ್ಕೂ ದೇವರ ಹೆಸರು‌ ಇಟ್ಟುಕೊಂಡು ಓಡಾಡಲು ಆಗಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Yaraganavi
Basavaraj Yaraganavi
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು