AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ರಾಮ ಬೇರೆಯೇ ಇದ್ದಾನೆ: ಮಧು ಬಂಗಾರಪ್ಪ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶ್ರೀರಾಮನಿಗೆ ಇಲ್ಲಿಂದಲೇ ದೊಡ್ಡ ನಮಸ್ಕಾರ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯರನ್ನೇ ಕರೆದಿಲ್ಲ ಅಂದರೆ ನಮ್ಮನ್ನೆಲ್ಲಿ ಕರೆಯುತ್ತಾರೆ. ನಮ್ಮನ್ನು ಇವರು ಲೆಕ್ಕಕ್ಕೆ ಇಡುತ್ತಾರಾ? ರಾಮ‌ ನಮ್ಮನ್ನು ಲೆಕ್ಕಕ್ಕೆ ಇಡುತ್ತಾರೆ. ನಮ್ಮ ರಾಮ ಬೇರೆಯೇ ಇದ್ದಾನೆ, ಅವನು ಜೋಪಾನವಾಗಿ ಕಾಪಾಡುತ್ತಾನೆ ಎಂದರು.

ನಮ್ಮ ರಾಮ ಬೇರೆಯೇ ಇದ್ದಾನೆ: ಮಧು ಬಂಗಾರಪ್ಪ
ಮಧು ಬಂಗಾರಪ್ಪ
Basavaraj Yaraganavi
| Edited By: |

Updated on: Jan 14, 2024 | 8:23 PM

Share

ಶಿವಮೊಗ್ಗ, ಜ.14: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನೇ ಆಹ್ವಾನಿಸಿಲ್ಲ. ಇನ್ನು ನಮ್ಮನ್ನು ಲೆಕ್ಕಕ್ಕೆ ಇಡುತ್ತಾರಾ? ರಾಮ‌ ನಮ್ಮನ್ನು ಲೆಕ್ಕಕ್ಕೆ ಇಡುತ್ತಾನೆ. ಜನವರಿ 22 ರಂದು ಶ್ರೀರಾಮನಿಗೆ ಇಲ್ಲಿಂದಲೇ ದೊಡ್ಡ ಸಮಸ್ಕಾರ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು. ಅಲ್ಲದೆ, ನಮ್ಮ ರಾಮ ಬೇರೆಯೇ ಇದ್ದಾನೆ, ಜೋಪಾನವಾಗಿ ಕಾಪಾಡುತ್ತಾನೆ ಎಂದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಲ್ಲಿ ಮಾತನಾಡಿದ ಅವರು, ನಮ್ಮೂರಲ್ಲಿ ರಾಮನ ದೇವಸ್ಥಾನ ಇದೆ, ಇದಕ್ಕೆ ಬಹಳ ಕನೆಕ್ಟ್ ಇದೆ. ಅನುಮತಿ ಪಡೆದು ಹೋಗಬೇಕು ಅಂತಾ ತೀರ್ಮಾನ ಮಾಡಿದ್ದೇವೆ. ಕನೆಕ್ಟ್ ಆದ ಮೇಲೆ ಅನುಮತಿ ಪಡೆದು ಹೋಗಬೇಕೆಂದು ತೀರ್ಮಾನಿಸಿದ್ದೇವೆ. ಅದು ಯಾವಾಗ ಕರೆಸಿಕೊಳುತ್ತಾನೋ ನೋಡೋಣ, ಒಟ್ಟಾರೆ ಕರೆಸಿಕೊಳ್ಳುತ್ತಾನೆ ಎಂದರು.

ಇದನ್ನೂ ಓದಿ: ಮೋದಿ ಹೆಸರು ಹೇಳೋದು ಬಿಟ್ಟು ನಳಿನ್ ಕುಮಾರ್ ಕಟೀಲ್ ಏನು ಅಭಿವೃದ್ಧಿ ಮಾಡಿದ್ದಾರೆ: ಮಧು ಬಂಗಾರಪ್ಪ ವಾಗ್ದಾಳಿ

ಸಂಸದ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವರು, ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಬಿಜೆಪಿಯವರು ಹಂತ ಹಂತವಾಗಿ ನಿರ್ನಾಮವಾಗಿ ಹೋಗುತ್ತಿದ್ದಾರೆ. ಇಂತಹ ಹೇಳಿಕೆಗಳಿಂದಲೇ 67 ಸ್ಥಾನಗಳಿಗೆ ಇಳಿದಿದ್ದಾರೆ. ದೇವರು ಹಸರಿನಲ್ಲಿ ನಮಗೆ ಶಾಪ ಕೊಡುತ್ತಾರೆ. ದೇವರು ಕೆಲವೊಮ್ಮೆ ನಮಗೆ ರಿವರ್ಸ್ ಹೊಡೆದು ಬಿಡುತ್ತಾನೆ. ಒಳ್ಳೆಯವರು ಯಾರು, ನಮ್ಮನ್ನು ಯಾರು ದುರುಪಯೋಗ ‌ಪಡಿಸಿಕೊಳ್ಳುತ್ತಾರೆ ಎಂದು ದೇವರಿಗೆ ಚನ್ನಾಗಿ ಗೊತ್ತು‌ ಎಂದರು.

ಯರಿಯೂರಪ್ಪಗೆ ಟಾಂಗ್ ಕೊಟ್ಟ ಮಧು ಬಂಗಾರಪ್ಪ

ವಚನಕಾರ ಅಲ್ಲಮಪ್ರಭು ಜನ್ಮಸ್ಥಳವನ್ನು ಅಭಿವೃದ್ಧಿಪಡಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ ಮಧು ಬಂಗಾರಪ್ಪ, ಇದೇ ಕ್ಷೇತ್ರದವರು ಮುಖ್ಯಮಂತ್ರಿ ಆಗಿದ್ದರು. ಬಳ್ಳಿಗಾವಿ ಅಭಿವೃದ್ಧಿ ಆಗಿಲ್ಲ. ಯಾಕೆ ಬಳ್ಳಿಗಾವಿಯನ್ನ ಅಭಿವೃದ್ಧಿ ಮಾಡಿಲ್ಲ ಎಂಬುದನ್ನು ನೀವೇ ಕೇಳಿ ಎಂದು ಹೇಳುವ ಮೂಲಕ ಬಿಎಸ್ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.

ಪುರಾತತ್ವ ಇಲಾಖೆ ಅಧೀನದಲ್ಲಿ ಇದ್ದಿದ್ದಕ್ಕೆ ಕಸಗುಡಿಸಬೇಡಿ ಎಂದಿದ್ದಾರಾ ಎಂದು ಕೇಳಿದ ಮಧು ಬಂಗಾರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿವೃದ್ಧಿಯ ಬಗ್ಗೆ ಆಸಕ್ತಿ ಇದೆ. ಅಲ್ಲಮಪ್ರಭು ಅವರ ಸ್ಥಾನದಿಂದ ಹೊಸ ಯುಗ ಆರಂಭವಾಗುತ್ತದೆ. ರಾಜಕೀಯ ಸ್ವರೂಪ ಪಡೆದುಕೊಳ್ಳೋದು ಒಳ್ಳೆಯದೇ. ಆದರೆ ಎಲ್ಲದಕ್ಕೂ ದೇವರ ಹೆಸರು‌ ಇಟ್ಟುಕೊಂಡು ಓಡಾಡಲು ಆಗಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್