AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಲಾಗದವರು ನೆಲಡೊಂಕು ಅಂದಂತೆ ಜೆಡಿಎಸ್​​ನವರು ಮಾತಾಡುತ್ತಾರೆ: ಚಲುವರಾಯಸ್ವಾಮಿ

ಅನುದಾನ ಬಗ್ಗೆ ಸದನದಲ್ಲಿ ಹೆಚ್​ಡಿ ಕುಮಾರಸ್ವಾಮಿ ಮೂಲಕ ಕೇಳಲು ಹೇಳಿ. ಈ ಹಿಂದೆ ಇದ್ದ ಜೆಡಿಎಸ್​ ಮಾಜಿ ಶಾಸಕರು ತಂದ ಅನುದಾನದ ಬಗ್ಗೆ ದಾಖಲೆ ನೀಡಲಿ ಎಂದು ಮಂಡ್ಯದ ಜೆಡಿಎಸ್ ನಾಯಕರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸವಾಲು ಹಾಕಿದರು.

ಕೈಲಾಗದವರು ನೆಲಡೊಂಕು ಅಂದಂತೆ ಜೆಡಿಎಸ್​​ನವರು ಮಾತಾಡುತ್ತಾರೆ: ಚಲುವರಾಯಸ್ವಾಮಿ
ಮಂಡ್ಯ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಎನ್ ಚಲುವರಾಯಸ್ವಾಮಿ
ಸೂರಜ್ ಪ್ರಸಾದ್ ಎಸ್.ಎನ್
| Edited By: Rakesh Nayak Manchi|

Updated on: Jul 10, 2023 | 8:20 PM

Share

ಮಂಡ್ಯ: ಕೈಲಾಗದವರು ನೆಲಡೊಂಕು ಅಂದಹಾಗೆ ಜೆಡಿಎಸ್​​ನವರು ಮಾತಾಡುತ್ತಾರೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Chaluvaraya Swamy) ವಾಗ್ದಾಳಿ ನಡೆಸಿದರು. ಜೆಡಿಎಸ್ (JDS) ನಾಯಕರ ಟೀಕೆಗಳಿಗೆ ಮಂಡ್ಯದಲ್ಲೇ ತಿರುಗೇಟು ನೀಡಿದ ಅವರು, ಜೆಡಿಎಸ್ ನಾಯಕರು ಏಕವಚನದಲ್ಲಿ ಮಾತನಾಡಿದರೆ ಅವರದ್ದೇ ಮರಿಯಾದೆ ಹೋಗುತ್ತದೆ ಎಂದು ಹೇಳಿದರು.

ಅನುದಾನ ತರುವುದು ಬಿಡುವುದು ಈ ಐದು ವರ್ಷದಲ್ಲಿ ಗೊತ್ತಾಗುತ್ತದೆ. ಅನುದಾನ ಬಗ್ಗೆ ಸದನದಲ್ಲಿ ಹೆಚ್​ಡಿ ಕುಮಾರಸ್ವಾಮಿ ಮೂಲಕ ಕೇಳಲು ಹೇಳಿ. ಆಗ ನಾನು ಉತ್ತರ ಕೊಡುತ್ತೇನೆ. ಇವರಿಗೆಲ್ಲ ಉತ್ತರ ಕೊಡಲ್ಲ ಎಂದು ಹೇಳಿದ ಚಲುವರಾಯಸ್ವಾಮಿ, ಈ ಹಿಂದೆ ಇದ್ದ ಜೆಡಿಎಸ್​ ಶಾಸಕರು ಎಷ್ಟು ಅನುದಾನ ತಂದಿದ್ದಾರೆ? ಈ ಬಗ್ಗೆ ಮಂಡ್ಯ ಜಿಲ್ಲೆಯ ಜೆಡಿಎಸ್ ಮಾಜಿ ಶಾಸಕರು ದಾಖಲೆ ಕೊಡಲಿ ಎಂದು ಸವಾಲು ಹಾಕಿದರು.

ವರ್ಗಾವಣೆ ವಿಚಾರವಾಗಿ ಲಂಚ ಪಡೆಯಲಾಗುತ್ತಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು, ವರ್ಗಾವಣೆ ಯಾವ ಸರ್ಕಾರದಲೂ ಆಗಿಲ್ಲ ಇವಾಗಲೇ ಆಗುತ್ತಿರುವುದು ಎಂದು ವ್ಯಂಗ್ಯವಾಡಿದರು. ಅಲ್ಲದೆ, ಅನ್ನಭಾಗ್ಯದ ಬಗ್ಗೆ ಮಾತನಾಡಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡಲು ನಿರಾಕರಣೆ ಮಾಡಿದೆ. ಅವರು ಏನೆ ಮಾಡಿದರೂ ನಾವು ಅಕ್ಕಿ ಹಾಗೂ ದುಡ್ಡು ಕೊಡುತ್ತೇವೆ. ಚುನಾವಣೆ ಭಯದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂದರು.

ಇದನ್ನು ಓದಿ: ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ, ಡಿಸಿಎಂ

ಮಹಿಳೆಯರು ಬಸ್​ನಲ್ಲಿ ಹೋಗುತ್ತಿದ್ದಾರೆ. ಅಕ್ಕಿ ಮತ್ತು ದುಡ್ಡು ತೆಗೆದುಕೊಳ್ಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ನಡೆಯುತ್ತಿವೆ. ಸದನದಲ್ಲಿ ಈಗಾಗಲೇ ಮಾತನಾಡಿದ್ದೇನೆ ಹೆಚ್ಚು ಚರ್ಚೆ ಸೂಕ್ತ ಅಲ್ಲ ಎಂದು ಚಲುವರಾಯಸ್ವಾಮಿ ಹೇಳಿದರು.

ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಕೃಷಿ ಸಚಿವರು, ಈ ಹಿಂದೆ ಬಸವರಾಜ ಬೊಮ್ಮಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯಪಾಲರ ಮುಖಾಂತರ ಏನೇನು ಸುಳ್ಳು ಹೇಳಿಸಿದ್ದರು ಅದನ್ನ ಯೋಚನೆ ಮಾಡಿಕೊಳ್ಳಲು ಹೇಳಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ