ಕೈಲಾಗದವರು ನೆಲಡೊಂಕು ಅಂದಂತೆ ಜೆಡಿಎಸ್​​ನವರು ಮಾತಾಡುತ್ತಾರೆ: ಚಲುವರಾಯಸ್ವಾಮಿ

ಅನುದಾನ ಬಗ್ಗೆ ಸದನದಲ್ಲಿ ಹೆಚ್​ಡಿ ಕುಮಾರಸ್ವಾಮಿ ಮೂಲಕ ಕೇಳಲು ಹೇಳಿ. ಈ ಹಿಂದೆ ಇದ್ದ ಜೆಡಿಎಸ್​ ಮಾಜಿ ಶಾಸಕರು ತಂದ ಅನುದಾನದ ಬಗ್ಗೆ ದಾಖಲೆ ನೀಡಲಿ ಎಂದು ಮಂಡ್ಯದ ಜೆಡಿಎಸ್ ನಾಯಕರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸವಾಲು ಹಾಕಿದರು.

ಕೈಲಾಗದವರು ನೆಲಡೊಂಕು ಅಂದಂತೆ ಜೆಡಿಎಸ್​​ನವರು ಮಾತಾಡುತ್ತಾರೆ: ಚಲುವರಾಯಸ್ವಾಮಿ
ಮಂಡ್ಯ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಎನ್ ಚಲುವರಾಯಸ್ವಾಮಿ
Follow us
| Updated By: Rakesh Nayak Manchi

Updated on: Jul 10, 2023 | 8:20 PM

ಮಂಡ್ಯ: ಕೈಲಾಗದವರು ನೆಲಡೊಂಕು ಅಂದಹಾಗೆ ಜೆಡಿಎಸ್​​ನವರು ಮಾತಾಡುತ್ತಾರೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Chaluvaraya Swamy) ವಾಗ್ದಾಳಿ ನಡೆಸಿದರು. ಜೆಡಿಎಸ್ (JDS) ನಾಯಕರ ಟೀಕೆಗಳಿಗೆ ಮಂಡ್ಯದಲ್ಲೇ ತಿರುಗೇಟು ನೀಡಿದ ಅವರು, ಜೆಡಿಎಸ್ ನಾಯಕರು ಏಕವಚನದಲ್ಲಿ ಮಾತನಾಡಿದರೆ ಅವರದ್ದೇ ಮರಿಯಾದೆ ಹೋಗುತ್ತದೆ ಎಂದು ಹೇಳಿದರು.

ಅನುದಾನ ತರುವುದು ಬಿಡುವುದು ಈ ಐದು ವರ್ಷದಲ್ಲಿ ಗೊತ್ತಾಗುತ್ತದೆ. ಅನುದಾನ ಬಗ್ಗೆ ಸದನದಲ್ಲಿ ಹೆಚ್​ಡಿ ಕುಮಾರಸ್ವಾಮಿ ಮೂಲಕ ಕೇಳಲು ಹೇಳಿ. ಆಗ ನಾನು ಉತ್ತರ ಕೊಡುತ್ತೇನೆ. ಇವರಿಗೆಲ್ಲ ಉತ್ತರ ಕೊಡಲ್ಲ ಎಂದು ಹೇಳಿದ ಚಲುವರಾಯಸ್ವಾಮಿ, ಈ ಹಿಂದೆ ಇದ್ದ ಜೆಡಿಎಸ್​ ಶಾಸಕರು ಎಷ್ಟು ಅನುದಾನ ತಂದಿದ್ದಾರೆ? ಈ ಬಗ್ಗೆ ಮಂಡ್ಯ ಜಿಲ್ಲೆಯ ಜೆಡಿಎಸ್ ಮಾಜಿ ಶಾಸಕರು ದಾಖಲೆ ಕೊಡಲಿ ಎಂದು ಸವಾಲು ಹಾಕಿದರು.

ವರ್ಗಾವಣೆ ವಿಚಾರವಾಗಿ ಲಂಚ ಪಡೆಯಲಾಗುತ್ತಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು, ವರ್ಗಾವಣೆ ಯಾವ ಸರ್ಕಾರದಲೂ ಆಗಿಲ್ಲ ಇವಾಗಲೇ ಆಗುತ್ತಿರುವುದು ಎಂದು ವ್ಯಂಗ್ಯವಾಡಿದರು. ಅಲ್ಲದೆ, ಅನ್ನಭಾಗ್ಯದ ಬಗ್ಗೆ ಮಾತನಾಡಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡಲು ನಿರಾಕರಣೆ ಮಾಡಿದೆ. ಅವರು ಏನೆ ಮಾಡಿದರೂ ನಾವು ಅಕ್ಕಿ ಹಾಗೂ ದುಡ್ಡು ಕೊಡುತ್ತೇವೆ. ಚುನಾವಣೆ ಭಯದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂದರು.

ಇದನ್ನು ಓದಿ: ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ, ಡಿಸಿಎಂ

ಮಹಿಳೆಯರು ಬಸ್​ನಲ್ಲಿ ಹೋಗುತ್ತಿದ್ದಾರೆ. ಅಕ್ಕಿ ಮತ್ತು ದುಡ್ಡು ತೆಗೆದುಕೊಳ್ಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ನಡೆಯುತ್ತಿವೆ. ಸದನದಲ್ಲಿ ಈಗಾಗಲೇ ಮಾತನಾಡಿದ್ದೇನೆ ಹೆಚ್ಚು ಚರ್ಚೆ ಸೂಕ್ತ ಅಲ್ಲ ಎಂದು ಚಲುವರಾಯಸ್ವಾಮಿ ಹೇಳಿದರು.

ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಕೃಷಿ ಸಚಿವರು, ಈ ಹಿಂದೆ ಬಸವರಾಜ ಬೊಮ್ಮಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯಪಾಲರ ಮುಖಾಂತರ ಏನೇನು ಸುಳ್ಳು ಹೇಳಿಸಿದ್ದರು ಅದನ್ನ ಯೋಚನೆ ಮಾಡಿಕೊಳ್ಳಲು ಹೇಳಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು