ಕೈಲಾಗದವರು ನೆಲಡೊಂಕು ಅಂದಂತೆ ಜೆಡಿಎಸ್​​ನವರು ಮಾತಾಡುತ್ತಾರೆ: ಚಲುವರಾಯಸ್ವಾಮಿ

ಅನುದಾನ ಬಗ್ಗೆ ಸದನದಲ್ಲಿ ಹೆಚ್​ಡಿ ಕುಮಾರಸ್ವಾಮಿ ಮೂಲಕ ಕೇಳಲು ಹೇಳಿ. ಈ ಹಿಂದೆ ಇದ್ದ ಜೆಡಿಎಸ್​ ಮಾಜಿ ಶಾಸಕರು ತಂದ ಅನುದಾನದ ಬಗ್ಗೆ ದಾಖಲೆ ನೀಡಲಿ ಎಂದು ಮಂಡ್ಯದ ಜೆಡಿಎಸ್ ನಾಯಕರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸವಾಲು ಹಾಕಿದರು.

ಕೈಲಾಗದವರು ನೆಲಡೊಂಕು ಅಂದಂತೆ ಜೆಡಿಎಸ್​​ನವರು ಮಾತಾಡುತ್ತಾರೆ: ಚಲುವರಾಯಸ್ವಾಮಿ
ಮಂಡ್ಯ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಎನ್ ಚಲುವರಾಯಸ್ವಾಮಿ
Edited By: Rakesh Nayak Manchi

Updated on: Jul 10, 2023 | 8:20 PM

ಮಂಡ್ಯ: ಕೈಲಾಗದವರು ನೆಲಡೊಂಕು ಅಂದಹಾಗೆ ಜೆಡಿಎಸ್​​ನವರು ಮಾತಾಡುತ್ತಾರೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Chaluvaraya Swamy) ವಾಗ್ದಾಳಿ ನಡೆಸಿದರು. ಜೆಡಿಎಸ್ (JDS) ನಾಯಕರ ಟೀಕೆಗಳಿಗೆ ಮಂಡ್ಯದಲ್ಲೇ ತಿರುಗೇಟು ನೀಡಿದ ಅವರು, ಜೆಡಿಎಸ್ ನಾಯಕರು ಏಕವಚನದಲ್ಲಿ ಮಾತನಾಡಿದರೆ ಅವರದ್ದೇ ಮರಿಯಾದೆ ಹೋಗುತ್ತದೆ ಎಂದು ಹೇಳಿದರು.

ಅನುದಾನ ತರುವುದು ಬಿಡುವುದು ಈ ಐದು ವರ್ಷದಲ್ಲಿ ಗೊತ್ತಾಗುತ್ತದೆ. ಅನುದಾನ ಬಗ್ಗೆ ಸದನದಲ್ಲಿ ಹೆಚ್​ಡಿ ಕುಮಾರಸ್ವಾಮಿ ಮೂಲಕ ಕೇಳಲು ಹೇಳಿ. ಆಗ ನಾನು ಉತ್ತರ ಕೊಡುತ್ತೇನೆ. ಇವರಿಗೆಲ್ಲ ಉತ್ತರ ಕೊಡಲ್ಲ ಎಂದು ಹೇಳಿದ ಚಲುವರಾಯಸ್ವಾಮಿ, ಈ ಹಿಂದೆ ಇದ್ದ ಜೆಡಿಎಸ್​ ಶಾಸಕರು ಎಷ್ಟು ಅನುದಾನ ತಂದಿದ್ದಾರೆ? ಈ ಬಗ್ಗೆ ಮಂಡ್ಯ ಜಿಲ್ಲೆಯ ಜೆಡಿಎಸ್ ಮಾಜಿ ಶಾಸಕರು ದಾಖಲೆ ಕೊಡಲಿ ಎಂದು ಸವಾಲು ಹಾಕಿದರು.

ವರ್ಗಾವಣೆ ವಿಚಾರವಾಗಿ ಲಂಚ ಪಡೆಯಲಾಗುತ್ತಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು, ವರ್ಗಾವಣೆ ಯಾವ ಸರ್ಕಾರದಲೂ ಆಗಿಲ್ಲ ಇವಾಗಲೇ ಆಗುತ್ತಿರುವುದು ಎಂದು ವ್ಯಂಗ್ಯವಾಡಿದರು. ಅಲ್ಲದೆ, ಅನ್ನಭಾಗ್ಯದ ಬಗ್ಗೆ ಮಾತನಾಡಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡಲು ನಿರಾಕರಣೆ ಮಾಡಿದೆ. ಅವರು ಏನೆ ಮಾಡಿದರೂ ನಾವು ಅಕ್ಕಿ ಹಾಗೂ ದುಡ್ಡು ಕೊಡುತ್ತೇವೆ. ಚುನಾವಣೆ ಭಯದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂದರು.

ಇದನ್ನು ಓದಿ: ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ, ಡಿಸಿಎಂ

ಮಹಿಳೆಯರು ಬಸ್​ನಲ್ಲಿ ಹೋಗುತ್ತಿದ್ದಾರೆ. ಅಕ್ಕಿ ಮತ್ತು ದುಡ್ಡು ತೆಗೆದುಕೊಳ್ಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ನಡೆಯುತ್ತಿವೆ. ಸದನದಲ್ಲಿ ಈಗಾಗಲೇ ಮಾತನಾಡಿದ್ದೇನೆ ಹೆಚ್ಚು ಚರ್ಚೆ ಸೂಕ್ತ ಅಲ್ಲ ಎಂದು ಚಲುವರಾಯಸ್ವಾಮಿ ಹೇಳಿದರು.

ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಕೃಷಿ ಸಚಿವರು, ಈ ಹಿಂದೆ ಬಸವರಾಜ ಬೊಮ್ಮಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯಪಾಲರ ಮುಖಾಂತರ ಏನೇನು ಸುಳ್ಳು ಹೇಳಿಸಿದ್ದರು ಅದನ್ನ ಯೋಚನೆ ಮಾಡಿಕೊಳ್ಳಲು ಹೇಳಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us