AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ; ಸಚಿವ ಎನ್.ಚಲುವರಾಯಸ್ವಾಮಿ

ಶಾಸಕ ಯತ್ನಾಳ್ 3 ವರ್ಷಗಳ ಕಾಲ ಬಿಜೆಪಿ ಬಗ್ಗೆ ಮಾತನಾಡಿದ್ದರು. ಬಿಜೆಪಿ ಶಾಸಕ ಯತ್ನಾಳ್‌ಗೆ ಒಂದೇ ಒಂದು ನೋಟಿಸ್ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ಮಾತನಾಡಿದ ಒಂದೇ ದಿನಕ್ಕೆ ನೋಟಿಸ್ ಕೊಟ್ಟಿದೆ. ಇದೇ ಬಿಜೆಪಿ, ಕಾಂಗ್ರೆಸ್‌ಗೆ ಇರುವ ವ್ಯತ್ಯಾಸ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ: ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ; ಸಚಿವ ಎನ್.ಚಲುವರಾಯಸ್ವಾಮಿ
ಎನ್​ ಚೆಲುವರಾಯಸ್ವಾಮಿ
ಪ್ರಶಾಂತ್​ ಬಿ.
| Edited By: |

Updated on: Sep 15, 2023 | 3:00 PM

Share

ಮಂಡ್ಯ, ಸೆ.15: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಉಭಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ಅದರಂತೆ ಇದೀಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ‘ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ ಎಂದು ಮಂಡ್ಯ (Mandya) ದಲ್ಲಿ ಕೃಷಿ ಇಲಾಖೆ ಸಚಿವ ಎನ್.ಚಲುವರಾಯಸ್ವಾಮಿ (N Cheluvarayaswamy) ಹೇಳಿದ್ದಾರೆ. ಜನರಿಗಾಗಿ ಬಿಜೆಪಿ ಜೊತೆ ಮೈತ್ರಿ ಎಂದು ಜೆಡಿಎಸ್​ನವರು ಹೇಳುತ್ತಿದ್ದಾರೆ. ಪಕ್ಷದ ಅಸ್ತಿತ್ವಕ್ಕಾಗಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್‌ ಇಬ್ಬರಿಗೂ ಇದು ಅನಿವಾರ್ಯ ಆಗಿದೆ ಎಂದರು.

ಇನ್ನು ಸಂದಿಗ್ಧ ಪರಿಸ್ಥಿತಿಯಲ್ಲಿ ದಸರಾ ಆಚರಣೆ ವಿಚಾರ ‘ದಸರಾ ಆಚರಣೆ ಪರಂಪರೆಯಿಂದ ಬಂದಿದೆ. ದಸರಾವನ್ನು ಪೂರ್ಣ ಪ್ರಮಾಣದಲ್ಲಿ ನಿಲ್ಲಿಸಲು ಆಗಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಎಷ್ಟು ಸಾಧ್ಯ ಅಷ್ಟು ಸರಳವಾಗಿ ಮಾಡುತ್ತೇವೆ ಎಂದರು.

ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್​​ ಪರೋಕ್ಷ ವಾಗ್ದಾಳಿ ‘ಎಂಎಲ್​ಸಿ ಹರಿಪ್ರಸಾದ್​​ ಹೇಳಿಕೆಯನ್ನು ಇಡೀ ಪಕ್ಷ ಖಂಡಿಸಿದೆ. ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನಲ್ಲಿ ಹಲವು ಅಧಿಕಾರ ಅನುಭವಿಸಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಮಾತನಾಡಿರೋದು ಪಕ್ಷಕ್ಕೆ ಅಗೌರವ ತಂದಿದ್ದು, ಹರಿಪ್ರಸಾದ್​​​​ ಇನ್ಮುಂದೆ ಹೀಗೆ ಮಾತನಾಡಲ್ಲ ಅಂದುಕೊಂಡಿದ್ದೇನೆ ಎಂದು ಮಂಡ್ಯದಲ್ಲಿ ಹೇಳಿದರು.

ಇದನ್ನೂ ಓದಿ:ಜೆಡಿಎಸ್ ಜೊತೆ ಮೈತ್ರಿ ಬೆಳೆಸಲು ಯಡಿಯೂರಪ್ಪ ಅದ್ಯಾವ ನೈತಿಕತೆಯೊಂದಿಗೆ ಮುಂದಾಗಿದ್ದಾರೋ? ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಇನ್ನು ಶಾಸಕ ಯತ್ನಾಳ್ 3 ವರ್ಷಗಳ ಕಾಲ ಬಿಜೆಪಿ ಬಗ್ಗೆ ಮಾತನಾಡಿದ್ದರು. ಬಿಜೆಪಿ ಶಾಸಕ ಯತ್ನಾಳ್‌ಗೆ ಒಂದೇ ಒಂದು ನೋಟಿಸ್ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ಮಾತನಾಡಿದ ಒಂದೇ ದಿನಕ್ಕೆ ನೋಟಿಸ್ ಕೊಟ್ಟಿದೆ. ಇದೇ ಬಿಜೆಪಿ, ಕಾಂಗ್ರೆಸ್‌ಗೆ ಇರುವ ವ್ಯತ್ಯಾಸ. ರಾಷ್ಟ್ರೀಯ ನಾಯಕರಿಗೆ ನಮ್ಮನ್ನು ಕಂಟ್ರೋಲ್ ಮಾಡುವ ಶಕ್ತಿ ಇದೆ ಎಂದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?