AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ; ಸಚಿವ ಎನ್.ಚಲುವರಾಯಸ್ವಾಮಿ

ಶಾಸಕ ಯತ್ನಾಳ್ 3 ವರ್ಷಗಳ ಕಾಲ ಬಿಜೆಪಿ ಬಗ್ಗೆ ಮಾತನಾಡಿದ್ದರು. ಬಿಜೆಪಿ ಶಾಸಕ ಯತ್ನಾಳ್‌ಗೆ ಒಂದೇ ಒಂದು ನೋಟಿಸ್ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ಮಾತನಾಡಿದ ಒಂದೇ ದಿನಕ್ಕೆ ನೋಟಿಸ್ ಕೊಟ್ಟಿದೆ. ಇದೇ ಬಿಜೆಪಿ, ಕಾಂಗ್ರೆಸ್‌ಗೆ ಇರುವ ವ್ಯತ್ಯಾಸ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ: ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ; ಸಚಿವ ಎನ್.ಚಲುವರಾಯಸ್ವಾಮಿ
ಎನ್​ ಚೆಲುವರಾಯಸ್ವಾಮಿ
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 15, 2023 | 3:00 PM

Share

ಮಂಡ್ಯ, ಸೆ.15: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಉಭಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ಅದರಂತೆ ಇದೀಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ‘ಬಿಜೆಪಿಗೆ ಜೆಡಿಎಸ್‌ ಪಕ್ಷವನ್ನು ತಬ್ಬಿಕೊಳ್ಳುವ ಅನಿವಾರ್ಯ ಇದೆ ಎಂದು ಮಂಡ್ಯ (Mandya) ದಲ್ಲಿ ಕೃಷಿ ಇಲಾಖೆ ಸಚಿವ ಎನ್.ಚಲುವರಾಯಸ್ವಾಮಿ (N Cheluvarayaswamy) ಹೇಳಿದ್ದಾರೆ. ಜನರಿಗಾಗಿ ಬಿಜೆಪಿ ಜೊತೆ ಮೈತ್ರಿ ಎಂದು ಜೆಡಿಎಸ್​ನವರು ಹೇಳುತ್ತಿದ್ದಾರೆ. ಪಕ್ಷದ ಅಸ್ತಿತ್ವಕ್ಕಾಗಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್‌ ಇಬ್ಬರಿಗೂ ಇದು ಅನಿವಾರ್ಯ ಆಗಿದೆ ಎಂದರು.

ಇನ್ನು ಸಂದಿಗ್ಧ ಪರಿಸ್ಥಿತಿಯಲ್ಲಿ ದಸರಾ ಆಚರಣೆ ವಿಚಾರ ‘ದಸರಾ ಆಚರಣೆ ಪರಂಪರೆಯಿಂದ ಬಂದಿದೆ. ದಸರಾವನ್ನು ಪೂರ್ಣ ಪ್ರಮಾಣದಲ್ಲಿ ನಿಲ್ಲಿಸಲು ಆಗಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಎಷ್ಟು ಸಾಧ್ಯ ಅಷ್ಟು ಸರಳವಾಗಿ ಮಾಡುತ್ತೇವೆ ಎಂದರು.

ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್​​ ಪರೋಕ್ಷ ವಾಗ್ದಾಳಿ ‘ಎಂಎಲ್​ಸಿ ಹರಿಪ್ರಸಾದ್​​ ಹೇಳಿಕೆಯನ್ನು ಇಡೀ ಪಕ್ಷ ಖಂಡಿಸಿದೆ. ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನಲ್ಲಿ ಹಲವು ಅಧಿಕಾರ ಅನುಭವಿಸಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಮಾತನಾಡಿರೋದು ಪಕ್ಷಕ್ಕೆ ಅಗೌರವ ತಂದಿದ್ದು, ಹರಿಪ್ರಸಾದ್​​​​ ಇನ್ಮುಂದೆ ಹೀಗೆ ಮಾತನಾಡಲ್ಲ ಅಂದುಕೊಂಡಿದ್ದೇನೆ ಎಂದು ಮಂಡ್ಯದಲ್ಲಿ ಹೇಳಿದರು.

ಇದನ್ನೂ ಓದಿ:ಜೆಡಿಎಸ್ ಜೊತೆ ಮೈತ್ರಿ ಬೆಳೆಸಲು ಯಡಿಯೂರಪ್ಪ ಅದ್ಯಾವ ನೈತಿಕತೆಯೊಂದಿಗೆ ಮುಂದಾಗಿದ್ದಾರೋ? ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಇನ್ನು ಶಾಸಕ ಯತ್ನಾಳ್ 3 ವರ್ಷಗಳ ಕಾಲ ಬಿಜೆಪಿ ಬಗ್ಗೆ ಮಾತನಾಡಿದ್ದರು. ಬಿಜೆಪಿ ಶಾಸಕ ಯತ್ನಾಳ್‌ಗೆ ಒಂದೇ ಒಂದು ನೋಟಿಸ್ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ಮಾತನಾಡಿದ ಒಂದೇ ದಿನಕ್ಕೆ ನೋಟಿಸ್ ಕೊಟ್ಟಿದೆ. ಇದೇ ಬಿಜೆಪಿ, ಕಾಂಗ್ರೆಸ್‌ಗೆ ಇರುವ ವ್ಯತ್ಯಾಸ. ರಾಷ್ಟ್ರೀಯ ನಾಯಕರಿಗೆ ನಮ್ಮನ್ನು ಕಂಟ್ರೋಲ್ ಮಾಡುವ ಶಕ್ತಿ ಇದೆ ಎಂದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್