AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜ್​​ಶೀಟ್ ಬಿಡುಗಡೆ: ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಸರ್ಕಾರ 100 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಇತ್ತ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್​ಶೀಟ್ ಬಿಡುಗಡೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ನೂರು ದಿನಗಳಾದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ಚಾರ್ಜ್​​ಶೀಟ್ ಬಿಡುಗಡೆ: ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
ಸಂಜಯ್ಯಾ ಚಿಕ್ಕಮಠ
| Edited By: Rakesh Nayak Manchi|

Updated on: Aug 29, 2023 | 4:25 PM

Share

ಕಲಬುರಗಿ, ಆಗಸ್ಟ್ 29: ಕಾಂಗ್ರೆಸ್ ಸರ್ಕಾರ 100 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಇತ್ತ ಸರ್ಕಾರದ ವಿರುದ್ಧ ಬಿಜೆಪಿ (BJP) ಚಾರ್ಜ್​ಶೀಟ್ ಬಿಡುಗಡೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ನೂರು ದಿನಗಳಾದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ಕಲಬುರಗಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯವರಿಗೆ ಏನು ಮಾಡಬೇಕು ಎಂಬುದೇ ಅರ್ಥವಾಗುತ್ತಿಲ್ಲ. ನಾವು ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುತ್ತಿದ್ದೇವೆ. ಬಿಜೆಪಿಯವರು ಅಧಿಕಾರ ಕಳೆದುಕೊಂಡು 100 ದಿನ ಆಯಿತು. ಆದರೆ ದೆಹಲಿಯಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ 100 ದಿನದ ನೂರಾರು ಹಳವಂಡಗಳು: ವಿಡಿಯೋ ಹಂಚಿಕೊಂಡ ಬಿಜೆಪಿ

ಬಿಜೆಪಿಗರು ಬ್ಯಾರಿಕೇಡ್ ಬಂಧಿಗಳಾಗಿದ್ದಾರೆ ಎಂದು ಹೇಳಿದ ಪ್ರಿಯಾಂಕ್​​ ಖರ್ಗೆ, ಬೆಂಗಳೂರಿಗೆ ಮೋದಿ ಬಂದರೂ ಅವರನ್ನು ಭೇಟಿ ಮಾಡಲು ಆಗಿಲ್ಲ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಏನೇ ಹೇಳಿದರೂ ದಾಖಲೆ ಕೇಳುತ್ತಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಯಾವ ದಾಖಲೆಗಳಿವೆ? ಎಲ್ಲಿ ಹೋಯ್ತು ಪೆನ್​ಡ್ರೈವ್​​, ಆಡಿಯೋ ಬಾಂಬ್ ಎಂದು ಪ್ರಶ್ನಿಸಿದರು.

ಗುತ್ತಿಗೆದಾರರು ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಮಾಡಿಲ್ಲ. ಬಿಲ್​​ಗಳು ವಿಳಂಬವಾಗುತ್ತಿದೆ ಅಂತಾ ಹೇಳಿದ್ದಾರೆ ಅಷ್ಟೇ. ಪಿಡಿಒ ವರ್ಗಾವಣೆ ಪಟ್ಟಿ ಸೋರಿಕೆಯಾಗಿರುವುದು ನಿಜ. ಈ ಬಗ್ಗೆ ಸೈಬರ್ ಸೆಲ್​​ಗೆ ದೂರು ನೀಡಲಾಗಿದೆ. ನಾವೇ ತನಿಖೆಗೆ ನೀಡಿ ನಾವೇ ದುಡ್ಡು ಕೇಳುತ್ತೇವಾ ಎಂದು ಪ್ರಶ್ನಿಸಿದರು.

ಲೋಕಸಭಾ ಚುನಾವಣೆ ಮುನ್ನ ಬಿಜೆಪಿಯೇ ಇರಲ್ಲ ಎಂದು ಹೇಳಿದ ಪ್ರಿಯಾಂಕ್ ಖರ್ಗೆ, ಕೆಎಸ್ ಈಶ್ವರಪ್ಪ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ. ಸೈದ್ಯಾಂತಿಕವಾಗಿಯೂ ಇರಲ್ಲ, ಪಕ್ಷದಲ್ಲಿಯೂ ಇರಲ್ಲ. ಅಧಿಕಾರ ಇಲ್ಲದೇ ಇದ್ದಿದ್ದಕ್ಕೆ ನೀರಿನಿಂದ ಹೊರಬಂದಂತೆ ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ