AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ತಂಟೆಗೆ ಬಂದರೆ ಹುಷಾರ್; ಸಿದ್ದರಾಮಯ್ಯಗೆ ಕಂದಾಯ ಸಚಿವ ಆರ್ ಅಶೋಕ್ ಎಚ್ಚರಿಕೆ

ಹನುಮಂತನ ಬಾಲಕ್ಕೆ ಬೆಂಕಿ ಬಿದ್ದು ಲಂಕೆಯೇ ಸುಟ್ಟೋಯ್ತು. ಆರ್​ಎಸ್​ಎಸ್​ ಶಕ್ತಿ ಏನು ಎಂದು ಇಡೀ ಪ್ರಪಂಚಕ್ಕೆ ಗೊತ್ತು. ಪ್ಯಾಂಟು, ಚಡ್ಡಿ ಸುಡುವುದನ್ನೆಲ್ಲಾ ಬಿಟ್ಟು ಬಿಡಿ.

ಆರ್​ಎಸ್​ಎಸ್​ ತಂಟೆಗೆ ಬಂದರೆ ಹುಷಾರ್; ಸಿದ್ದರಾಮಯ್ಯಗೆ ಕಂದಾಯ ಸಚಿವ ಆರ್ ಅಶೋಕ್ ಎಚ್ಚರಿಕೆ
ಆರ್​.ಅಶೋಕ್​
TV9 Web
| Edited By: |

Updated on:Jun 05, 2022 | 2:49 PM

Share

ಬೆಂಗಳೂರು: ಆರ್​ಎಸ್​​ಎಸ್​ (RSS) ಚಡ್ಡಿ ಸುಡುವ ಅಭಿಯಾನದ ಬಗ್ಗೆ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ (Siddaramaiah) ಕಂದಾಯ ಸಚಿವ ಆರ್ ಅಶೋಕ್ (R Ashok) ಎಚ್ಚರಿಕೆ ನೀಡಿದ್ದಾರೆ. ಆರ್​ಎಸ್​ಎಸ್​ ತಂಟೆಗೆ ಬಂದರೆ ಹುಷಾರ್ ಎಂದಿರುವ ಅಶೋಕ್, ಈ ರೀತಿ ಸುಡೋರೆಲ್ಲ ಮನೆ ಸುಟ್ಟಿಕೊಂಡಿದ್ದಾರೆ. ಹನುಮಂತನ ಬಾಲಕ್ಕೆ ಬೆಂಕಿ ಬಿದ್ದು ಲಂಕೆಯೇ ಸುಟ್ಟೋಯ್ತು. ಆರ್​ಎಸ್​ಎಸ್​ ಶಕ್ತಿ ಏನು ಎಂದು ಇಡೀ ಪ್ರಪಂಚಕ್ಕೆ ಗೊತ್ತು. ಪ್ಯಾಂಟು, ಚಡ್ಡಿ ಸುಡುವುದನ್ನೆಲ್ಲಾ ಬಿಟ್ಟು ಬಿಡಿ. ಆರ್​ಎಸ್​ಎಸ್​​ ತಂಟೆಗೆ ಬಂದರೆ ನೀವು ಸುಟ್ಟು ಹೋಗುತ್ತೀರಿ ಎಂದರು.

ನೀವೇ ಬಾದಾಮಿ ಕ್ಷೇತ್ರದಲ್ಲಿ ಸ್ವಲ್ಪ ಅಂತರದಿಂದ ಗೆದ್ದಿದ್ದೀರಿ. ಈಗ ಆರ್​ಎಸ್​ಎಸ್​​ ಬಗ್ಗೆ ಟೀಕಿಸಿದ್ರೆ ಚುನಾವಣೆಯಲ್ಲಿ ಸೋಲುತ್ತೀರಿ. ಕೇವಲ ಸೋನಿಯಾ ಗಾಂಧಿಯನ್ನ ಮೆಚ್ಚಿಸುವುದಕ್ಕೆ ಹೋಗಿ, ನೀವೇ ಚುನಾವಣೆಯಲ್ಲಿ ಸುಟ್ಟು ಹೋಗುತ್ತೀರಿ ಹುಷಾರ್ ಎಂದು ಸಿದ್ದರಾಮಯ್ಯಗೆ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ರಾಜ್ಯಸಭಾ ಚುನಾವಣೆಯಲ್ಲಿ ಮೂರನೇ ಅಭ್ಯರ್ಥಿ ಗೆಲ್ಲುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವರು, ನಮ್ಮ ಬಳಿ ಅಗತ್ಯ ಮತಗಳು ಇರೋದಕ್ಕೆ ಮೂರನೇ ಅಭ್ಯರ್ಥಿ ಹಾಕಿದ್ದೇವೆ. ನೂರಕ್ಕೂ ನೂರರಷ್ಟು ಮೂರು ಅಭ್ಯರ್ಥಿಗಳು ಆಯ್ಕೆ ಆಗುತ್ತಾರೆ. ಈಗಾಗಲೇ ಅಭ್ಯರ್ಥಿಗಳನ್ನು ಗೆಲ್ಲಿಸಲು ನಮ್ಮ ನಾಯಕರೆಲ್ಲರೂ ಸೇರಿ ಫೀಲ್ಡಿಗೆ ಇಳಿದಿದ್ದೇವೆ. ಇಲ್ಲಿ ಕಾಂಗ್ರೆಸ್, ಜೆಡಿಎಸ್ ಅನಾವಶ್ಯಕವಾಗಿ ಅಭ್ಯರ್ಥಿಗಳು ಹಾಕಿದ್ದಾರೆ. ಒಂದು ಕಡೆ ನಿತ್ಯ ಇಬ್ಬರು ಕಿತ್ತಾಡುತ್ತಾರೆ. ಇನ್ನೊಂದು ಕಡೆ ಅವರು ಇವರನ್ನು ಮತ ಕೇಳಿದ್ದೇವೆ ಅಂತಾರೆ. ಕೊನೆಗೆ ಇದು ಯಾವುದು ವರ್ಕೌಟ್ ಆಗಲ್ಲ ಎಂದು ಹೇಳಿದರು.

ಇದನ್ನೂ ಓದಿ
Image
Coffee Benefits: ಕಾಫಿ ಕುಡಿಯುವುದರಿಂದ ನಿಮ್ಮ ಜೀವಿತಾವಧಿ ಹೆಚ್ಚುತ್ತಂತೆ!
Image
ಎಷ್ಟೇ ಪ್ರಚಾರ ಮಾಡಿದ್ರೂ ಮಂಕಾಗಿದೆ ‘ಸಾಮ್ರಾಟ್​ ಪೃಥ್ವಿರಾಜ್​’ ಕಲೆಕ್ಷನ್​; 2ನೇ ದಿನದ ಗಳಿಕೆ ಎಷ್ಟು?
Image
Sanjana Anand Photos: ಸಂಜನಾ ಆನಂದ್; ‘ವಿಂಡೋ ಸೀಟ್’ ಬೆಡಗಿಯ ಕ್ಯೂಟ್​ ಫೋಟೋ ಆಲ್ಬಂ
Image
Autobiography: ಆಧುನಿಕ ಶಕುಂತಲಾ ಕಥನ; ಅಷ್ಟು ದೇಶಗಳನ್ನು ಸುತ್ತಲು ಧೈರ್ಯ ತುಂಬಿದ್ದೇ ನನ್ನ ಬಾಲ್ಯದ ‘ಕೆಜಿಎಫ್​ ಸಂಸ್ಕೃತಿ’

ಇದನ್ನೂ ಓದಿ: Sanjana Anand Photos: ಸಂಜನಾ ಆನಂದ್; ‘ವಿಂಡೋ ಸೀಟ್’ ಬೆಡಗಿಯ ಕ್ಯೂಟ್​ ಫೋಟೋ ಆಲ್ಬಂ

ನಿಜವಾಗಿಯೂ ಮತದಾನ ನಡೆಯೋದ ಓಟ್ ಮೇಲೆ. ಮತದಾನ ವ್ಯಾಲ್ಯೂ ಮೇಲೆ. ಎರಡನೇ ಪ್ರಾಶಸ್ತ್ಯ ಮತ, ಮೂರನೇ ಪ್ರಾಶಸ್ತ್ಯ ಮತ ಮೌಲ್ಯಗಳ ಮೇಲೆ ಚುನಾವಣೆ ನಡೆಯೋದು. ನಮಗೆ 122 ಮತಗಳು ಇವೆ. ಸುಲಭವಾಗಿ ಗೆಲ್ಲುವ ವಿಶ್ವಾಸ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Sun, 5 June 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್