ಸಚಿವ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ, ಮುನಿಸಿಕೊಂಡ ರಾಮಲಿಂಗಾರೆಡ್ಡಿ ಮನವೊಲಿಕೆಗೆ ಡಿಕೆ ಬ್ರದರ್ಸ್ ಕಸರತ್ತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟವೇನೋ ಭರ್ತಿಯಾಗಿದೆ. ಆದ್ರೆ, ಇದೀಗ ಖಾತೆ ಹಂಚಿಕೆ ಸಂಬಂಧ ಅಸಮಾಧಾನ ಸ್ಫೋಟಗೊಂಡಿದೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ, ಮುನಿಸಿಕೊಂಡ ರಾಮಲಿಂಗಾರೆಡ್ಡಿ ಮನವೊಲಿಕೆಗೆ ಡಿಕೆ ಬ್ರದರ್ಸ್ ಕಸರತ್ತು
ರಾಮಲಿಂಗಾರೆಡ್ಡಿ
Follow us
|

Updated on:May 28, 2023 | 3:41 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election Result 2023) ಹೊರ ಬಿದ್ದ 15 ದಿನಗಳ ಬಳಿಕ ಸಿದ್ದರಾಮಯ್ಯ  ಸಂಪುಟ (Siddaramaiah Cabinet)ಫುಲ್ ಫಿಲ್ ಆಗಿದೆ. ಸಿಎಂ, ಡಿಸಿಎಂ ಸೇರಿ ಒಟ್ಟು 34 ಸಚಿವರಿದ್ದಾರೆ. ಆದ್ರೆ, ಇದೀಗ ಸಚಿವರ ಖಾತೆ ಕ್ಯಾತೆ(Ministers portfolio) ಶುರುವಾಗಿದೆ. ಅದರಲ್ಲೂ ಹಿರಿಯ ನಾಯಕ ರಾಮಲಿಂಗರೆಡ್ಡಿ9ramalinga reddy) ಅವರು ಖಾತೆಗೆ ಸಂಬಂಧ ಮುನಿಸಿಕೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಹಾಗೂ ಸಂಸದ ಡಿಕೆ ಸುರೇಶ್ ಮನವೊಲಿಸುವ ಕಸರತ್ತು ನಡೆಸಿದ್ದಾರೆ.

ಇದನ್ನೂ ಓದಿ: ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾಯ್ತು, ಖಾತೆ ಹಂಚಿಕೆ ಕಸರತ್ತು ಶುರು: ಸೀನಿಯರ್ಸ್​ಗೆ ಪ್ರಬಲ ಖಾತೆ ಭಾಗ್ಯ!

ಹೌದು….ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮುಂದಾಗಿದ್ದಾರೆ. ಆದ್ರೆ, ರಾಮಲಿಂಗರೆಡ್ಡಿ ಅವರು ಸಾರಿಗೆ ಖಾತೆ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದು, ಬೇರೆ ಖಾತೆ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ ತಮಗೆ ಸಾರಿಗೆ ಇಲಾಖೆ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳುತ್ತಿರುವ ರಾಮಲಿಂಗರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಖಾತೆ ಸಂಬಂಧ ಮುನಿಸಿಕೊಂಡಿರುವ ರಾಮಲಿಂಗರೆಡ್ಡಿ ಅವರನ್ನು ಮನವೊಲಿಸಲು ಡಿಕೆ ಬ್ರದರ್ಸ್ ಮುಂದಾಗಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಯಿಂದಲೂ ಬೆಂಗಳೂರಿನ ಲಕ್ಕಸಂದ್ರ ಬಡಾವಣೆಯಲ್ಲಿರುವ ನಿವಾಸದಲ್ಲಿ  ರಾಮಲಿಂಗರೆಡ್ಡಿ ಜೊತೆಗೆ ಡಿಕೆ ಸುರೇಶ್ ನಿರಂತರ ಮಾತುಕತೆ ನಡೆಸಿದ್ದು, ಮನವೊಲಿಕೆಗೆ ಪ್ರಯತ್ನಿಸುತ್ತಿದ್ದಾರೆ. ಆದರೂ ರಾಮಲಿಂಗರೆಡ್ಡಿ ಮಾತ್ರ ಬಗ್ಗುತ್ತಿಲ್ಲ. ಇದರಿಂದ ಅಂತಿಮವಾಗಿ ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಫೀಲ್ಡ್​ಗೆ ಇಳಿದಿದ್ದು, ದಿಢೀರ್ ರಾಮಲಿಂಗರೆಡ್ಡಿ ನಿವಾಸಕ್ಕೆ ತೆರಳಿದ್ದು, ಮನವೊಲಿಕೆಗೆ ಯತ್ನಿಸುತ್ತಿದ್ದಾರೆ.

Published On - 3:30 pm, Sun, 28 May 23

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು