AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಮೀಟಿಂಗ್​: ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಿನ್ನೆ (ಜೂ.13) ರಂದು ನಡೆದ ಸಭೆಗೆ ಬಿಜೆಪಿ ಟೀಕೆ ಮಾಡಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇಂದು ಸ್ಪಷ್ಟನೆ ನೀಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಮೀಟಿಂಗ್​: ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ
ಸಚಿವ ರಾಮಲಿಂಗಾ ರೆಡ್ಡಿ
Follow us
ವಿವೇಕ ಬಿರಾದಾರ
|

Updated on: Jun 14, 2023 | 10:21 AM

ಬೆಂಗಳೂರು: ಬಿಬಿಎಂಪಿ (BBMP) ಚುನಾವಣೆ (Election) ತಯಾರಿ ಸಂಬಂಧ ಕರ್ನಾಟಕ ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ನೇತೃತ್ವದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಿನ್ನೆ (ಜೂ.13) ರಂದು ನಡೆದ ಸಭೆಗೆ ಬಿಜೆಪಿ (BJP) ಟೀಕೆ ಮಾಡಿದೆ. ಇದಕ್ಕೆ ಸ್ಪಷ್ಟನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ನಿನ್ನೆ ಕಾಫಿ ಕುಡಿದು ಹೋದೆವು ಅಷ್ಟೇ, ಯಾವುದೇ ಚರ್ಚೆ ಆಗಿಲ್ಲ. ಸಭೆ ಬಗ್ಗೆ ಯಾವುದೇ ಪೂರ್ವ ನಿಯೋಜನೆ ಆಗಿಲ್ಲ ಎಂದರು

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಕಾಂಗ್ರೆಸ್​​ ವಿರುದ್ಧ ರಾಜ್ಯಪಾಲರಿಗೆ ರಾಜ್ಯ ಬಿಜೆಪಿ ಘಟಕ ದೂರು ನೀಡಲು ಮುಂದಾಗಿರುವ ವಿಚಾರವಾಗಿ ಮಾತನಾಡಿದ ಅವರು ದೂರು ಕೊಡಲಿ ಬಿಡಿ, ಈಗ ಅವರು ವಿರೋಧ ಪಕ್ಷದಲ್ಲಿದ್ದಾರೆ. ಬಿಜೆಪಿ ನಾಯಕರು ಹಿಂದೆ ಮಾಡಿದ್ದನ್ನು ಮರೆತು ಹೋಗಿದ್ದಾರೆ. ನಾವು ಅಧಿಕಾರಕ್ಕೆ ಬಂದು ಇನ್ನೂ 20 ದಿನ ಆಗಿಲ್ಲ. ಬಿಜೆಪಿಯವರನ್ನು ಜನ ಎಲ್ಲಿ ಕೂರಿಸಬೇಕೋ ಅಲ್ಲಿ ಕೂರಿಸಿದ್ದಾರೆ. ಸರ್ಕಾರದ ತಪ್ಪುಗಳಿದ್ದರೆ ಬಿಜೆಪಿಯವರು ತಿದ್ದುವ ಕೆಲಸ ಮಾಡಲಿ ಎಂದರು.

ಇದನ್ನೂ ಓದಿ: ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಅಧಿಕಾರಿಗಳ ಸಭೆ: ಗವರ್ನರ್​ಗೆ ದೂರು ನೀಡಲು ಮುಂದಾದ ಬಿಜೆಪಿ

ಕಾಂಗ್ರೆಸ್​, ಬಿಜೆಪಿಯಿಂದ ಹೊಂದಾಣಿಕೆ ರಾಜಕಾರಣ ಆರೋಪ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್, ಬಿಜೆಪಿ‌ ಎಣ್ಣೆ ಸೀಗೆಕಾಯಿ ಇದ್ದಂತೆ. ಸಿ.ಟಿ ರವಿ ಸೋತಿದ್ದಾರೆ, ಹೊಟ್ಟೆ ಹುರಿಗೆ ಏನೋನೋ ಮಾತಾಡ್ತಾರೆ. ಬಿಜೆಪಿಯವರ ಬಳಿ ನಾವು ಯಾಕೆ ಒಪ್ಪಂದ ಮಾಡಿಕೊಳ್ಳೋಣ? ನಾವು ಜನರ ಜತೆ ಒಪ್ಪಂದ ಮಾಡಿಕೊಂಡಿದ್ದೇವೆ. ಬಿಜೆಪಿ ಮತ್ತು ಇತರೆ ಪಕ್ಷದ ಜತೆ ಯಾವ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದು ಬಿಜೆಪಿ ನಾಯಕರ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಟಾಂಗ್ ಕೊಟ್ಟಿದ್ದಾರೆ.

ರಣದೀಪ್​ ಸುರ್ಜೇವಾಲ ನೇರವಾಗಿ ಕರ್ನಾಟಕ ಸರ್ಕಾರ ನಡೆಸ್ತಿದ್ದಾರೆ: ಮಹೇಶ್​ ಟೆಂಗಿನಕಾಯಿ

ರಣದೀಪ್​ ಸುರ್ಜೇವಾಲ ನೇರವಾಗಿ ಕರ್ನಾಟಕ ಸರ್ಕಾರ ನಡೆಸ್ತಿದ್ದಾರೆ ಅನ್ನಿಸುತ್ತೆ. ಕರ್ನಾಟಕದ ಮುಖ್ಯಮಂತ್ರಿ ಆಗಲಿ, ಉಪಮುಖ್ಯಮಂತ್ರಿ ಆಗಲಿ ಸರ್ಕಾರ ನಡೆಸುತ್ತಿಲ್ಲ. ನೇರವಾಗಿ ಕಾಂಗ್ರೆಸ್ ಹೈಕಮಾಂಡ್ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ನಿನ್ನೆ ನಡೆದ ಶಾಂಗ್ರೀಲಾ ಹೊಟೆಲ್ ಘಟನೆ ನೋಡಿದರೇ, ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಫ್ರೀ ಹ್ಯಾಂಡ್ ಕೊಡುತ್ತಿಲ್ಲ. ಲೆಕ್ಕ ಸರಿ ಮುಟ್ಟಿಸುತ್ತಾರೋ ಇಲ್ವೋ ಅನ್ನೋದು ಕಾಂಗ್ರೆಸ್​ ಹೈಕಮಾಂಡ್​ಗೆ ಡೌಟ್ ಇರಬಹುದು. ಹಾಗಾಗಿ ಸುರ್ಜೇವಾಲಾ ಸಭೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಮಹೇಶ್​ ಟೆಂಗಿನಕಾಯಿ ವಾಗ್ದಾಳಿ ಮಾಡಿದ್ದಾರೆ.

ಮುಖ್ಯಮಂತ್ರಿ,ಉಪಮುಖ್ಯಮಂತ್ರಿ ಸಭೆ ಮಾಡಿದ್ರೆ ನಮಗೆ ಅಭ್ಯಂತರ ಇರಲಿಲ್ಲ. ಯಾವುದೇ ಅಧಿಕಾರ ಇಲ್ಲದ ಸುರ್ಜೇವಾಲಾ ಮೀಟಿಂಗ್ ಮಾಡಿದ್ದು ನೋಡಿದರೇ ಕರ್ನಾಟಕದ ಕಾಂಗ್ರೆಸ್ ಮೇಲೆ ಅವರಿಗೆ ವಿಶ್ವಾಸ ಇಲ್ಲ. ಕಾಂಗ್ರೆಸ್ ಮುಖ್ಯಮಂತ್ರಿಯಾಗಲಿ, ಉಪಮುಖ್ಯಮಂತ್ರಿಗಳಿಗಾಗಲಿ ಸ್ಥಾನ ಮಾನ ಕೊಡುತ್ತಿಲ್ಲ. ಸುರ್ಜೇವಾಲಾ ನೇರವಾಗಿ ಕರ್ನಾಟಕ ಸರ್ಕಾರ ನಡೆಸುತ್ತಿದ್ದಾರೆ ಅನಸತ್ತೆ ಎಂದು ಹೇಳಿದ್ದಾರೆ.

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ