AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟಿವಿಯಲ್ಲಿ ದೇವರನ್ನು ತೋರಿಸುತ್ತೆ, ನಾವು ದೇವಸ್ಥಾನಗಳಿಗೆ ಉಚಿತ ಪ್ರಯಾಣ ಕಲ್ಪಿಸಿದ್ದೇವೆ: ಸಂತೋಷ್ ಲಾಡ್

ಧಾರವಾಡದ ಕೆಸಿಡಿ ಮೈದಾನದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸಂತೋಷ್ ಲಾಡ್, ಗ್ಯಾರಂಟಿ ಯೋಜನೆಗಳನ್ನು ಹೊಗಳಿದರು. ಬಿಜೆಪಿಯವರು ಹಿಂದೂ ಹಾಗೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಈ‌ ಪದ ಬಳಕೆಗೆ ತಂದಿದ್ದು ಅಂಬೇಡ್ಕರ್ ಎಂದರು.

ಬಿಜೆಪಿ ಟಿವಿಯಲ್ಲಿ ದೇವರನ್ನು ತೋರಿಸುತ್ತೆ, ನಾವು ದೇವಸ್ಥಾನಗಳಿಗೆ ಉಚಿತ ಪ್ರಯಾಣ ಕಲ್ಪಿಸಿದ್ದೇವೆ: ಸಂತೋಷ್ ಲಾಡ್
ಧಾರವಾಡದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಸಚಿವ ಸಂತೋಷ್ ಲಾಡ್
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Feb 05, 2024 | 9:14 PM

Share

ಧಾರವಾಡ, ಫೆ.5: ಬಿಜೆಪಿಯವರು ಕೇವಲ ಟಿವಿಯಲ್ಲಿ ದೇವರನ್ನು ತೋರಿಸುತ್ತಾರೆ. ನಾವು (ಕಾಂಗ್ರೆಸ್) ದೇವಾಲಯಗಳಿಗೆ ಹೋಗಲು ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದ್ದೇವೆ ಎಂದು ಸಚಿವ ಸಂತೋಷ್ ಲಾಡ್ (Santosh Lad) ಹೇಳಿದರು. ಧಾರವಾಡದ ಕೆಸಿಡಿ ಮೈದಾನದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು (Guarantee Schemes) ಕೊಟ್ಟ ನಮ್ಮ ಸಿದ್ದರಾಮಯ್ಯ ಪರ ನೀವು ಇರಬೇಕೊ ಬೇಡವೋ? ಅದಕ್ಕೆ ತಾವು ಬೆಂಬಲ ಕೊಡಬೇಕು ಎಂದು ಫಲಾನುಭವಿಗಳಲ್ಲಿ ಮನವಿ ಮಾಡಿದರು.

ಧಾರವಾಡ ನಗರದ ಕೆಸಿಡಿ ಮೈದಾನದಲ್ಲಿ ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿದರು. ಸಮಾವೇಶದಲ್ಲಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಧಾರವಾಡ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದರು.

ಇದನ್ನೂ ಓದಿ: ವಿಜಯೇಂದ್ರ ಬದಲು ಯತೀಂದ್ರ ಹೆಸರು: ಭಾಷಣದುದ್ದಕ್ಕೂ ಸಚಿವ ಸಂತೋಷ್ ಲಾಡ್​ ಯಡವಟ್ಟು

ಬಳಿಕ ಮಾತನಾಡಿದ ಸಂತೋಷ್ ಲಾಡ್, ಬಿಜೆಪಿಯವರು ಕೇವಲ ಟಿವಿಯಲ್ಲಿ ದೇವರನ್ನು ತೋರಿಸುತ್ತಾರೆ. ನಮ್ಮ ಸರ್ಕಾರ ದೇವಸ್ಥಾನಗಳಿಗೆ ಉಚಿತವಾಗಿ ಹೋಗಲು ಅವಕಾಶ ಮಾಡಿಕೊಟ್ಟಿದೆ. ನಿಮಗೆ ಐದು ಕೆಜಿ ಅಕ್ಕಿ ಸಿಗುತ್ತಿದೆ, ಅಕ್ಕಿ ಬದಲಿಗೆ ದುಡ್ಡು ಬರುತ್ತಿದೆ. ಯಾರೂ ಹಸಿವಿನಿಂದ ಬಳಲಬಾರದು ಅಂತಾ ಕಾರ್ಯಕ್ರಮ ತಂದಿದ್ದೇವೆ. ಇದು ಬಿಜೆಪಿ ಗ್ಯಾರಂಟಿ ಅಲ್ಲ, ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ. 9 ವರ್ಷಗಳಿಂದ ಅವರು (ಬಿಜೆಪಿ) ಪ್ರಚಾರ ಮಾಡಲಿಲ್ಲ. ನಮ್ಮ ಗ್ಯಾರಂಟಿಗಳು ಬರುತಿದ್ದಂತೆ ಆ ಹೆಸರು ಕಾಪಿ ಮಾಡಿ ಮೋದಿ ಗ್ಯಾರಂಟಿ ಎನ್ನುತಿದ್ದಾರೆ. ಇತಿಹಾಸವನ್ನು ಸುಳ್ಳು ಹೇಳುವ ಕೆಲಸ ಆರಂಭವಾಗಿದೆ ಎಂದರು.

ಬಿಜೆಪಿಯವರು ಹಿಂದೂ ಹಾಗೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಈ‌ ಪದ ಬಳಕೆಗೆ ತಂದಿದ್ದು ಬೇರೆ ಯಾರೂ ಅಲ್ಲ ಡಾ.ಅಂಬೇಡ್ಕರ್. ಇವತ್ತು ಬಿಜೆಪಿಯವರು ಹಿಂದೂ ಎಂದು ಜೋರಾಗಿ ಹೇಳುತ್ತಾರೆ. ಆದರೆ ಕಾನೂನಾತ್ಮಕವಾಗಿ ಅದನ್ನು (ಹಿಂದೂ ಬಿಲ್) ತಂದಿದ್ದು ಬಿ.ಆರ್.ಅಂಬೇಡ್ಕರ್. ಬ್ರಾಹ್ಮಣ, ವೈಶ್ಯ, ಕ್ಷತ್ರೀಯ, ಶೂದ್ರರನ್ನು ಒಗ್ಗೂಡಿಸಿದ್ದು ಅಂಬೇಡ್ಕರ್ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ