AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತರು ಮೊದಲಿಂದಲೂ ಹೆಚ್ಚು ಬಿಜೆಪಿ ಪರ ಇದ್ದಾರೆ, ಅದೇನು ಹೊಸದಲ್ಲ; ಸಚಿವ ಸತೀಶ್ ಜಾರಕಿಹೊಳಿ

ಬಿಜೆಪಿಯವರ ಜತೆ ಹೆಚ್ಚಿನ ಲಿಂಗಾಯತರು ಇದ್ದಾರೆ ಅಷ್ಟೇ. ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷ ವಿಜಯೇಂದ್ರ ಅವರಿಗೆ ಮುಂದೆ ಹೆಚ್ಚಿನ ಹೋರಾಟಗಳಿವೆ. ಆ ಎಲ್ಲ ಜವಾಬ್ದಾರಿ ನಿರ್ವಹಿಸುತ್ತಾರೆ ಎಂದು ಅವರಿಗೆ ಆ ಸ್ಥಾನ ಕೊಟ್ಟಿದ್ದಾರೆ. ನೋಡೋಣ, ಮುಂದೆ ಲೋಕಸಭಾ ಚುನಾವಣೆ ಇದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಲಿಂಗಾಯತರು ಮೊದಲಿಂದಲೂ ಹೆಚ್ಚು ಬಿಜೆಪಿ ಪರ ಇದ್ದಾರೆ, ಅದೇನು ಹೊಸದಲ್ಲ; ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Nov 15, 2023 | 4:32 PM

Share

ಚಾಮರಾಜನಗರ, ನವೆಂಬರ್ 15: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲಿಂಗಾಯತ ಮತಗಳನ್ನು ಸೆಳೆಯುತ್ತಾರೆ ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ಲಿಂಗಾಯತರು (Lingayat) ಮೊದಲಿಂದಲೂ ಹೆಚ್ಚು ಬಿಜೆಪಿ ಪರ ಇದ್ದಾರೆ. ಅದೇನು ಹೊಸದಲ್ಲ ಎಂದಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಲಿಂಗಾಯತರು ಮೊದಲಿಂದಲೂ ಹೆಚ್ಚು ಬಿಜೆಪಿ ಪರ ಇದ್ದಾರೆ. ನಮ್ಮ ಜತೆ ಇರುವವರು ಇದ್ದಾರೆ. ಅವರು ಬಂದ ತಕ್ಷಣ ಏನು ವ್ಯತ್ಯಾಸ ಆಗಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯವರ ಜತೆ ಹೆಚ್ಚಿನ ಲಿಂಗಾಯತರು ಇದ್ದಾರೆ ಅಷ್ಟೇ. ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷ ವಿಜಯೇಂದ್ರ ಅವರಿಗೆ ಮುಂದೆ ಹೆಚ್ಚಿನ ಹೋರಾಟಗಳಿವೆ. ಆ ಎಲ್ಲ ಜವಾಬ್ದಾರಿ ನಿರ್ವಹಿಸುತ್ತಾರೆ ಎಂದು ಅವರಿಗೆ ಆ ಸ್ಥಾನ ಕೊಟ್ಟಿದ್ದಾರೆ. ನೋಡೋಣ, ಮುಂದೆ ಲೋಕಸಭಾ ಚುನಾವಣೆ ಇದೆ. ಅದಾದ ಮೇಲೆ ಫೈನಲ್ ಮ್ಯಾಚ್, 2028 ರ ವಿಧಾನಸಭಾ ಚುನಾವಣೆ ಇದೆ. ಅವರು ಯಾವ ರೀತಿ ಸಂಘಟನೆ ಮಾಡ್ತಾರೆ, ಪಕ್ಷ ಯಾವರೀತಿ ಸಹಕಾರ ನೀಡುತ್ತಾರೆ ಕಾದು ನೋಡಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಸಿಎಂ ಬದಲಾವಣೆ ಇಲ್ಲ: ಸತೀಶ್ ಜಾರಕಿಹೊಳಿ

ಸಿಎಂ ಬದಲಾವಣೆ ವಿಚಾರ ಮುಗಿದು ಹೋದ ಕಥೆ. ಆ ಬಗ್ಗೆ ಪದೇ ಪದೇ ಹೇಳೋದು ಏನು ಇಲ್ಲ. ಸಿಎಂ ಬದಲಾವಣೆ ಅಂತೂ ಇಲ್ಲವೇ ಇಲ್ಲ. ಸಿಎಂ ಇದಾರೆ, ಸಿದ್ದರಾಮಯ್ಯ ಗಟ್ಟಿಯಾಗಿದ್ದಾರೆ ಅಷ್ಟೇ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆ ಮೂಲಕ ಸಿಎಂ ಬದಲಾವಣೆ ಇಲ್ಲ ಎಂಬ ಸಂದೇಶವನ್ನು ಡಿಕೆ ಶಿವಕುಮಾರ್ ಬಣಕ್ಕೆ ರವಾನಿಸಿದ್ದಾರೆ.

ಜೆಡಿಎಸ್, ಬಿಜೆಪಿ ನಾಯಕರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದೆಲ್ಲಾ ಸಿಎಂ, ಡಿಸಿಎಂ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ನಮ್ಮ ಹಂತದಲ್ಲಿ ಅದೆಲ್ಲ ಏನಿಲ್ಲ. ಜಿಟಿ ದೇವೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಜೆಡಿಎಸ್ ಸೇರುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಮುದ್ರಕ್ಕೆ ಗಂಗಾ ಜಲವೂ ಬರುತ್ತೆ, ಚರಂಡಿ ನೀರೂ ಬರುತ್ತೆ: ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಕೆಎನ್​ ರಾಜಣ್ಣ ಅಸಮಾಧಾನ

ಬಿಜೆಪಿ ನಾಯಕ ವಿ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎನ್ನುವ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅವೆಲ್ಲ ನಡೆಯುತ್ತಿವೆ, ಕಾದು ನೋಡೋಣ ಎಂದು ಹೇಳಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More