AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Satyendra Jain Case: ಸಚಿವ ಸತ್ಯೇಂದ್ರ ಜೈನ್ ಅವರಿಗೆ ಹವಾಲಾ ಮೂಲಕ ಹಣ ಹೋಗಿದೆ : ಸಚಿವೆ ಸ್ಮೃತಿ ಇರಾನಿ ಆರೋಪ

ಸಚಿವ ಸತ್ಯೇಂದ್ರ ಜೈನ್, ಕುಟುಂಬದ ನಕಲಿ ಕಂಪನಿಗಳಿವೆ. ಇವುಗಳ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಹವಾಲಾ ಮೂಲಕ ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಹಣ ಹೋಗಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

Satyendra Jain Case: ಸಚಿವ ಸತ್ಯೇಂದ್ರ ಜೈನ್ ಅವರಿಗೆ ಹವಾಲಾ ಮೂಲಕ ಹಣ ಹೋಗಿದೆ : ಸಚಿವೆ ಸ್ಮೃತಿ ಇರಾನಿ ಆರೋಪ
ಸತ್ಯಂದ್ರ ಜೈನ್ Image Credit source: India Today
TV9 Web
| Edited By: |

Updated on:Jun 01, 2022 | 1:36 PM

Share

ನವದೆಹಲಿ: ಸಚಿವ ಸತ್ಯೇಂದ್ರ ಜೈನ್ (Satyendra Jain), ಕುಟುಂಬದ ನಕಲಿ ಕಂಪನಿಗಳಿವೆ. ಇವುಗಳ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಹವಾಲಾ ಮೂಲಕ ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಹಣ ಹೋಗಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ (Smriti Irani) ಆರೋಪಿಸಿದ್ದಾರೆ. ಭ್ರಷ್ಟಾಚಾರ ಅಂದರೇ, ದೇಶದ್ರೋಹ ಇದ್ದಂತೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಅವರ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಭ್ರಷ್ಟಾಚಾರ ಮಾಡಿದ್ದಾರೆ. ಅರವಿಂದ್ ಕೇಜ್ರಿವಾಲ್, ಸತ್ಯೇಂದ್ರ ಜೈನ್ ಗೆ ಕ್ಲೀನ್ ಚಿಟ್ ನೀಡಿದ್ದಾರೆ.  ಅರವಿಂದ್ ಕೇಜ್ರಿವಾಲ್ ಜಡ್ಜ್ ರೀತಿಯಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejiriwal)  ಅವರಿಗೆ ಪ್ರಶ್ನಿಸಿದ್ಧಾರೆ.

ಇದನ್ನು ಓದಿ: ಜೊಕೊವಿಕ್​ಗೆ ಸೋಲುಣಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ನಡಾಲ್

ಸತ್ಯೇಂದ್ರ ಜೈನ್ ರಿಂದ ನಾಲ್ಕು ನಕಲಿ ಕಂಪನಿಗಳ ಮೂಲಕ 16.39 ಕೋಟಿ ಹಣ ಆಕ್ರಮ ವರ್ಗಾವಣೆಯಾಗಿದೆ.  ಸತ್ಯೇಂದ್ರ ಜೈನ್ ಘೋಷಿಸಿದಂತೆ 16.39 ಕೋಟಿ ರೂಪಾಯಿ ಅಘೋಷಿತ ಆದಾಯ ಎಂದು 2016 ರಲ್ಲಿ ಘೋಷಣೆ ಮಾಡಿದ್ದಾರೆ. ಇದು‌ ಸತ್ಯವೇ? ಎಂದು ಕೇಜ್ರಿವಾಲ್ ಗೆ  ಸಚಿವೆ ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಎಚ್ಚರ ಡಿಕೆಶಿ ಎಚ್ಚರ: ಬಿಜೆಪಿಯಿಂದ ಕಾಂಗ್ರೆಸ್ ಬಣ ರಾಜಕೀಯದ ವ್ಯಂಗ್ಯ, ಸರಣಿ ಟ್ವೀಟ್

16.39 ಕೋಟಿ ರೂಪಾಯಿಗೆ ಸತ್ಯೇಂದ್ರ ಜೈನ್ ಮಾಲೀಕರೆಂದು ಅಂಕುಶ್ ಜೈನ್ ಹೇಳಿದ್ದಾರೆ. ದೆಹಲಿ‌ ಹೈಕೋರ್ಟ್, 2019 ಐ.ಟಿ. ಕಮೀಷನರ್ ಅವರ ಆದೇಶ ಸತ್ಯೇಂದ್ರ ಜೈನ್ ಅವರೇ ಹಣದ ಮಾಲೀಕರು ಎಂದು ಹೇಳಿರುವುದನ್ನು ಎತ್ತಿ ಹಿಡಿದಿದೆ. ನಕಲಿ ಕಂಪನಿಗಳನ್ನು ಸತ್ಯೇಂದ್ರ ಜೈನ್ ನಿರ್ವಹಣೆ ಮಾಡುತ್ತಿದ್ದರು. ಭ್ರಷ್ಟಾಚಾರ ತಡೆ ಕಾಯಿದೆಯಡಿ ಸತ್ಯೇಂದ್ರ ಜೈನ್ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಸಚಿವೆ  ವಾಗ್ದಾಳಿ ನಡೆಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:36 pm, Wed, 1 June 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ