AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪನವರ ಫೋಟೊ ಮಿಸ್ ಆಗಿರುವುದು ನನಗೂ ನೋವು ತಂದಿದೆ; ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟೀಕರಣ

ಆದರೆ ಈ ಜಾಹೀರಾತಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಫೋಟೊ ಇದ್ದಿರಲಿಲ್ಲ. ಈ ಕಾರಣದಿಂದ ಜಾಹಿರಾತು ಕರ್ನಾಟಕದ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು.

ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪನವರ ಫೋಟೊ ಮಿಸ್ ಆಗಿರುವುದು ನನಗೂ ನೋವು ತಂದಿದೆ; ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟೀಕರಣ
ಸಚಿವೆ ಶಶಿಕಲಾ ಜೊಲ್ಲೆ
TV9 Web
| Edited By: |

Updated on:Jul 20, 2021 | 8:13 PM

Share

ರಾಷ್ಟ್ರೀಯ ಆಂಗ್ಲ ಮಾಧ್ಯಮಕ್ಕೆ ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಫೋಟೋ ಹಾಕದಿರುವುದು ಉದ್ದೇಶಪೂರ್ವಕ ಕೆಲಸ ಅಲ್ಲ. ಇದು ಜಾಹೀರಾತು ಏಜೆನ್ಸಿ ಕಡೆಯಿಂದ ಆಗಿರುವ ಪ್ರಮಾದ. ಇನ್ನು ಮುಂದೆ ಹೀಗೆ ಆಗದಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪರ ಫೋಟೋ ಮಿಸ್ ಆಗಿರುವುದಕ್ಕೆ ಗೊಂದಲ ಬೇಡ. ಜಾಹೀರಾತಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಚಿತ್ರ ಪ್ರಕಟಿಸದಿರುವುದು ನನಗೂ ಬೇಸರ ತರಿಸಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. 

ನಿನ್ನೆ ಸೋಮವಾರ ರಾಷ್ಟ್ರೀಯ ಆಂಗ್ಲ ದಿನಪತ್ರಿಕೆಯ ದೆಹಲಿ ಆವೃತ್ತಿಯಲ್ಲಿ ಸಿಎಂ ಯಡಿಯೂರಪ್ಪ ಸಂಪುಟದ ಸಚಿವೆ ಶಶಿಕಲಾ ಜೊಲ್ಲೆ ಅವರು With best wishes from Jolle Group of Companies  ಎಂಬ ಜಾಹೀರಾತು ನೀಡಿದ್ದಾರೆ. ಅದರಲ್ಲಿ ಸಹಕಾರ ಖಾತೆ ಸೃಷ್ಟಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ವಂದನೆಗಳನ್ನು ತಿಳಿಸುತ್ತಾ, ಸಹಕಾರ ಸಚಿವ ಸ್ಥಾನ ಪಡೆದ ಅಮಿತ್​ ಶಾ ಅವರನ್ನು ಅಭಿನಂದಿಸಿದ್ದಾರೆ. ಜೊತೆಗೆ ಕರ್ನಾಟಕಕ್ಕೆ 6 ಸಚಿವ ಸ್ಥಾನಗಳನ್ನುನೀಡಿ, ರಾಜ್ಯಕ್ಕೆ ಗರಿಷ್ಠ ಸ್ಥಾನಮಾನ ನೀಡಿದ್ದಕ್ಕೆ ಥ್ಯಾಂಕ್ಸ್​ ಅಂದಿದ್ದಾರೆ. ಇದರ ಜೊತೆಗೆ ಇಡೀ ಪುಟದಲ್ಲಿ ಹಲವು ಬಿಜೆಪಿ ನಾಯಕರ ಫೋಟೋಗಳು ರಾರಾಜಿಸಿವೆ. ಆದರೆ ಈ ಜಾಹೀರಾತಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಫೋಟೊ ಇದ್ದಿರಲಿಲ್ಲ. ಈ ಕಾರಣದಿಂದ ಜಾಹೀರಾತು ಕರ್ನಾಟಕದ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು.

ಇದನ್ನೂ ಓದಿ: 

ದೆಹಲಿ ಆಂಗ್ಲ ಪತ್ರಿಕೆಯಲ್ಲಿ ರಾಜ್ಯ ಬಿಜೆಪಿ ಸಚಿವೆಯಿಂದ ಮುಖಪುಟ ಜಾಹೀರಾತು! ಆದ್ರೆ ಯಡಿಯೂರಪ್ಪ ಫೋಟೋ ಮಾಯ! ಏನಿದರ ಮಾಯೆ?

ಸಿದ್ದರಾಮಯ್ಯ, ಕುಮಾರಸ್ವಾಮಿ ಆಪ್ತ ಸಹಾಯಕರು ಮತ್ತು ದೇವೇಗೌಡರ ಗನ್ ಮ್ಯಾನ್ ಫೋನ್ ಕದ್ದಾಲಿಕೆ ಮಾಡಲಾಗಿದೆ: ಕಾಂಗ್ರೆಸ್ ಗಂಭೀರ ಆರೋಪ

(Minister Shashikala Jolle clarifies about advertisement that missed CM Yediyurappa photo)

Published On - 8:11 pm, Tue, 20 July 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!